7:40 AM Wednesday24 - September 2025
ಬ್ರೇಕಿಂಗ್ ನ್ಯೂಸ್
Kodagu | ವಿರಾಜಪೇಟೆ, ಕುಶಾಲನಗರ ಮತ್ತು ಹುದಿಕೇರಿ ಆಸ್ಪತ್ರೆ ಮೇಲ್ದರ್ಜೆಗೆ: ಆರೋಗ್ಯ ಸಚಿವ… ಪಂಚ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಮಹಿಳೆಯರ ಬದುಕು ಸುಧಾರಣೆ: ಮಹಿಳಾ ದಸರಾ ಉದ್ಘಾಟಿಸಿ… ಪೊನ್ನಂಪೇಟೆ ಕೋಣಗೇರಿಯಲ್ಲಿ ಸೈನಿಕ ಪತಿಯಿಂದಲೇ ಪತ್ನಿಗೆ ಗುಂಡು: ಮೈಸೂರಿಗೆ ರವಾನೆ ಗೋಣಿಕೊಪ್ಪಲು ಬಿಟ್ಟಂಗಾಲ ಮುಖ್ಯರಸ್ತೆಯಲ್ಲಿ ಖಾಸಗಿ ಬಸ್ – ಜೀಪು ಅಪಘಾತ: ಅದೃಷ್ಟವಶಾತ್ ಎಲ್ಲರೂ… Kodagu | ಐತಿಹಾಸಿಕ ಮಡಿಕೇರಿ ದಸರಾಕ್ಕೆ ಚಾಲನೆ: 4 ಶಕ್ತಿ ದೇವತೆಗಳಿಗೆ ವಿಶೇಷ… ಮುಂದಿನ ಒಲಂಪಿಕ್ಸ್ ಪದಕ ವಿಜೇತರಿಗೆ ಸರ್ಕಾರದಿಂದ 6 ಕೋಟಿ ನಗದು ಬಹುಮಾನ: ಮುಖ್ಯಮಂತ್ರಿ… ಜಿಎಸ್ ಟಿ ಜಾರಿ ಮಾಡಿದ್ದೂ ಮೋದಿ, ಜಿಎಸ್ ಟಿ ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ,… ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ

ಇತ್ತೀಚಿನ ಸುದ್ದಿ

ಸರಕಾರದ ಆದೇಶ ತುಳುನಾಡಿನ ಜನತೆಯ ಹೋರಾಟದ ಫಲ; ಟೋಲ್ ಸಂಗ್ರಹ ಸ್ಥಗಿತಗೊಳ್ಳುವವರಗೆ ಧರಣಿ: ಮುನೀರ್ ಕಾಟಿಪಳ್ಳ

14/11/2022, 22:04

ಸುರತ್ಕಲ್ (reporterkarnataka.com): ಸುಮಾರು 6 ವರ್ಷಗಳ ಸತತ ಹೋರಾಟದ ನಂತರ ಸುರತ್ಕಲ್ ಟೋಲ್ ಗೇಟ್ ಮುಚ್ಚಲು ಹೆದ್ದಾರಿ ಪ್ರಾಧಿಕಾರ ಆದೇಶ ಹೊರಡಿಸಿದೆ ಎಂದು ತಿಳಿದು ಬಂದಿದೆ. ಇದು ದ‌ಕ್ಷಿಣ ಕ‌ನ್ನಡ, ಉಡುಪಿ ಜಿಲ್ಲೆಯ ಸಮಸ್ತ ಜನತೆಯ ಒಗ್ಗಟ್ಟಿನ ಹೋರಾಟದ ಫಲ ಎಂದು ಸುರತ್ಕಲ್ ಟೋಲ್ ವಿರೋಧಿ ಹೋರಾಟ ಸಮಿತಿಯ ಸಂಚಾಲಕ ಮುನೀರ್ ಕಾಟಿಪಳ್ಳ ಹೇಳಿದರು.

ಜನತೆಯ ಅಖಂಡ ಬೆಂಬಲದೊಂದಿಗೆ ಹೋರಾಟ ಸಮಿತಿ ಕಳೆದ ಮೂರು ತಿಂಗಳಿಂದ ನಿರ್ಣಾಯಕ ಹೋರಾಟಗಳನ್ನು ಸಂಘಟಿಸಿತ್ತು. ಅಂತಹ ದಣಿವರಿಯದ ಪ್ರಯತ್ನಗಳು ಇಂದು ಗೆಲುವಿನ ಸನಿಹಕ್ಕೆ ತಲುಪಿಸಿದೆ. ಹಗಲು ರಾತ್ರಿ ಧರಣಿ ನಿರತವಾಗಿರುವ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿಗೆ ಟೋಲ್ ಗೇಟ್ ತೆರವು ಕುರಿತು ಈವರೆಗೂ ಜಿಲ್ಲಾಡಳಿತದ ಕಡೆಯಿಂದ ಯಾವುದೆ ಅಧಿಕೃತ ಮಾಹಿತಿ ಬಂದಿಲ್ಲ. ಅಧಿಕೃತ ಮಾಹಿತಿ, ಟೋಲ್ ಗೇಟ್ ನಲ್ಲಿ ಸಂಗ್ರಹ ನಿಲ್ಲುವವರೆಗೂ ಧರಣಿ ಮುಂದುವರಿಯಲಿದೆ. ಟೋಲ್ ಸಂಗ್ರಹ ಸ್ಥಗಿತಗೊಂಡ ತರುವಾಯವಷ್ಟೆ ಧರಣಿ ಸ್ಥಗಿತಗೊಳ್ಳಲಿದೆ ಎಂದರು.

ಸಂಸದ ನಳಿನ್ ಕುಮಾರ್ ಕಟೀಲ್ ಪ್ರಧಾನಿ ಹಾಗೂ ಸಾರಿಗೆ ಸಚಿವರಿಗೆ ಧನ್ಯವಾದ,ಸಲ್ಲಿಸಿದ್ದಾರೆ. ಬೆಂಬಲಿಗರು ಸಂಸದರಿಗೆ ಧನ್ಯವಾದ ಸಲ್ಲಿಸುತ್ತಿದ್ದಾರೆ. ನಿಜಕ್ಕೂ ಧನ್ಯವಾದ ಸಲ್ಲಬೇಕಾಗಿರುವುದು ಹೋರಾಟದ ಬೆನ್ನೆಲುಬಾಗಿ ನಿಂತ ತುಳುನಾಡಿನ ಸಮಸ್ತ ಜನತೆ ಹಾಗೂ ಸಹಭಾಗಿ ಸಮಾನ ಮನಸ್ಕ ಸಂಘಟನೆಗಳಿಗೆ. ಅದೇ ಸಂದರ್ಭ ಸುರತ್ಕಲ್ ಟೋಲ್ ಗೇಟ್ ನಲ್ಲಿ ಆರು ವರ್ಷಗಳಿಂದ ಸತತವಾಗಿ ಸರಿಸುಮಾರು ಮುನ್ನೂರು ಕೋಟಿ ರೂಪಾಯಿ ನಿಯಮಕ್ಕೆ ವಿರುದ್ದವಾಗಿ ಸಂಗ್ರಹಿಸಲಾಗಿದೆ. ಸಂಸದರು, ಶಾಸಕರುಗಳು ಟೋಲ್ ತೆರವಿನ ದೀರ್ಘ ವಿಳಂಬಕ್ಕಾಗಿ ತುಳುನಾಡಿನ ಜನತೆಯ ಮುಂದೆ ಈಸಂದರ್ಭ ಕನಿಷ್ಟ ವಿಷಾಧವನ್ನಾದರು ವ್ಯಕ್ತಪಡಿಸಬೇಕು ಎಂದು ಹೋರಾಟ ಸಮಿತಿ ಆಗ್ರಹಿಸುತ್ತದೆ.

ಇತ್ತೀಚಿನ ಸುದ್ದಿ

ಜಾಹೀರಾತು