12:32 PM Thursday2 - April 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ…

ಇತ್ತೀಚಿನ ಸುದ್ದಿ

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನಲ್ಲಿ ಕೊಲಾಜ್ ಸ್ಪರ್ಧೆ

15/11/2022, 11:34

ಪುತ್ತೂರು(reporterkarnataka.com): ಪುತ್ತೂರು ಸಂತ ಫಿಲೋಮಿನಾ ಕಾಲೇಜಿನ ಆಂಟಿ ಹ್ಯುಮನ್ ಟ್ರಾಫಿಕಿಂಗ್ ಕ್ಲಬ್ ಹಾಗೂ ಇಂಗ್ಲೀಷ್ ವಿಭಾಗಗಳ ಸಂಯುಕ್ತ ಆಶ್ರಯದಲ್ಲಿ ಮಾನವ ಕಳ್ಳ ಸಾಗಣೆ ಮತ್ತು ಅದನ್ನು ತಡೆಗಟ್ಟುವ ಕ್ರಮಗಳ ವಿಷಯದ ಮೇಲೆ ಕೊಲ್ಯಾಜ್ ಸ್ಪರ್ಧೆಯನ್ನು ಆಯೋಜಿಸಲಾಯಿತು.

ಭಾರತೀಯ ದಂಡಸಂಹಿತೆಯ ಪ್ರಕಾರ ಶಿಕ್ಷಾರ್ಹ ಅಪರಾಧವಾದ ಮಾನವ ಕಳ್ಳಸಾಗಣೆ ಹಾಗೂ ಮಾನವ ತನ್ನ ಸಹಜೀವಿಗಳೊಡನೆ ನಡೆಸುವ ಅಮಾನವೀಯ ಕೃತ್ಯಗಳ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವ ಸಲುವಾಗಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಸ್ಪರ್ಧೆಯನ್ನು ಉದ್ಘಾಟಿಸಿದ ಪ್ರಾಂಶುಪಾಲ ಡಾಅಂತೋನಿ ಪ್ರಕಾಶ್ ಮೊಂತೆರೋ, ಮಾತನಾಡಿ “ಮಾನವ ಕಳ್ಳ ಸಾಗಣೆಯು ಒಂದು ಜ್ವಲಂತ ಸಮಸ್ಯೆಯಾಗಿದೆ. ಇದನ್ನು ತಡೆಗಟ್ಟುವಲ್ಲಿ ವಿದ್ಯಾವಂತರಾದ ನಮ್ಮೆಲ್ಲರ ಪಾತ್ರ ಮಹತ್ವದ್ದಾಗಿದೆ, ನಾವು ಇಂತಹ ಸಮಸ್ಯೆಗಳ ಬಗ್ಗೆ ಎಚ್ಚೆತ್ತುಕೊಂಡು ಇತರರಲ್ಲೂ ಅರಿವು ಮೂಡಿಸಿದಲ್ಲಿ ಈ ನಮಸ್ಯೆಯನ್ನು ತಡೆಗಟ್ಟಬಹುದು” ಎಂದು ಹೇಳಿದರು. ವೇದಿಕೆಯಲ್ಲಿ ಕಾಲೇಜಿನ ಉಪ ಪ್ರಾಂಶುಪಾಲ ಪ್ರೊ. ಗಣೇಶ್ ಭಟ್ ಹಾಗೂ ಕಾಲೇಜಿನ ಆಂತರಿಕ ಗುಣಮಟ್ಟ ಭರವಸೆ ಕೋಶದ ಸಂಯೋಜಕರೂ ಕಾಲೇಜಿನ ಉಪಪ್ರಾಂಶುಪಾಲರೂ ಆದ ಡಾ. ಎ.ಪಿ ರಾಧಾಕೃಷ್ಣ ಉಪಸ್ಥಿತರಿದ್ದರು.

ಕಾಲೇಜಿನ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಅನುಶ್ರೀ ಪ್ರಾರ್ಥಿಸಿದರು. ಕಾಲೇಜಿನ ಆಂಟಿ ಹ್ಯುಮನ್ ಟ್ರಾಫಿಟಿಂಗ್ ಕ್ಲಬ್‌ನ ಸದಸ್ಯ ಸಂಚಾಲಕಿ ಭಾರತಿ ಏಸ್. ರೈ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿದ್ಯಾರ್ಥಿ ಸಂಘದ ಅಧ್ಯಕ್ಷ ಮಹಮ್ಮದ್ ಆಶಿಕ್ ವಂದಿಸಿದರು. ಜೊತೆ ಕಾರ್ಯದರ್ಶಿ ಶಿವಾನಿ ಕಾರ್ಯಕ್ರಮ ನಿರೂಪಿಸಿದರು.

ಸ್ಪರ್ಧೆಯಲ್ಲಿ ತಲಾ ಆರು ಮಂದಿ ವಿದ್ಯಾರ್ಥಿಗಳನ್ನೊಳಗೊಂಡ 15 ತಂಡಗಳು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು