9:45 AM Wednesday17 - September 2025
ಬ್ರೇಕಿಂಗ್ ನ್ಯೂಸ್
Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;…

ಇತ್ತೀಚಿನ ಸುದ್ದಿ

ಕ್ರಮಬದ್ಧವಾದ ಜೀವನ ಶೈಲಿ ಮಧುಮೇಹವನ್ನು ತಡೆಗಟ್ಟ ಬಹುದು: ಡಾ. ನಜೀರ್ ಅಹಮದ್

16/11/2022, 12:22

ಪುತ್ತೂರು(reporterkarnataka.com): ಸಂತ ಫಿಲೋಮಿನಾ ಕಾಲೇಜಿನ ಯುವ ರೆಡ್‌ ಕ್ರಾಸ್‌ ಘಟಕ, ಕಲ್ಲಾರೆಯ ಡಯಾಬಿಟಿಸ್ ಸಂಸ್ಥೆ ಹಾಗೂ ಫಾದರ್ ಪತ್ರಾವೋ ಆಸ್ಪತ್ರೆ ಗಳ ಸಂಯುಕ್ತ ಆಶ್ರಯದಲ್ಲಿ ಮಧುಮೇಹ ದಿನದ ಅಂಗವಾಗಿ ಮಧುಮೇಹದ ಬಗ್ಗೆ ಅರಿವು ಮೂಡಿರುವ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಡಯಾಬಿಟಿಸ್‌ ಸೆಂಟರ್‌ನ ವೈದ್ಯ ನಜೀರ್ ಅಹ್ಮದ್ ಮಾತನಾಡಿದರು.

ಇತ್ತೀಚಿನ ದಿನಗಳಲ್ಲಿ ಮಧುಮೇಹ ಕಾಯಿಲೆಗೊಳಗಾಗುವವರ ಸಂಖ್ಯೆಯು ಗಣನೀಯವಾಗಿ ಹೆಚ್ಚಾಗಿದೆ. ಅಸಮರ್ಪಕ ಜೀವನಶೈಲಿ, ಮಾನಸಿಕ ಒತ್ತಡ ಹಾಗೂ ಅಸಂತುಲಿತ ಆಹಾರ ಮುಂತಾದ ಕಾರಣಗಳಿಂದ ಹೆಚ್ಚಾಗಿ ಡಯಾಬಿಟಿಸ್‌ ಕಂಡು ಬರುತ್ತದೆ. ಕ್ರಮಬದ್ಧ ಜೀವನ ಶೈಲಿ, ನಿಯಮಿತವಾದ ವ್ಯಾಯಾಮ ಮಧುಮೇಹವನ್ನು ನಿಯಂತ್ರಿಸಲು ಸಹಕಾರಿ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ವಂ.ಡಾ. ಅಂತೋನಿ ಪ್ರಕಾಶ್ ಮೊಂತೆರೊ ಮಾತನಾಡಿ, ಪ್ರತಿಯೊಬ್ಬ
ವ್ಯಕ್ತಿಗೂ ಡಯಾಬಿಟ‌ನ ಬಗ್ಗೆ ಅರಿವು ಇರಬೇಕು. ನಿಯಮಿತವಾಗಿ ತಪಾಸಣೆಗೊಳಪಟ್ಟರೆ ಡಯಾಬಿಟಿಸ್‌ ಬರುವ ಸಾಧ್ಯತೆಗಳನ್ನು ಕಡಿಮೆ ಮಾಡಬಹುದು. ಅಗತ್ಯ ಮುಂಜಾಗರುಕತಾ ಕ್ರಮಗಳನ್ನು ಕೈಗೊಳ್ಳಿ ಎಂದು ಹೇಳಿದರು.



ಕಾಲೇಜಿನ ಉಪಪ್ರಾಂಶುಪಾಲ, ಆಂತರಿಕ ಗುಣಮಟ್ಟ ಭರವಸೆ ಕೋಶದ ಸಂಯೋಜಕ ಡಾ. ಎ.ಪಿ. ರಾಧಾಕೃಷ್ಣ ಉಪಸ್ಥಿತರಿದ್ದರು.
ಪ್ರೇಮ್ ಮತ್ತು ಬಳಗ ಪ್ರಾರ್ಥಿಸಿದರು, ಡಾ.ಮಾಲಿನಿ ಸ್ವಾಗತಿಸಿ, ನಿರೂಪಿಸಿದರು. ಕಾಲೇಜಿನ ಯುವ ರೆಡ್‌ ಕ್ರಾಸ್ ಘಟಕದ ಸಂಚಾಲಕ ಡಾ. ಡಿಂಪಲ್ ಫೆರ್ನಾಂಡಿಸ್ ವಂದಿಸಿದರು. ಭಾ | ಪತ್ರಾವೋ ಆಸ್ಪತ್ರೆಯ ವತಿಯಿಂದ ವಿದ್ಯಾರ್ಥಿಗಳ ಹಾಗೂ ಕಾಲೇಜು ಸಿಬ್ಬಂದಿಗಳ ಆರೋಗ್ಯ ತಪಾಣಿಯನ್ನು ಮಾಡಲಾಯಿತು. ನಂತರ ಡಾ. ನಜೀರ್ ಅಹ್ಮದ್ ರವರು ಸಮಾಲೋಚನೆ ನಡೆಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು