7:19 AM Thursday10 - July 2025
ಬ್ರೇಕಿಂಗ್ ನ್ಯೂಸ್
ಮಂಗಳೂರಿನ ಪೆಟ್ರೋಲಿಯಂ ಕಂಪನಿಗಳ ಸಂಬಂಧಿತ ದುರಂತ ನಿರ್ವಹಣೆಗೆ ಅಗ್ನಿಶಾಮಕ ಇಲಾಖೆಯ ಸಶಕ್ತಗೊಳಿಸಲಾಗಿದೆ: ಗೃಹ… ಕೊಪ್ಪ ಮೊರಾರ್ಜಿ‌ ವಸತಿ ಶಾಲೆಯ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ: ಪ್ರಿನ್ಸಿಪಾಲ್, ವಾರ್ಡನ್ ಅಮಾನತು:… ಕೊಲೆ ಪ್ರಕರಣ: ಯೆಮೆನ್‌ನಲ್ಲಿ ಮರಣ ದಂಡನೆಗೆ ಒಳಗಾಗಿರುವ ಕೇರಳದ ನರ್ಸ್ ನಿಮಿಷಾಗೆ ಜುಲೈ… ನಂಜ ಈ ಪಣಿ ಮಾಡಿತಾಮಿ ಸಾರೂ: ವಿರಾಜಪೇಟೆ ಶಾಸಕರ ಮುಂದೆ ಕೆದರಿದ ಕೂದಲಿನ,… ಪುನರ್ವಸು ಮಳೆ ಅಬ್ಬರ: ಕೊಚ್ಚಿ ಹೋಗುವ ಭೀತಿಯಲ್ಲಿ ತೀರ್ಥಹಳ್ಳಿಯ ಕುನ್ನಿಕೇವಿ ಸೇತುವೆ! ತುಂಗಾ ಕಮಾನು ಸೇತುವೆ ಮೇಲೆ ಹರಿಯುತ್ತಿದೆ ನೀರು!: ಹೆದ್ದಾರಿ ಇಂಜಿನಿಯರ್ ಗಳ ಅದ್ಬುತ… ಶೈಕ್ಷಣಿಕ ಧನ ಸಹಾಯ ಪಾವತಿಸಲು ಆಗ್ರಹಿಸಿ ಜುಲೈ 9ರಂದು ಕಟ್ಟಡ ಕಾರ್ಮಿಕರ ರಾಜ್ಯವ್ಯಾಪಿ… Kodagu | 19 ವರ್ಷದಲ್ಲಿ ದಾಖಲೆ ಸೃಷ್ಟಿಸಿದ ಹಾರಂಗಿ ಡ್ಯಾಮ್: ಜಲಾಶಯಕ್ಕೆ ಹರಿದು… Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ…

ಇತ್ತೀಚಿನ ಸುದ್ದಿ

ವಾಹನಗಳ ನಂಬರ್ ಪ್ಲೇಟ್ ಮೇಲ್ಬಾಗ ಯಾವುದೇ ನಾಮಫಲಕ,  ಹೆಸರು ಬರೆಸಿದರೆ ಕಾನೂನು ಕ್ರಮ ಗ್ಯಾರಂಟಿ

02/07/2021, 07:58

ದೇವಲಾಪುರ ಜಗದೀಶ್ ನಾಗಮಂಗಲ ಮಂಡ್ಯ

info.reporterkarnataka@gmail.com

ಸಾರ್ವಜನಿಕರು ತಮ್ಮ ಖಾಸಗಿ ವಾಹನಗಳ ಮೇಲೆ ನಂಬರ್ ಪ್ಲೇಟ್ ಮೇಲ್ಭಾಗದಲ್ಲಿ ಯಾವುದೇ ತರಹದ ನಾಮಫಲಕ ಮತ್ತು ಹೆಸರುಗಳನ್ನು ಹಾಕಬಾರದೆಂದು ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ  ಎಚ್. ಹನುಮಂತರಾಯಪ್ಪ ಹೇಳಿದ್ದಾರೆ.

ನಾಗಮಂಗಲದ ಸಾರಿಗೆ ಪ್ರಾದೇಶಿಕ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,ನಾಗಮಂಗಲ ತಾಲೂಕು ಹಾಗೂ ಕೆ.ಆರ್. ಪೇಟೆ ತಾಲ್ಲೂಕುಗಳಲ್ಲಿ ಸಾರ್ವಜನಿಕರು  ಖಾಸಗಿ ವಾಹನಗಳ ನಂಬರ್ ಪ್ಲೇಟ್ ಮೇಲ್ಭಾಗದಲ್ಲಿ ನಾಮಫಲಕಗಳನ್ನು ಹಾಕಿಕೊಂಡಿದ್ದಾರೆ. ಇದರ ಬಗ್ಗೆ
ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಬಂದಿವೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಸಹಕರಿಸಬೇಕು.ಕಾನೂನು ಪ್ರಕಾರ ” ಜಿ “ಶ್ರೇಣಿಯ ವಾಹನಗಳನ್ನು ಬಿಟ್ಟು ಸಂಘ ಸಂಸ್ಥೆಗಳು, ಒಕ್ಕೂಟಗಳು  ಅಥವಾ ಇನ್ಯಾವುದೇ ಸಂಸ್ಥೆಗಳು ಹೆಸರೂ ಬರೆಯುವಂತಿಲ್ಲ. ಕರ್ನಾಟಕ ಉಚ್ಚ ನ್ಯಾಯಾಲಯ ಈಗಾಗಲೇ ಆದೇಶ ನೀಡಿದ್ದು, ಈಗಾಗಲೇ ಸಾರಿಗೆ ಕಚೇರಿಯಿಂದ ವಾಹನಗಳ ತಪಾಸಣಾ ಕಾರ್ಯ ಹಮ್ಮಿಕೊಳ್ಳಲಾಗುತ್ತಿದೆ. ಆದೇಶವನ್ನು ಉಲ್ಲಂಘಿಸಿದ್ದಾರೆ ಕಾನೂನು ರೀತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ .

ಇಲಾಖೆ ಅಧಿಕಾರಿಯಾದ ಟಿ.ಎಸ್. ಗಿರಿಧರ್,   ಸಾರಿಗೆ ಇಲಾಖೆಯ ಅಧೀಕ್ಷಕ ಸತೀಶ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು