7:40 AM Monday18 - May 2026
ಬ್ರೇಕಿಂಗ್ ನ್ಯೂಸ್
ಕೊಡಗಿನ ತಮ್ಮ ಕಾಫಿ ಎಸ್ಟೇಟ್‌ಗೆ ನುಗ್ಗಿದ ಆನೆಗಳ ಹಿಂಡಿನ ವಿಡಿಯೋ ಹಂಚಿಕೊಂಡ ಉದ್ಯಮಿ… ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿಗೆ ಹೆಚ್ಚುವರಿಯಾಗಿ 20 ಕೋಟಿ: ಮಂಗಳೂರಿನಲ್ಲಿ ಸಚಿವ ಖಂಡ್ರೆ ಚಿಕ್ಕಮಗಳೂರು | ದೇವನಗುಲ್ ಕಾಡಿನೊಳಗೆ ಅನಾಥ ಸ್ಥಿತಿಯಲ್ಲಿ ವೃದ್ಧನ ಶವ ಪತ್ತೆ ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:… ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ…

ಇತ್ತೀಚಿನ ಸುದ್ದಿ

ವಾಹನಗಳ ನಂಬರ್ ಪ್ಲೇಟ್ ಮೇಲ್ಬಾಗ ಯಾವುದೇ ನಾಮಫಲಕ,  ಹೆಸರು ಬರೆಸಿದರೆ ಕಾನೂನು ಕ್ರಮ ಗ್ಯಾರಂಟಿ

02/07/2021, 07:58

ದೇವಲಾಪುರ ಜಗದೀಶ್ ನಾಗಮಂಗಲ ಮಂಡ್ಯ

info.reporterkarnataka@gmail.com

ಸಾರ್ವಜನಿಕರು ತಮ್ಮ ಖಾಸಗಿ ವಾಹನಗಳ ಮೇಲೆ ನಂಬರ್ ಪ್ಲೇಟ್ ಮೇಲ್ಭಾಗದಲ್ಲಿ ಯಾವುದೇ ತರಹದ ನಾಮಫಲಕ ಮತ್ತು ಹೆಸರುಗಳನ್ನು ಹಾಕಬಾರದೆಂದು ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ  ಎಚ್. ಹನುಮಂತರಾಯಪ್ಪ ಹೇಳಿದ್ದಾರೆ.

ನಾಗಮಂಗಲದ ಸಾರಿಗೆ ಪ್ರಾದೇಶಿಕ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,ನಾಗಮಂಗಲ ತಾಲೂಕು ಹಾಗೂ ಕೆ.ಆರ್. ಪೇಟೆ ತಾಲ್ಲೂಕುಗಳಲ್ಲಿ ಸಾರ್ವಜನಿಕರು  ಖಾಸಗಿ ವಾಹನಗಳ ನಂಬರ್ ಪ್ಲೇಟ್ ಮೇಲ್ಭಾಗದಲ್ಲಿ ನಾಮಫಲಕಗಳನ್ನು ಹಾಕಿಕೊಂಡಿದ್ದಾರೆ. ಇದರ ಬಗ್ಗೆ
ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಬಂದಿವೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಸಹಕರಿಸಬೇಕು.ಕಾನೂನು ಪ್ರಕಾರ ” ಜಿ “ಶ್ರೇಣಿಯ ವಾಹನಗಳನ್ನು ಬಿಟ್ಟು ಸಂಘ ಸಂಸ್ಥೆಗಳು, ಒಕ್ಕೂಟಗಳು  ಅಥವಾ ಇನ್ಯಾವುದೇ ಸಂಸ್ಥೆಗಳು ಹೆಸರೂ ಬರೆಯುವಂತಿಲ್ಲ. ಕರ್ನಾಟಕ ಉಚ್ಚ ನ್ಯಾಯಾಲಯ ಈಗಾಗಲೇ ಆದೇಶ ನೀಡಿದ್ದು, ಈಗಾಗಲೇ ಸಾರಿಗೆ ಕಚೇರಿಯಿಂದ ವಾಹನಗಳ ತಪಾಸಣಾ ಕಾರ್ಯ ಹಮ್ಮಿಕೊಳ್ಳಲಾಗುತ್ತಿದೆ. ಆದೇಶವನ್ನು ಉಲ್ಲಂಘಿಸಿದ್ದಾರೆ ಕಾನೂನು ರೀತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ .

ಇಲಾಖೆ ಅಧಿಕಾರಿಯಾದ ಟಿ.ಎಸ್. ಗಿರಿಧರ್,   ಸಾರಿಗೆ ಇಲಾಖೆಯ ಅಧೀಕ್ಷಕ ಸತೀಶ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು