2:59 PM Wednesday11 - February 2026
ಬ್ರೇಕಿಂಗ್ ನ್ಯೂಸ್
ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಇತ್ತೀಚಿನ ಸುದ್ದಿ

ಶಂಕರನಾರಾಯಣ: ಮೊಬೈಲ್ ಚಾರ್ಜ್ ಹಾಕುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ಯುವಕ ದಾರುಣ ಸಾವು

16/11/2022, 20:22

ಸಾಂದರ್ಭಿಕ ಚಿತ್ರ
ಕುಂದಾಪುರ(reporterkarnataka@gmail.com): ಮೊಬೈಲ್ ಚಾರ್ಜ್ ಗೆ ಇಡುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ಯುವಕನೋರ್ವ ಮೃತಪಟ್ಟ ದಾರುಣ ಘಟನೆ ಶಂಕರನಾರಾಯಣ ಗ್ರಾಮದಲ್ಲಿ ನಡೆದಿದೆ.

ಉತ್ತರ ಪ್ರದೇಶದ ದೇವಾನಿಯ ಜಿಲ್ಲೆಯ ನಿವಾಸಿ ವಸಿಷ್ಠ ಪಾಸ್ವಾನ್(34) ಮೃತದುರ್ದೈವಿ. ಇವರು ಸಂಬಂಧಿಕರಾದ  ವಿಫಿನ್  ಹಾಗೂ  ರಾಮಾನಿ ಎಂಬವರೊಂದಿಗೆ ಕೆಲಸಕ್ಕಾಗಿ ಕುಂದಾಪುರ  ತಾಲೂಕಿನ ಶಂಕರನಾರಾಯಣ ಗ್ರಾಮಕ್ಕೆ ಬಂದಿದ್ದರು. ಅಲ್ಲಿ ಕೆಲಸ  ಮಾಡಿಕೊಂಡಿದ್ದ ವಸಿಷ್ಠ ಅವರು, ನ.14ರಂದು ರಾತ್ರಿ 8 ಗಂಟೆಗೆ ಅಲ್ಲಿಯೇ ಇದ್ದ  ತೋಟದ  ಪಂಪ್ ಸೆಟ್ ಶೆಡ್‌‌ನಲ್ಲಿ ಮೊಬೈಲ್ ಚಾರ್ಜ್ ಹಾಕಲು ಹೋಗಿದ್ದಾರೆ.ಈ ವೇಳೆ  ಆಕಸ್ಮಿಕವಾಗಿ ಕರೆಂಟ್  ಶಾಕ್ ಹೊಡೆದಿದ್ದು, ಕೂಡಲೇ  ಅವರನ್ನು ಕುಂದಾಪುರ  ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತುಆದರೆ,ಅಲ್ಲಿ ಪರೀಕ್ಷಿಸಿದ ವೈದ್ಯರು ಅದಾಗಲೇ ವಸಿಷ್ಠ ಅವರು ಮೃತಪಟ್ಟಿದ್ಧಾರೆ. ಎಂದು ತಿಳಿಸಿದ್ದಾರೆ. ಈ ಬಗ್ಗೆ ಶಂಕರನಾರಾಯಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು