5:45 PM Saturday19 - April 2025
ಬ್ರೇಕಿಂಗ್ ನ್ಯೂಸ್
Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ…

ಇತ್ತೀಚಿನ ಸುದ್ದಿ

ಮಂಗಳೂರು ಕೆನರಾ ಕಾಲೇಜು ವಾಣಿಜ್ಯ ಸ್ನಾತಕೋತ್ತರ ವಿಭಾಗದ ವಿದ್ಯಾರ್ಥಿಗಳಿಂದ ಮಕ್ಕಳ ದಿನಾಚರಣೆ

16/11/2022, 20:53

ಮಂಗಳೂರು(reporterlarnataka.com): ನಗರದ ಕೆನರಾ ಕಾಲೇಜಿನ 50ನೇ ವರ್ಷದ ಸುವರ್ಣ ಸಂಭ್ರಮದ ಪ್ರಯುಕ್ತ, ವಾಣಿಜ್ಯ ಸ್ನಾತಕೋತ್ತರ ವಿಭಾಗದ ವಿದ್ಯಾರ್ಥಿಗಳಿಂದ ಮಕ್ಕಳ ದಿನಾಚರಣೆಯ ಪ್ರಯುಕ್ತ ಬೊಕ್ಕಪಟ್ನದ ಸರ್ಕಾರಿ ಹಿರಿಯ ಕನ್ನಡ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಅಗತ್ಯ ಕಲಿಕಾ ಸಾಮಗ್ರಿ ವಿತರಣಾ ಕಾರ್ಯಕ್ರಮವು ನಡೆಯಿತು.

ಪ್ರತಿಭಾನ್ವಿತ ಶಾಲಾ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ, ಪೆನ್ಸಿಲ್, ರಬ್ಬರ್ ಮುಂತಾದ ದೈನಂದಿನ ವಿದ್ಯಾಭ್ಯಾಸಕ್ಕೆ ಬೇಕಾದ ಅಗತ್ಯ ವಸ್ತುಗಳನ್ನು ಉಚಿತವಾಗಿ ವಿತರಣೆ ಮಾಡುವ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಇಂದಿನ ಮಕ್ಕಳೇ ಮುಂದಿನ ಭವ್ಯ ಭಾರತದ ಪ್ರಜೆಗಳು ಎಂಬಂತೆ ಪ್ರತಿ ಮಗುವು ದೇಶದ ಸರ್ವಶ್ರೇಷ್ಠ ಆಸ್ತಿ. ಕೆನರಾ ಕಾಲೇಜಿನ ಎಂ.ಕಾಂ ವಿಭಾಗದ ವಿದ್ಯಾರ್ಥಿಗಳು ಶಾಲಾ ಮಕ್ಕಳಿಗಾಗಿ ವಿವಿಧ ಮನರಂಜನಾ ಕ್ರೀಡೆಗಳನ್ನು ನಡೆಸಿ, ಬಹುಮಾನವನ್ನು ವಿತರಿಸಿ, ಸಿಹಿ ತಿಂಡಿಯನ್ನು ಹಂಚಲಾಯಿತು.

ಬೊಕ್ಕಪಟ್ನ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಡ್ರೆಸಿಲ್ಲ್ ಲಿಲ್ಲೀ ಮೆಂಜೀಝ್ ರವರು, ಶಿಕ್ಷಕರು, ಸರ್ವ ವಿದ್ಯಾರ್ಥಿಗಳು ಕಾಲೇಜಿನ ನಿಸ್ವಾರ್ಥ ಸೇವೆಗಾಗಿ ಅಭಿನಂದನೆ ಸಲ್ಲಿಸಿದರು.
ಇದೇ ಸಂದರ್ಭದಲ್ಲಿ ಕೆನರಾ ವಾಣಿಜ್ಯ ಸ್ನಾತಕೋತ್ತರ ವಿಭಾಗದ ವಿದ್ಯಾರ್ಥಿಗಳು, ಸಂಚಾಲಕಿ ಶ್ರೀಮತಿ ಸ್ವಾತಿ ನಾಯಕ್, ಉಪನ್ಯಾಸಕರಾದ ಡಾ. ಪ್ರಶಾಂತ್ ಭಟ್, ಮೇಘ ರಾವ್, ಹರೀಶ್ ಪೈ ಉಪಸ್ಥಿತರಿದ್ದರು.
ವಿಶಾಲ್ ಕಾರ್ಯಕ್ರಮವನ್ನು ಸ್ವಾಗತಿಸಿ ನಿರೂಪಿಸಿದರು. ಶರಣ್ಯ ಪ್ರಸ್ತಾವನೆಗೈದರು. ಸ್ವಾತಿ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು