3:24 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಮಂಗಳೂರು ಕೆನರಾ ಕಾಲೇಜು ವಾಣಿಜ್ಯ ಸ್ನಾತಕೋತ್ತರ ವಿಭಾಗದ ವಿದ್ಯಾರ್ಥಿಗಳಿಂದ ಮಕ್ಕಳ ದಿನಾಚರಣೆ

16/11/2022, 20:53

ಮಂಗಳೂರು(reporterlarnataka.com): ನಗರದ ಕೆನರಾ ಕಾಲೇಜಿನ 50ನೇ ವರ್ಷದ ಸುವರ್ಣ ಸಂಭ್ರಮದ ಪ್ರಯುಕ್ತ, ವಾಣಿಜ್ಯ ಸ್ನಾತಕೋತ್ತರ ವಿಭಾಗದ ವಿದ್ಯಾರ್ಥಿಗಳಿಂದ ಮಕ್ಕಳ ದಿನಾಚರಣೆಯ ಪ್ರಯುಕ್ತ ಬೊಕ್ಕಪಟ್ನದ ಸರ್ಕಾರಿ ಹಿರಿಯ ಕನ್ನಡ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಅಗತ್ಯ ಕಲಿಕಾ ಸಾಮಗ್ರಿ ವಿತರಣಾ ಕಾರ್ಯಕ್ರಮವು ನಡೆಯಿತು.

ಪ್ರತಿಭಾನ್ವಿತ ಶಾಲಾ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ, ಪೆನ್ಸಿಲ್, ರಬ್ಬರ್ ಮುಂತಾದ ದೈನಂದಿನ ವಿದ್ಯಾಭ್ಯಾಸಕ್ಕೆ ಬೇಕಾದ ಅಗತ್ಯ ವಸ್ತುಗಳನ್ನು ಉಚಿತವಾಗಿ ವಿತರಣೆ ಮಾಡುವ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಇಂದಿನ ಮಕ್ಕಳೇ ಮುಂದಿನ ಭವ್ಯ ಭಾರತದ ಪ್ರಜೆಗಳು ಎಂಬಂತೆ ಪ್ರತಿ ಮಗುವು ದೇಶದ ಸರ್ವಶ್ರೇಷ್ಠ ಆಸ್ತಿ. ಕೆನರಾ ಕಾಲೇಜಿನ ಎಂ.ಕಾಂ ವಿಭಾಗದ ವಿದ್ಯಾರ್ಥಿಗಳು ಶಾಲಾ ಮಕ್ಕಳಿಗಾಗಿ ವಿವಿಧ ಮನರಂಜನಾ ಕ್ರೀಡೆಗಳನ್ನು ನಡೆಸಿ, ಬಹುಮಾನವನ್ನು ವಿತರಿಸಿ, ಸಿಹಿ ತಿಂಡಿಯನ್ನು ಹಂಚಲಾಯಿತು.

ಬೊಕ್ಕಪಟ್ನ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಡ್ರೆಸಿಲ್ಲ್ ಲಿಲ್ಲೀ ಮೆಂಜೀಝ್ ರವರು, ಶಿಕ್ಷಕರು, ಸರ್ವ ವಿದ್ಯಾರ್ಥಿಗಳು ಕಾಲೇಜಿನ ನಿಸ್ವಾರ್ಥ ಸೇವೆಗಾಗಿ ಅಭಿನಂದನೆ ಸಲ್ಲಿಸಿದರು.
ಇದೇ ಸಂದರ್ಭದಲ್ಲಿ ಕೆನರಾ ವಾಣಿಜ್ಯ ಸ್ನಾತಕೋತ್ತರ ವಿಭಾಗದ ವಿದ್ಯಾರ್ಥಿಗಳು, ಸಂಚಾಲಕಿ ಶ್ರೀಮತಿ ಸ್ವಾತಿ ನಾಯಕ್, ಉಪನ್ಯಾಸಕರಾದ ಡಾ. ಪ್ರಶಾಂತ್ ಭಟ್, ಮೇಘ ರಾವ್, ಹರೀಶ್ ಪೈ ಉಪಸ್ಥಿತರಿದ್ದರು.
ವಿಶಾಲ್ ಕಾರ್ಯಕ್ರಮವನ್ನು ಸ್ವಾಗತಿಸಿ ನಿರೂಪಿಸಿದರು. ಶರಣ್ಯ ಪ್ರಸ್ತಾವನೆಗೈದರು. ಸ್ವಾತಿ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು