12:57 PM Tuesday10 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌… ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು

ಇತ್ತೀಚಿನ ಸುದ್ದಿ

ಮಂಗಳೂರು ಕೆನರಾ ಕಾಲೇಜು ವಾಣಿಜ್ಯ ಸ್ನಾತಕೋತ್ತರ ವಿಭಾಗದ ವಿದ್ಯಾರ್ಥಿಗಳಿಂದ ಮಕ್ಕಳ ದಿನಾಚರಣೆ

16/11/2022, 20:53

ಮಂಗಳೂರು(reporterlarnataka.com): ನಗರದ ಕೆನರಾ ಕಾಲೇಜಿನ 50ನೇ ವರ್ಷದ ಸುವರ್ಣ ಸಂಭ್ರಮದ ಪ್ರಯುಕ್ತ, ವಾಣಿಜ್ಯ ಸ್ನಾತಕೋತ್ತರ ವಿಭಾಗದ ವಿದ್ಯಾರ್ಥಿಗಳಿಂದ ಮಕ್ಕಳ ದಿನಾಚರಣೆಯ ಪ್ರಯುಕ್ತ ಬೊಕ್ಕಪಟ್ನದ ಸರ್ಕಾರಿ ಹಿರಿಯ ಕನ್ನಡ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಅಗತ್ಯ ಕಲಿಕಾ ಸಾಮಗ್ರಿ ವಿತರಣಾ ಕಾರ್ಯಕ್ರಮವು ನಡೆಯಿತು.

ಪ್ರತಿಭಾನ್ವಿತ ಶಾಲಾ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ, ಪೆನ್ಸಿಲ್, ರಬ್ಬರ್ ಮುಂತಾದ ದೈನಂದಿನ ವಿದ್ಯಾಭ್ಯಾಸಕ್ಕೆ ಬೇಕಾದ ಅಗತ್ಯ ವಸ್ತುಗಳನ್ನು ಉಚಿತವಾಗಿ ವಿತರಣೆ ಮಾಡುವ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಇಂದಿನ ಮಕ್ಕಳೇ ಮುಂದಿನ ಭವ್ಯ ಭಾರತದ ಪ್ರಜೆಗಳು ಎಂಬಂತೆ ಪ್ರತಿ ಮಗುವು ದೇಶದ ಸರ್ವಶ್ರೇಷ್ಠ ಆಸ್ತಿ. ಕೆನರಾ ಕಾಲೇಜಿನ ಎಂ.ಕಾಂ ವಿಭಾಗದ ವಿದ್ಯಾರ್ಥಿಗಳು ಶಾಲಾ ಮಕ್ಕಳಿಗಾಗಿ ವಿವಿಧ ಮನರಂಜನಾ ಕ್ರೀಡೆಗಳನ್ನು ನಡೆಸಿ, ಬಹುಮಾನವನ್ನು ವಿತರಿಸಿ, ಸಿಹಿ ತಿಂಡಿಯನ್ನು ಹಂಚಲಾಯಿತು.

ಬೊಕ್ಕಪಟ್ನ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಡ್ರೆಸಿಲ್ಲ್ ಲಿಲ್ಲೀ ಮೆಂಜೀಝ್ ರವರು, ಶಿಕ್ಷಕರು, ಸರ್ವ ವಿದ್ಯಾರ್ಥಿಗಳು ಕಾಲೇಜಿನ ನಿಸ್ವಾರ್ಥ ಸೇವೆಗಾಗಿ ಅಭಿನಂದನೆ ಸಲ್ಲಿಸಿದರು.
ಇದೇ ಸಂದರ್ಭದಲ್ಲಿ ಕೆನರಾ ವಾಣಿಜ್ಯ ಸ್ನಾತಕೋತ್ತರ ವಿಭಾಗದ ವಿದ್ಯಾರ್ಥಿಗಳು, ಸಂಚಾಲಕಿ ಶ್ರೀಮತಿ ಸ್ವಾತಿ ನಾಯಕ್, ಉಪನ್ಯಾಸಕರಾದ ಡಾ. ಪ್ರಶಾಂತ್ ಭಟ್, ಮೇಘ ರಾವ್, ಹರೀಶ್ ಪೈ ಉಪಸ್ಥಿತರಿದ್ದರು.
ವಿಶಾಲ್ ಕಾರ್ಯಕ್ರಮವನ್ನು ಸ್ವಾಗತಿಸಿ ನಿರೂಪಿಸಿದರು. ಶರಣ್ಯ ಪ್ರಸ್ತಾವನೆಗೈದರು. ಸ್ವಾತಿ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು