7:22 AM Friday17 - May 2024
ಬ್ರೇಕಿಂಗ್ ನ್ಯೂಸ್
ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ… ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,…

ಇತ್ತೀಚಿನ ಸುದ್ದಿ

ಮಂಗಳೂರು ಕೆನರಾ ಕಾಲೇಜು ವಾಣಿಜ್ಯ ಸ್ನಾತಕೋತ್ತರ ವಿಭಾಗದ ವಿದ್ಯಾರ್ಥಿಗಳಿಂದ ಮಕ್ಕಳ ದಿನಾಚರಣೆ

16/11/2022, 20:53

ಮಂಗಳೂರು(reporterlarnataka.com): ನಗರದ ಕೆನರಾ ಕಾಲೇಜಿನ 50ನೇ ವರ್ಷದ ಸುವರ್ಣ ಸಂಭ್ರಮದ ಪ್ರಯುಕ್ತ, ವಾಣಿಜ್ಯ ಸ್ನಾತಕೋತ್ತರ ವಿಭಾಗದ ವಿದ್ಯಾರ್ಥಿಗಳಿಂದ ಮಕ್ಕಳ ದಿನಾಚರಣೆಯ ಪ್ರಯುಕ್ತ ಬೊಕ್ಕಪಟ್ನದ ಸರ್ಕಾರಿ ಹಿರಿಯ ಕನ್ನಡ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಅಗತ್ಯ ಕಲಿಕಾ ಸಾಮಗ್ರಿ ವಿತರಣಾ ಕಾರ್ಯಕ್ರಮವು ನಡೆಯಿತು.

ಪ್ರತಿಭಾನ್ವಿತ ಶಾಲಾ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ, ಪೆನ್ಸಿಲ್, ರಬ್ಬರ್ ಮುಂತಾದ ದೈನಂದಿನ ವಿದ್ಯಾಭ್ಯಾಸಕ್ಕೆ ಬೇಕಾದ ಅಗತ್ಯ ವಸ್ತುಗಳನ್ನು ಉಚಿತವಾಗಿ ವಿತರಣೆ ಮಾಡುವ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಇಂದಿನ ಮಕ್ಕಳೇ ಮುಂದಿನ ಭವ್ಯ ಭಾರತದ ಪ್ರಜೆಗಳು ಎಂಬಂತೆ ಪ್ರತಿ ಮಗುವು ದೇಶದ ಸರ್ವಶ್ರೇಷ್ಠ ಆಸ್ತಿ. ಕೆನರಾ ಕಾಲೇಜಿನ ಎಂ.ಕಾಂ ವಿಭಾಗದ ವಿದ್ಯಾರ್ಥಿಗಳು ಶಾಲಾ ಮಕ್ಕಳಿಗಾಗಿ ವಿವಿಧ ಮನರಂಜನಾ ಕ್ರೀಡೆಗಳನ್ನು ನಡೆಸಿ, ಬಹುಮಾನವನ್ನು ವಿತರಿಸಿ, ಸಿಹಿ ತಿಂಡಿಯನ್ನು ಹಂಚಲಾಯಿತು.

ಬೊಕ್ಕಪಟ್ನ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಡ್ರೆಸಿಲ್ಲ್ ಲಿಲ್ಲೀ ಮೆಂಜೀಝ್ ರವರು, ಶಿಕ್ಷಕರು, ಸರ್ವ ವಿದ್ಯಾರ್ಥಿಗಳು ಕಾಲೇಜಿನ ನಿಸ್ವಾರ್ಥ ಸೇವೆಗಾಗಿ ಅಭಿನಂದನೆ ಸಲ್ಲಿಸಿದರು.
ಇದೇ ಸಂದರ್ಭದಲ್ಲಿ ಕೆನರಾ ವಾಣಿಜ್ಯ ಸ್ನಾತಕೋತ್ತರ ವಿಭಾಗದ ವಿದ್ಯಾರ್ಥಿಗಳು, ಸಂಚಾಲಕಿ ಶ್ರೀಮತಿ ಸ್ವಾತಿ ನಾಯಕ್, ಉಪನ್ಯಾಸಕರಾದ ಡಾ. ಪ್ರಶಾಂತ್ ಭಟ್, ಮೇಘ ರಾವ್, ಹರೀಶ್ ಪೈ ಉಪಸ್ಥಿತರಿದ್ದರು.
ವಿಶಾಲ್ ಕಾರ್ಯಕ್ರಮವನ್ನು ಸ್ವಾಗತಿಸಿ ನಿರೂಪಿಸಿದರು. ಶರಣ್ಯ ಪ್ರಸ್ತಾವನೆಗೈದರು. ಸ್ವಾತಿ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು