7:22 AM Wednesday14 - May 2025
ಬ್ರೇಕಿಂಗ್ ನ್ಯೂಸ್
Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ… Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌…

ಇತ್ತೀಚಿನ ಸುದ್ದಿ

ಸುರತ್ಕಲ್ ಟೋಲ್ ತೆರವಿಗೆ ಅಹೋರಾತ್ರಿ ಹೋರಾಟ ನಡೆದಾಗ ಶಾಸಕ ಭರತ್ ಶೆಟ್ಟಿ ಎಲ್ಲಿದ್ರು?: ಯು.ಟಿ. ಖಾದರ್

16/11/2022, 21:47

ಮಂಗಳೂರು(reporter Karnataka.com): ಕೇಂದ್ರದಲ್ಲಿ 8 ವರ್ಷಗಳಿಂದ ಬಿಜೆಪಿ ಸರಕಾರವಿದೆ. ದ.ಕ., ಉಡುಪಿಯಲ್ಲಿ ಅವರದ್ದೇ ಸಂಸದರಿದ್ದಾರೆ. ಸುರತ್ಕಲ್ ಟೋಲ್ ತೆರವಿಗೆ ಆಗ್ರಹಿಸಿ ಜನರು ಆಹೋರಾತ್ರಿ ಪ್ರತಿಭಟನೆ ನಡೆಸುತ್ತಿರುವಾಗ ಶಾಸಕರಾದ ಡಾ. ವೈ. ಭರತ್ ಶೆಟ್ಟಿ ಎಲ್ಲಿದ್ದರು ಎಂದು ಪ್ರತಿಪಕ್ಷದ ಉಪ ನಾಯಕ ಯು.ಟಿ. ಖಾದರ್ ಪ್ರಶ್ನಿಸಿದರು.

ಯು.ಟಿ. ಖಾದರ್ ಮಂತ್ರಿ ಆಗಿದ್ದಾಗ ಏನು ಮಾಡಿದ್ದಾರೆ ಎಂಬ ಶಾಸಕ ಭರತ್ ಶೆಟ್ಟಿ ಪ್ರಶ್ನೆಗೆ ಉತ್ತರಿಸಿದ ಖಾದರ್,ಪಾಪ ಭರತ್ ಶೆಟ್ಟಿ ಹೇಳಿಕೆಗೆ ದೊಡ್ಡ ಮಟ್ಟದಲ್ಲಿ ಪ್ರತಿಕ್ರಿಯೆ ನೀಡಲ್ಲ. ಜವಾಬ್ದಾರಿ ಸ್ಥಾನದಲ್ಲಿ ಇರುವವರು ಮಾತನಾಡುವಾಗ ಆಲೋಚನೆ ಮಾಡಲಿ, ಇದರ ಬಗ್ಗೆ ಜಿಲ್ಲಾಧಿಕಾರಿಯೊಂದಿಗೆ ನಾನೇ ಮಾತುಕತೆ ಮಾಡಿದ್ದೆ. ಎಂಟು ವರ್ಷ ಇವ್ರು ಏನು ಮಾಡಿದ್ದಾರೆ…? ಮಂಗಳೂರಿನ ಜನ ಅಹೋರಾತ್ರಿ ಹೋರಾಟ ಮಾಡುವಾಗ ಇವರು ಎಲ್ಲಿ ಇದ್ರು ಎಂದರು.

ಸುರತ್ಕಲ್ ಟೋಲ್‌ಗೇಟ್ ತೆರವು ಆಗಿಲ್ಲ. ಕೇವಲ ಶಿಫ್ಟ್ ಆಗಿದೆಯಷ್ಟೆ. ಇದು ಮಂಗಳೂರಿನ ಜನತೆಯ ಯಶಸ್ಸು ಆಗಿದೆ. ಅಲ್ಲೇ ಮಲಗಿದವರಿಗೆ, ರಾತ್ರಿ ಹಗಲು ಊಟ ನಿದ್ದೆ ಬಿಟ್ಟು ಪ್ರತಿಭಟನೆ ಮಾಡಿದವರಿಗೆ, ಕೆಲಸ ಬಿಟ್ಟು ಪ್ರತಿಭಟನೆಯಲ್ಲಿ ಪಾಲ್ಗೊಂಡವರಿಗೆ ನಾವು ವಿಶೇಷವಾದ ಮಹತ್ವವನ್ನು ಕೊಡಬೇಕಾಗುತ್ತದೆ. ಇನ್ನು ಈ ಬಗ್ಗೆ ಸಂಸತ್ತಿನಲ್ಲಿ ಟೋಲ್ ಬಗ್ಗೆ ಮಾತನಾಡದವರು ಈಗ ಇದರ ರಾಜಕೀಯ ಲಾಭ ಪಡಿತಿದ್ದಾರೆ ಎಂದು ಖಾದರ್ ವ್ಯಂಗ್ಯವಾಡಿದರು.
ಟೋಲ್‌ಗೇಟ್ ರದ್ದು ಕುರಿತು ನಡೆಯುತ್ತಿರುವ ಬೆಳವಣಿಗೆಯ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು ‘ಕೇಂದ್ರ ಸರ್ಕಾರ ಕೇವಲ ನೋಟಿಷಿಕೇಶನ್ ನೀಡಿದೆ ಎಂದು ನುಡಿದರು.

ಈ ಯೋಜನೆ 75 ಕೇಂದ್ರ ಸರ್ಕಾರ ಮತ್ತು ಎನ್ಎಂಪಿಟಿ ಜಂಟಿಯಲ್ಲಿ ಆಗಿದೆ. 130 ಕೋಟಿ ಟೋಲ್ ಇನ್ನೂ ಕೂಡಾ ಬರಬೇಕಿದೆ ಎಂಬುದು ಟೋಲ್ ನವರ ವಾದ. ಯಾರೋ ಒಬ್ಬನಿಗೆ ಎಷ್ಟು ಕೋಟಿಗೆ ಇವು ಟೋಲ್ ಟೆಂಡರ್ ಕೊಟ್ರು. 2013ರಲ್ಲಿ ಎಂಪಿ ಯಾರು, ಉಡುಪಿ ಎಂಪಿ ಯಾರು..? ಯಾಕೆ ಆಗ ಅವು ಧ್ವನಿ ಎತ್ತಲಿಲ್ಲ. ಯಾಕೆ ಎಂಪಿ ಎಂಎಲ್‌ಎ ಡೆಲ್ಲಿಗೆ ಹೋಗಿ ಕೂತಿಲ್ಲ. ಅವ್ರದ್ದು ಜನರ ಮನಸ್ಸನ್ನು ಹೊಡೆಯುವ ಕೆಲಸ ಮಾಡ್ತಾ ಹೋಗ್ತಾರೆ. ನಾವು ಕಟ್ಟುತ್ತಾ ಹೋಗುತ್ತೇವೆ’ ಎಂದು ಟೀಕಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು