3:47 PM Monday30 - March 2026
ಬ್ರೇಕಿಂಗ್ ನ್ಯೂಸ್
Madikeri | ಕೊಡಗು ಜಿಲ್ಲೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ. ಎಂ.… Kodagu | ಶನಿವಾರಸಂತೆ: ಟ್ರ್ಯಾಕ್ಟರ್ -ಕಾರು ಅಪಘಾತ; ಟ್ರ್ಯಾಕ್ಟರ್ ಚಾಲಕ ಸಾವು ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ

ಇತ್ತೀಚಿನ ಸುದ್ದಿ

ಸುರತ್ಕಲ್ ಟೋಲ್ ತೆರವಿಗೆ ಅಹೋರಾತ್ರಿ ಹೋರಾಟ ನಡೆದಾಗ ಶಾಸಕ ಭರತ್ ಶೆಟ್ಟಿ ಎಲ್ಲಿದ್ರು?: ಯು.ಟಿ. ಖಾದರ್

16/11/2022, 21:47

ಮಂಗಳೂರು(reporter Karnataka.com): ಕೇಂದ್ರದಲ್ಲಿ 8 ವರ್ಷಗಳಿಂದ ಬಿಜೆಪಿ ಸರಕಾರವಿದೆ. ದ.ಕ., ಉಡುಪಿಯಲ್ಲಿ ಅವರದ್ದೇ ಸಂಸದರಿದ್ದಾರೆ. ಸುರತ್ಕಲ್ ಟೋಲ್ ತೆರವಿಗೆ ಆಗ್ರಹಿಸಿ ಜನರು ಆಹೋರಾತ್ರಿ ಪ್ರತಿಭಟನೆ ನಡೆಸುತ್ತಿರುವಾಗ ಶಾಸಕರಾದ ಡಾ. ವೈ. ಭರತ್ ಶೆಟ್ಟಿ ಎಲ್ಲಿದ್ದರು ಎಂದು ಪ್ರತಿಪಕ್ಷದ ಉಪ ನಾಯಕ ಯು.ಟಿ. ಖಾದರ್ ಪ್ರಶ್ನಿಸಿದರು.

ಯು.ಟಿ. ಖಾದರ್ ಮಂತ್ರಿ ಆಗಿದ್ದಾಗ ಏನು ಮಾಡಿದ್ದಾರೆ ಎಂಬ ಶಾಸಕ ಭರತ್ ಶೆಟ್ಟಿ ಪ್ರಶ್ನೆಗೆ ಉತ್ತರಿಸಿದ ಖಾದರ್,ಪಾಪ ಭರತ್ ಶೆಟ್ಟಿ ಹೇಳಿಕೆಗೆ ದೊಡ್ಡ ಮಟ್ಟದಲ್ಲಿ ಪ್ರತಿಕ್ರಿಯೆ ನೀಡಲ್ಲ. ಜವಾಬ್ದಾರಿ ಸ್ಥಾನದಲ್ಲಿ ಇರುವವರು ಮಾತನಾಡುವಾಗ ಆಲೋಚನೆ ಮಾಡಲಿ, ಇದರ ಬಗ್ಗೆ ಜಿಲ್ಲಾಧಿಕಾರಿಯೊಂದಿಗೆ ನಾನೇ ಮಾತುಕತೆ ಮಾಡಿದ್ದೆ. ಎಂಟು ವರ್ಷ ಇವ್ರು ಏನು ಮಾಡಿದ್ದಾರೆ…? ಮಂಗಳೂರಿನ ಜನ ಅಹೋರಾತ್ರಿ ಹೋರಾಟ ಮಾಡುವಾಗ ಇವರು ಎಲ್ಲಿ ಇದ್ರು ಎಂದರು.

ಸುರತ್ಕಲ್ ಟೋಲ್‌ಗೇಟ್ ತೆರವು ಆಗಿಲ್ಲ. ಕೇವಲ ಶಿಫ್ಟ್ ಆಗಿದೆಯಷ್ಟೆ. ಇದು ಮಂಗಳೂರಿನ ಜನತೆಯ ಯಶಸ್ಸು ಆಗಿದೆ. ಅಲ್ಲೇ ಮಲಗಿದವರಿಗೆ, ರಾತ್ರಿ ಹಗಲು ಊಟ ನಿದ್ದೆ ಬಿಟ್ಟು ಪ್ರತಿಭಟನೆ ಮಾಡಿದವರಿಗೆ, ಕೆಲಸ ಬಿಟ್ಟು ಪ್ರತಿಭಟನೆಯಲ್ಲಿ ಪಾಲ್ಗೊಂಡವರಿಗೆ ನಾವು ವಿಶೇಷವಾದ ಮಹತ್ವವನ್ನು ಕೊಡಬೇಕಾಗುತ್ತದೆ. ಇನ್ನು ಈ ಬಗ್ಗೆ ಸಂಸತ್ತಿನಲ್ಲಿ ಟೋಲ್ ಬಗ್ಗೆ ಮಾತನಾಡದವರು ಈಗ ಇದರ ರಾಜಕೀಯ ಲಾಭ ಪಡಿತಿದ್ದಾರೆ ಎಂದು ಖಾದರ್ ವ್ಯಂಗ್ಯವಾಡಿದರು.
ಟೋಲ್‌ಗೇಟ್ ರದ್ದು ಕುರಿತು ನಡೆಯುತ್ತಿರುವ ಬೆಳವಣಿಗೆಯ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು ‘ಕೇಂದ್ರ ಸರ್ಕಾರ ಕೇವಲ ನೋಟಿಷಿಕೇಶನ್ ನೀಡಿದೆ ಎಂದು ನುಡಿದರು.

ಈ ಯೋಜನೆ 75 ಕೇಂದ್ರ ಸರ್ಕಾರ ಮತ್ತು ಎನ್ಎಂಪಿಟಿ ಜಂಟಿಯಲ್ಲಿ ಆಗಿದೆ. 130 ಕೋಟಿ ಟೋಲ್ ಇನ್ನೂ ಕೂಡಾ ಬರಬೇಕಿದೆ ಎಂಬುದು ಟೋಲ್ ನವರ ವಾದ. ಯಾರೋ ಒಬ್ಬನಿಗೆ ಎಷ್ಟು ಕೋಟಿಗೆ ಇವು ಟೋಲ್ ಟೆಂಡರ್ ಕೊಟ್ರು. 2013ರಲ್ಲಿ ಎಂಪಿ ಯಾರು, ಉಡುಪಿ ಎಂಪಿ ಯಾರು..? ಯಾಕೆ ಆಗ ಅವು ಧ್ವನಿ ಎತ್ತಲಿಲ್ಲ. ಯಾಕೆ ಎಂಪಿ ಎಂಎಲ್‌ಎ ಡೆಲ್ಲಿಗೆ ಹೋಗಿ ಕೂತಿಲ್ಲ. ಅವ್ರದ್ದು ಜನರ ಮನಸ್ಸನ್ನು ಹೊಡೆಯುವ ಕೆಲಸ ಮಾಡ್ತಾ ಹೋಗ್ತಾರೆ. ನಾವು ಕಟ್ಟುತ್ತಾ ಹೋಗುತ್ತೇವೆ’ ಎಂದು ಟೀಕಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು