7:09 PM Thursday12 - February 2026
ಬ್ರೇಕಿಂಗ್ ನ್ಯೂಸ್
ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ…

ಇತ್ತೀಚಿನ ಸುದ್ದಿ

ಸುರತ್ಕಲ್ ಟೋಲ್ ತೆರವಿಗೆ ಅಹೋರಾತ್ರಿ ಹೋರಾಟ ನಡೆದಾಗ ಶಾಸಕ ಭರತ್ ಶೆಟ್ಟಿ ಎಲ್ಲಿದ್ರು?: ಯು.ಟಿ. ಖಾದರ್

16/11/2022, 21:47

ಮಂಗಳೂರು(reporter Karnataka.com): ಕೇಂದ್ರದಲ್ಲಿ 8 ವರ್ಷಗಳಿಂದ ಬಿಜೆಪಿ ಸರಕಾರವಿದೆ. ದ.ಕ., ಉಡುಪಿಯಲ್ಲಿ ಅವರದ್ದೇ ಸಂಸದರಿದ್ದಾರೆ. ಸುರತ್ಕಲ್ ಟೋಲ್ ತೆರವಿಗೆ ಆಗ್ರಹಿಸಿ ಜನರು ಆಹೋರಾತ್ರಿ ಪ್ರತಿಭಟನೆ ನಡೆಸುತ್ತಿರುವಾಗ ಶಾಸಕರಾದ ಡಾ. ವೈ. ಭರತ್ ಶೆಟ್ಟಿ ಎಲ್ಲಿದ್ದರು ಎಂದು ಪ್ರತಿಪಕ್ಷದ ಉಪ ನಾಯಕ ಯು.ಟಿ. ಖಾದರ್ ಪ್ರಶ್ನಿಸಿದರು.

ಯು.ಟಿ. ಖಾದರ್ ಮಂತ್ರಿ ಆಗಿದ್ದಾಗ ಏನು ಮಾಡಿದ್ದಾರೆ ಎಂಬ ಶಾಸಕ ಭರತ್ ಶೆಟ್ಟಿ ಪ್ರಶ್ನೆಗೆ ಉತ್ತರಿಸಿದ ಖಾದರ್,ಪಾಪ ಭರತ್ ಶೆಟ್ಟಿ ಹೇಳಿಕೆಗೆ ದೊಡ್ಡ ಮಟ್ಟದಲ್ಲಿ ಪ್ರತಿಕ್ರಿಯೆ ನೀಡಲ್ಲ. ಜವಾಬ್ದಾರಿ ಸ್ಥಾನದಲ್ಲಿ ಇರುವವರು ಮಾತನಾಡುವಾಗ ಆಲೋಚನೆ ಮಾಡಲಿ, ಇದರ ಬಗ್ಗೆ ಜಿಲ್ಲಾಧಿಕಾರಿಯೊಂದಿಗೆ ನಾನೇ ಮಾತುಕತೆ ಮಾಡಿದ್ದೆ. ಎಂಟು ವರ್ಷ ಇವ್ರು ಏನು ಮಾಡಿದ್ದಾರೆ…? ಮಂಗಳೂರಿನ ಜನ ಅಹೋರಾತ್ರಿ ಹೋರಾಟ ಮಾಡುವಾಗ ಇವರು ಎಲ್ಲಿ ಇದ್ರು ಎಂದರು.

ಸುರತ್ಕಲ್ ಟೋಲ್‌ಗೇಟ್ ತೆರವು ಆಗಿಲ್ಲ. ಕೇವಲ ಶಿಫ್ಟ್ ಆಗಿದೆಯಷ್ಟೆ. ಇದು ಮಂಗಳೂರಿನ ಜನತೆಯ ಯಶಸ್ಸು ಆಗಿದೆ. ಅಲ್ಲೇ ಮಲಗಿದವರಿಗೆ, ರಾತ್ರಿ ಹಗಲು ಊಟ ನಿದ್ದೆ ಬಿಟ್ಟು ಪ್ರತಿಭಟನೆ ಮಾಡಿದವರಿಗೆ, ಕೆಲಸ ಬಿಟ್ಟು ಪ್ರತಿಭಟನೆಯಲ್ಲಿ ಪಾಲ್ಗೊಂಡವರಿಗೆ ನಾವು ವಿಶೇಷವಾದ ಮಹತ್ವವನ್ನು ಕೊಡಬೇಕಾಗುತ್ತದೆ. ಇನ್ನು ಈ ಬಗ್ಗೆ ಸಂಸತ್ತಿನಲ್ಲಿ ಟೋಲ್ ಬಗ್ಗೆ ಮಾತನಾಡದವರು ಈಗ ಇದರ ರಾಜಕೀಯ ಲಾಭ ಪಡಿತಿದ್ದಾರೆ ಎಂದು ಖಾದರ್ ವ್ಯಂಗ್ಯವಾಡಿದರು.
ಟೋಲ್‌ಗೇಟ್ ರದ್ದು ಕುರಿತು ನಡೆಯುತ್ತಿರುವ ಬೆಳವಣಿಗೆಯ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು ‘ಕೇಂದ್ರ ಸರ್ಕಾರ ಕೇವಲ ನೋಟಿಷಿಕೇಶನ್ ನೀಡಿದೆ ಎಂದು ನುಡಿದರು.

ಈ ಯೋಜನೆ 75 ಕೇಂದ್ರ ಸರ್ಕಾರ ಮತ್ತು ಎನ್ಎಂಪಿಟಿ ಜಂಟಿಯಲ್ಲಿ ಆಗಿದೆ. 130 ಕೋಟಿ ಟೋಲ್ ಇನ್ನೂ ಕೂಡಾ ಬರಬೇಕಿದೆ ಎಂಬುದು ಟೋಲ್ ನವರ ವಾದ. ಯಾರೋ ಒಬ್ಬನಿಗೆ ಎಷ್ಟು ಕೋಟಿಗೆ ಇವು ಟೋಲ್ ಟೆಂಡರ್ ಕೊಟ್ರು. 2013ರಲ್ಲಿ ಎಂಪಿ ಯಾರು, ಉಡುಪಿ ಎಂಪಿ ಯಾರು..? ಯಾಕೆ ಆಗ ಅವು ಧ್ವನಿ ಎತ್ತಲಿಲ್ಲ. ಯಾಕೆ ಎಂಪಿ ಎಂಎಲ್‌ಎ ಡೆಲ್ಲಿಗೆ ಹೋಗಿ ಕೂತಿಲ್ಲ. ಅವ್ರದ್ದು ಜನರ ಮನಸ್ಸನ್ನು ಹೊಡೆಯುವ ಕೆಲಸ ಮಾಡ್ತಾ ಹೋಗ್ತಾರೆ. ನಾವು ಕಟ್ಟುತ್ತಾ ಹೋಗುತ್ತೇವೆ’ ಎಂದು ಟೀಕಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು