12:07 PM Friday14 - November 2025
ಬ್ರೇಕಿಂಗ್ ನ್ಯೂಸ್
ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ… ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್ ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ… ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ… ಕುಶಾಲನಗರದಲ್ಲಿ 8.60 ಕೋಟಿ ವೆಚ್ಚದ ಪ್ರಜಾಸೌಧ ತಾಲೂಕು ಆಡಳಿತ ಭವನ ನಿರ್ಮಾಣಕ್ಕೆ ಭೂಮಿ… ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು; ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ… Mysore | ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆ: ಕೊಡಗು ಜಿಲ್ಲೆಯ ಇಬ್ಬರ…

ಇತ್ತೀಚಿನ ಸುದ್ದಿ

ಸರಕಾರ ಕಾರ್ಯಕ್ರಮವನ್ನು ಸಂಘದ ಕಾರ್ಯಕ್ರಮದಂತೆ ಬಿಜೆಪಿ ಮಾಡುತ್ತಿದೆ: ಮಾಜಿ ಸಚಿವ ರೈ ಆರೋಪ

17/11/2022, 23:20

ಮಂಗಳೂರು(reporterkarnataka.com): ರಾಜ್ಯ ಬಿಜೆಪಿ ಸರಕಾರ ಆಡಳಿತ ಯಂತ್ರವನ್ನು ದುರುಪಯೋಗ ಪಡಿಸುವ ಕೆಲಸ ಮಾಡುತ್ತಿದೆ. ಸರಕಾರಿ ಇಲಾಖೆ ಅಧಿಕಾರಿಗಳ ಮೂಲಕ ಒತ್ತಡ ತಂದು ಸರಕಾರಿ ಕಾರ್ಯಕ್ರಮವನ್ನು ಸಂಘದ ಕಾರ್ಯಕ್ರಮದಂತೆ ಮಾಡುತ್ತಿದೆ ಎಂದು ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ಬಿ. ರಮಾನಾಥ ರೈ ಆರೋಪಿಸಿದ್ದಾರೆ.

ನಗರದಲ್ಲಿ ಗುರುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಕೆಲವು ಅಂಗನವಾಡಿ ಕಾರ್ಯಕರ್ತರು ಮೋದಿ ಕಾರ್ಯಕ್ರಮದಲ್ಲಿ ಭಾಗವಹಿಸಿಲ್ಲ ಎನ್ನುವ ಕಾರಣಕ್ಕೆ ತರಾಟೆಗೆ ತೆಗೆದುಕೊಂಡಿದ್ದು ಸರಿಯಲ್ಲ ಎಂದರು.
ಇದಲ್ಲದೆ ಕನ್ನಡ ಶಾಲಾ ಮಕ್ಕಳ ಹಬ್ಬ ಎನ್ನುವ ಸರಕಾರಿ ಕಾರ್ಯಕ್ರಮವನ್ನು ಮಾಡಲಾಗಿದ್ದು, ಬಿಜೆಪಿಯ ಕೇಶವ ಸಂವರ್ಧನ ಸಮಿತಿ ಸಹಯೋಗದೊಂದಿಗೆ ಮಾಡಿದ್ದಾರೆ.

ಆರ್‌ಎಸ್‌ಎಸ್‌ನ ಸಂಘನಿಕೇತನದಲ್ಲಿ ಈ ಕಾರ್ಯಕ್ರಮವನ್ನು ಇಟ್ಟುಕೊಂಡಿದ್ದಾರೆ.

ಮಕ್ಕಳ ಪ್ರತಿಭಾ ಪ್ರದರ್ಶನ ಮಾಡಲು ಡಿಡಿಪಿಐ ಸುತ್ತೋಲೆ ಕಳುಹಿಸಿದ್ದಾರೆ. ಈ ಕಾರ್ಯಕ್ರಮವನ್ನು ಸರಕಾರಿ ಶಾಲೆಯಲ್ಲಿ ಮಾಡಬಹುದಾಗಿತ್ತಲ್ಲವೇ ಎಂದು ಪ್ರಶ್ನಿಸಿದರು.

ಇಲಾಖೆಯನ್ನು ಆಡಳಿತ ಯಂತ್ರವನ್ನು ದುರುಪಯೋಗವನ್ನು ಮಾಡುವುದನ್ನು ನಾವು ಬಿಡಲಾರೆವು ಎಂದರು.
ಸುದ್ದಿಗೋಷ್ಠಿಯಲ್ಲಿ ನಾಯಕರಾದ ಕೋಡಿಜಾಲ್ ಇಬ್ರಾಹಿಂ ಚಂದ್ರಪ್ರಕಾಶ್ ಶೆಟ್ಟಿ ಮೊದಲಾದವರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು