9:47 AM Saturday4 - April 2026
ಬ್ರೇಕಿಂಗ್ ನ್ಯೂಸ್
ವಾರ್ ಎಫೆಕ್ಟ್‌‌ | ಇವಿಗೆ ಹೆಚ್ಚಿದ ಡಿಮ್ಯಾಂಡ್: ತಿಂಗಳಲ್ಲಿ 29 ಸಾವಿರಕ್ಕೂ ಅಧಿಕ… ಗೋಪಾಲಪುರದ ಸಂತ ಅಂತೋಣಿ ಚರ್ಚ್ ನಲ್ಲಿ ಗುಡ್ ಫ್ರೈಡೆಯನ್ನು ಶಿಲುಬೆಟ್ಟದಲ್ಲಿ ಶ್ರದ್ದಾ ಭಕ್ತಿಯಿಂದ… ವಿರಾಜಪೇಟೆಯಲ್ಲಿ ಸಂಭ್ರಮದ ಹನುಮ ಜಯಂತಿ ಆಚರಣೆ: ಸಹಸ್ರಾರು ಸಂಖ್ಯೆಯಲ್ಲಿ ಸಮಾಗಮ ಪಾಟೀಲ್ – ಯತ್ನಾಳ್ ವಾಕ್ಸಮರ | ಒಂದು ದಿನ ಅವರೇ ಅಪ್ಪ-ಮಕ್ಕಳನ್ನು ಕೈಬಿಟ್ಟು… ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ

ಇತ್ತೀಚಿನ ಸುದ್ದಿ

ಮಂಗಳೂರು: ವ್ಯಾಪಕವಾಗಿ ಹಬ್ಬುತ್ತಿರುವ ಕೆಂಗಣ್ಣು; ಶಾಲಾ ಮಕ್ಕಳೇ ಟಾರ್ಗೆಟ್; ಭಯ ಬೇಡ ಎಂದ ವೈದ್ಯರು

18/11/2022, 11:01

ಮಂಗಳೂರು(reporterkarnataka.com): ಕಡಲನಗರಿ ಮಂಗಳೂರು ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಕೆಂಗಣ್ಣು ಕಾಯಿಲೆ ವ್ಯಾಪಕವಾಗಿ ಹಬ್ಬುತ್ತಿದ್ದು, ಇದು ವಿಶೇಷವಾಗಿ ಶಾಲಾ ಮಕ್ಕಳಲ್ಲಿ ಕಾಣಿಸಿಕೊಂಡಿದೆ.

ಒಂದು ಅಂದಾಜು ಸಮೀಕ್ಷೆ ಪ್ರಕಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೇ. 50ರಷ್ಟು ಮಕ್ಕಳಲ್ಲಿ ಮೆಡ್ರಾಸ್ ಐ ಎಂದು ಕರೆಸಿಕೊಳ್ಳುವ ಕೆಂಗಣ್ಣು ಸಮಸ್ಯೆ ಕಂಡು ಬಂದಿದೆ. ಕಣ್ಣು ಕೆಂಪು ಮಾಡಿ ಹೋದ ಶಾಲಾ ಮಕ್ಕಳನ್ನು ವಾಪಸ್ ಕಳುಹಿಸಲಾಗುತ್ತಿದೆ. ಇನ್ನು ಕೆಲವು ಖಾಸಗಿ ಶಾಲೆಗಳಲ್ಲಿ ಕೆಂಗಣ್ಣು ಸಮಸ್ಯೆಗೆ ಗುರಿಯಾದ ಮಕ್ಕಳನ್ನು ಇತರ ಮಕ್ಕಳಿಂದ ಪ್ರತ್ಯೇಕಿಸಿ, ಡೈನಿಂಗ್ ಹಾಲ್ ನಲ್ಲಿ ಕೂರಿಸಲಾಗುತ್ತದೆ. ಹಾಗೆ ಮರುದಿನದಿಂದ ಕಾಯಿಲೆ ಗುಣ ಆಗುವ ವರೆಗೆ ಶಾಲೆಗೆ ಬರುವುದು ಬೇಡ ಎಂದು ಸೂಚಿಸಲಾಗುತ್ತಿದೆ.

ಮಕ್ಕಳು ಮಾತ್ರವಲ್ಲದೆ ವಯಸ್ಕರಿಗೆ ಕೂಡ ಕೆಂಗಣ್ಣು ಸಮಸ್ಯೆಗೆ ತುತ್ತಾಗಿದ್ದಾರೆ.ಕೆಂಗಣ್ಣು ಕಾಯಿಲೆ ಪ್ರತಿ ವರ್ಷ ಅಲ್ಲಲ್ಲಿ ಕಾಣಿಸುತ್ತಿದ್ದು, ಕಣ್ಣಿನ ಡ್ರಾಫ್ಸ್ ಮೂಲಕ ಕೆಂಗಣ್ಣನ್ನು ಗುಣಪಡಿಸಬಹುದು.

ಕೆಂಗಣ್ಣಿಗೆ ಗುರಿಯಾದವರು ಕಣ್ಣುಜ್ಜದೇ, ವೈದ್ಯರ ಸಲಹೆ ಪಡೆದು ಕಣ್ಣಿಗೆ ಡ್ರಾಫ್ಸ್ ಹಾಕಿಸಿಕೊಂಡರೆ ಶೀಘ್ರ ಗುಣಮುಖರಾಗಲು ಸಾಧ್ಯ. ಇದರ ಬಗ್ಗೆ ಯಾರೂ ಭಯಪಡುವ ಅಗತ್ಯವಿಲ್ಲ ಎಂದು ವೈದ್ಯರು ಸಲಹೆ ನೀಡುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು