3:02 PM Wednesday11 - February 2026
ಬ್ರೇಕಿಂಗ್ ನ್ಯೂಸ್
ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಇತ್ತೀಚಿನ ಸುದ್ದಿ

ತುಂಬೆ: ಮಲ ತಂದೆಯಿಂದ ಅಪ್ರಾಪ್ತ ಮಗಳ ಮೇಲೆ ನಿರಂತರ ಅತ್ಯಾಚಾರ: ಬಾಲಕಿ ಗರ್ಭವತಿ: ಆರೋಪಿ ಜೈಲುಪಾಲು

18/11/2022, 15:06

ಬಂಟ್ವಾಳ(reporterkarnataka.com): ಮಲ ತಂದೆಯೇ ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ಅತ್ಯಾಚಾರ ನಡೆಸಿ ಗರ್ಭವತಿ ಮಾಡಿಸಿದ ಭಯಾನಕ ಘಟನೆ ಬಂಟ್ವಾಳ ಸಮೀಪದ ತುಂಬೆ ಬಳಿ ನಡೆದಿದ್ದು, ಆರೋಪಿ ಮಲತಂದೆಯನ್ನು ಪೊಲೀಸರು ಬಂಧಿಸಿದ್ದಾರೆ.

ಪಾಪಿ ಆರೋಪಿಯನ್ನು ತುಂಬೆ ನಿವಾಸಿಯಾಗಿರುವ ವೆಂಕಟೇಶ ಕಾರಂತ ಎಂದು ಗುರುತಿಸಲಾಗಿದೆ. ಈ ಪಾಪಿ ಮಲ ತಂದೆಯು ಮಗಳ ಮೇಲೆ ಯೇ ಕೆಲವು ತಿಂಗಳಿನಿಂದ ನಿರಂತರ ಅತ್ಯಾಚಾರ ನಡೆಸಿದ್ದಾನೆ. ಇದರಿಂದ ಬಾಲಕಿ ಗರ್ಭವತಿಯಾಗಿದ್ದಾಳೆ ಎಂದು ತಿಳಿದು ಬಂದಿದೆ.

ವೆಂಕಟೇಶ ಕಾರಂತ ತುಂಬೆಯಲ್ಲಿ ಪುರೋಹಿತನಾಗಿ ಕೆಲಸ ಮಾಡುತ್ತಿದ್ದು, ನಿತ್ಯ ಪೂಜೆ, ಹೋಮ- ಹವನ ನಡೆಸುವ ಈತ ಮಗಳ ಮೇಲೆಯೇ ಕಳೆದ 4 ತಿಂಗಳಿನಿಂದ ನಿರಂತರವಾಗಿ ಅತ್ಯಾಚಾರ ಮಾಡುತ್ತಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಬಾಲಕಿಯ ತಂದೆ ಅಪಘಾತದಲ್ಲಿ ಮರಣ ಹೊಂದಿದ ನಂತರ ಆಕೆಯ ತಾಯಿ ಎರಡನೇ ಮದುವೆಯಾಗಿದ್ದು, ಬಾಲಕಿಯೂ ಕೂಡ ಇವರ ಜೊತೆಯಲ್ಲಿ ವಾಸವಾಗಿದ್ದಳು ಎಂದು ತಿಳಿದು ಬಂದಿದೆ.
ಅಪ್ರಾಪ್ತ ಬಾಲಕಿಯನ್ನು 4 ತಿಂಗಳ ಗರ್ಭವತಿ ಮಾಡಿದ ಆರೋಪದ ಮೇಲೆ ಬಾಲಕಿಯ ಮಲತಂದೆಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು