7:45 PM Friday21 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಕಾಂಗ್ರೆಸ್ ಮುಖಂಡೆ ಗಾಯತ್ರಿ ಶಾಂತೇಗೌಡ ಮನೆ ಮೇಲೆ ಐಟಿ ದಾಳಿ; ರಸ್ತೆ ಬಂದ್

18/11/2022, 14:58

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

Info.reporterkarnataka.com

ಚಿಕ್ಕಮಗಳೂರಿನ ಪ್ರಭಾವಿ‌ ಕಾಂಗ್ರೆಸ್ ಮುಖಂಡೆ, ಮಾಜಿ ಎಂಎಲ್ ಸಿ ಗಾಯತ್ರಿ ಶಾಂತೇಗೌಡ ಮನೆ ಮೇಲಿನ ಐಟಿ ದಾಳಿ ಇಂದೂ ಕೂಡ ಮುಂದುವರೆದಿದೆ. ಸತತ ಎರಡನೇ ದಿನವೂ ಐಟಿ ಅಧಿಕಾರಿಗಳ ಶೋಧ ಮುಂದುವರೆದಿದೆ.


ನಿನ್ನೆಯಿಂದ ದಾಳಿ ನಡೆಯುತ್ತಿದ್ದರು ಕೂಡ ಗಾಯತ್ರಿ ಶಾಂತೇಗೌಡ ಬೆಂಗಳೂರಿನಲ್ಲಿ ಇದ್ದು, ಈವರೆಗೂ ಮನೆಗೆ ಬಂದಿಲ್ಲ. ನಿನ್ನೆ ಗಾಯತ್ರಿ ಮನೆ ಮುಂದೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ ಹಿನ್ನೆಲೆ ಗಾಯತ್ರಿ ನಿವಾಸದ ಮುಂದಿನ ರಸ್ತೆಯನ್ನ ಪೊಲೀಸರು ಕಂಪ್ಲೀಟ್ ಕ್ಲೋಸ್ ಮಾಡಿದ್ದಾರೆ.


ಸಾರ್ವಜನಿಕರು ಓಡಾಡದಂತೆ ಎರಡು ಬದಿಯಲ್ಲಿ ಬ್ಯಾರಿಕೇಡ್ ಹಾಕಿ ಬಂದ್ ಮಾಡಿದ್ದಾರೆ. ಇನ್ನು ಈ ದಾಳಿಯನ್ನ ಖಂಡಿಸಿ ಜಿಲ್ಲಾ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಿದ್ದಾರೆ. ಐಟಿ ಅಧಿಕಾರಿಗಳು ರಾಜಕೀಯ ಪ್ರೇರಿತವಾಗಿ ದಾಳಿ ಮಾಡಿದ್ದಾರೆ.ಭ್ರಷ್ಟಾಚಾರ ವಿರೋಧಿಸಿ ಕಡೂರು ತಾಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿದ 10ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಪ್ರಕರಣ ದಾಖಲಿಸಿದ್ದಾರೆ. ಸರ್ಕಾರ ಪೊಲೀಸ್ ಹಾಗೂ ಅಧಿಕಾರಿಗಳನ್ನು ಕೈ ಗೊಂಬೆಗಳಂತೆ ಬಳಸಿಕೊಳ್ಳುತ್ತಿದ್ದಾರೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು