3:53 AM Wednesday11 - February 2026
ಬ್ರೇಕಿಂಗ್ ನ್ಯೂಸ್
ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:…

ಇತ್ತೀಚಿನ ಸುದ್ದಿ

ಹೋರಾಟಗಾರರ ಜತೆ ಕೂತು ಪ್ರಚಾರ ಪಡೆದ ಯು.ಟಿ. ಖಾದರ್ ಗೆ ಟೋಲ್ ಗೇಟ್ ತೆರವು ಮಾಡಲು ಸಾಧ್ಯವಾಯಿತೆ?: ಶಾಸಕ ಡಾ.ಭರತ್ ಶೆಟ್ಟಿ ತಿರುಗೇಟು

18/11/2022, 19:53

ಮಂಗಳೂರು(reporterkarnataka.com): ಅಧಿಕಾರದಲ್ಲಿದ್ದಾಗ ಟೋಲ್ ಗೇಟ್ ತೆರವು ಮಾಡುವ ಮಾತು ನೀಡಿ ಹೋರಾಟಗಾರರ ಜೊತೆ ಭಾಗವಹಿಸಿ ಪ್ರಚಾರ ಪಡೆದುಕೊಂಡು ಎದ್ದು ಹೋಗಿರುವ ಹೋಗಿರುವ ಶಾಸಕ ಯು. ಟಿ. ಖಾದರ್ ಅವರಿಗೆ ಟೋಲ್ ಗೇಟ್ ತೆರವಿಗೆ ಪ್ರಕ್ರಿಯೆ ಆರಂಭಿಸಲೂ ವಿಫಲರಾಗಿ, ಇದೀಗ ನನ್ನ ವಿರುದ್ಧ ಮಾತನಾಡುತ್ತಿರುವುದು ಹಾಸ್ಯಸ್ಪದ ಎಂದು ಶಾಸಕ ಡಾಕ್ಟರ್ ಭರತ್ ಶೆಟ್ಟಿ ವೈ. ಅವರು ಖಾದರ್ ಆರೋಪಕ್ಕೆ ತಿರುಗೇಟು ನೀಡಿದ್ದಾರೆ.

ರಾಜ್ಯ ಸರಕಾರದ ಪ್ರಧಾನ ಕಾರ್ಯದರ್ಶಿ ಅವರೊಂದಿಗೆ ಮಾತುಕತೆ ಮಾಡಿರುವೆ ಎಂದು ಯು.ಟಿ. ಖಾದರ್ ಹೇಳಿಕೊಂಡು ಬಂದಿದ್ದಾರೆ. ಆದರೆ ರಾಜ್ಯದಿಂದ ಕೇಂದ್ರದ ಹೆದ್ದಾರಿ ಇಲಾಖೆಗೆ
ಕಾನೂನಾತ್ಮಕವಾಗಿ ಅಧಿಕೃತ ಪತ್ರವನ್ನು ಕಳಿಸಲು ಕೂಡ ಇವರಿಗೆ ಸಾಧ್ಯವಾಗಿರಲಿಲ್ಲ.

ಇದೀಗ ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರಕಾರ
ಇರುವುದರಿಂದ ವೈಫಲ್ಯವನ್ನು ಮರೆಮಾಚಲು ಯತ್ನಿಸುತ್ತಿದ್ದಾರೆ. ಚುನಾವಣೆ ಹತ್ತಿರ ಬಂದಾಗ ಕಾಂಗ್ರೆಸ್ನಿಂದ ಇಂತಹ ಆರೋಪಗಳು ನಿರೀಕ್ಷಿತ ಎಂದು ಶಾಸಕ ಭರತ್ ಶೆಟ್ಟಿ ಪ್ರತಿಕ್ರಿಯೆ ನೀಡಿದ್ದಾರೆ.

ಇರ್ಕಾನ್ ಸಂಸ್ಥೆ ಹಾಗೂ ನವಯುಗ ಖಾಸಗಿ ಸಂಸ್ಥೆಯು ಟೋಲ್ ಗೇಟ್ ಸ್ಥಾಪಿಸಲು ಅವಕಾಶ ನೀಡುವ ಸಲುವಾಗಿ 2013ರ ಮಾರ್ಚ್ ನಲ್ಲಿ ಹೆಜಮಾಡಿ ಟೋಲ್ ಗೇಟ್, ಜೂನ್ ನಲ್ಲಿ ಸುರತ್ಕಲ್ ನಲ್ಲಿ ಟೋಲ್ ಗೇಟ್ ನಿರ್ಮಿಸಲು ಈ ಹಿಂದಿನ ಯುಪಿಎ ಸರಕಾರವೇ ರಾಜ್ಯ ಪತ್ರದಲ್ಲಿ ಅಧಿಕೃತವಾಗಿ ಪ್ರಕಟಿಸಿ ಕೊಡುಗೆ ನೀಡಿದೆ ಎಂದು ಬಹಿರಂಗ ಪಡಿಸಿರುವ ಡಾ.ಭರತ್ ಶೆಟ್ಟಿ ಅವರು,ಅಂದೇ ಹಿಂಪಡೆಯಲು ಇದ್ದ ಅವಕಾಶವನ್ನು ಕೈಚೆಲ್ಲಿರುವ ಕಾಂಗ್ರೆಸ್ ರಾಜಕೀಯಕ್ಕಾಗಿ ಇದೀಗ ಲಾಭ ಪಡೆಯಲು ಮುಂದಾಗಿದೆ ಎಂದು ಆರೋಪಿಸಿದರು.

ಆಗ 60 ಕಿಲೋಮೀಟರ್ ಒಳಗೆ ಟೋಲ್ ಗೇಟ್ ನಿರ್ಮಾಣ ಕಾನೂನಾತ್ಮಕವಾಗಿ ಸರಿಯಲ್ಲ ಎಂದು ಈ ಹಿಂದೆ ಆಡಳಿತ ನಡೆಸಿದ್ದ ಯುಪಿಎ ಸರಕಾರದ ಹೆದ್ದಾರಿ ಮಂತ್ರಿಗಳಿಗೆ ತಿಳಿದಿರಲಿಲ್ಲವೇ?
ಈಗಿನ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಸಂಸತ್ತಿನಲ್ಲಿಯೇ 60 ಕಿಲೋ ಮೀಟರ್ ವ್ಯಾಪ್ತಿಗಳಲ್ಲ ಒಂದು ಟೋಲ್ ಗೇಟ್ ಇರುವುದು ಸರಿಯಾದ ಕ್ರಮ ಎಂದು ಒಪ್ಪಿಕೊಂಡು ದೇಶದಾದ್ಯಂತ ಇರುವ ಟೋಲ್ ಗೇಟ್ ಗಳ ವಿಲೀನಕ್ಕೆ ಮುಂದಾಗಿರುವುದನ್ನು ಶಾಸಕ ಯು ಟಿ ಖಾದರ್ ಅವರು ಮುಕ್ತ ಮನಸ್ಸಿನಿಂದ ಪ್ರಶಂಶಿಸುವ ಮನಸ್ಸು ಮಾಡಬೇಕು ಎಂದು ಸಲಹೆಯನ್ನು ನೀಡಿದ್ದಾರೆ.

ನನಗೆ ಕೇವಲ ಆಶ್ವಾಸನೆ ನೀಡಿ ಹಿಂದೆ ಹೋಗುವುದರಲ್ಲಿ ಆಸಕ್ತಿ ಇಲ್ಲ. ಗಂಭೀರವಾದ ಪ್ರಯತ್ನವನ್ನು ನಡೆಸಿ ಸಂಸದರ ಮುತುವರ್ಜಿಯಲ್ಲಿ ಟೋಲ್ ಗೇಟ್ ಅನ್ನ ತೆರವುಗೊಳಿಸಲು ಯಶಸ್ವಿಯಾಗಿದ್ದೇವೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು