9:57 PM Friday21 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಕನ್ನಡ ಶಾಲೆ ಉಳಿಸುವ ಕಾರ್ಯಕ್ರಮ ಕಾಂಗ್ರೆಸ್ ಗೆ ಯಾಕೆ ಪಥ್ಯವಾಗುತ್ತಿಲ್ಲ: ಶಾಸಕ ಡಾ.ಭರತ್ ಶೆಟ್ಟಿ ಪ್ರಶ್ನೆ

18/11/2022, 22:27

ಸುರತ್ಕಲ್(reporterkarnataka.com): ಕನ್ನಡ ಶಾಲೆಯನ್ನು ಪ್ರೋತ್ಸಾಹಿಸುವ ಜತೆಗೆ, ಕನ್ನಡ ಮಾಧ್ಯಮದಲ್ಲಿ ಕಲಿಯುವ ಶಾಲಾ ಮಕ್ಕಳ ಬೌದ್ಧಿಕ ಮಟ್ಟ ಹೆಚ್ಚಿಸುವ ಹಾಗೂ ಅವರಲ್ಲಿ ಕನ್ನಡದ ಬಗ್ಗೆ ಸ್ವಾಭಿಮಾನ ಬೆಳೆಸುವ ನಿಟ್ಟಿನಲ್ಲಿ ವಿವಿಧ ಕಾರ್ಯಕ್ರಮ ಇದಾಗಿದ್ದು,ಡಾ. ಮೋಹನ್ ಆಳ್ವ ಅವರ ನೇತೃತ್ವದಲ್ಲಿ ಕನ್ನಡ ಶಾಲಾ ಮಕ್ಕಳ ಹಬ್ಬವನ್ನು ಕೇಶವ ಸ್ಮೃತಿ ಸಂವರ್ಧನಾ ಸಮಿತಿ ಮಾಡುತ್ತಿದೆ.

ಇದರಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಯಾವ ರಾಜಕೀಯ ಲಕ್ಷಣ ಕಂಡಿದೆ ಎಂದು ಶಾಸಕ ಡಾ. ಭರತ್ ಶೆಟ್ಟಿ ವೈ ಪ್ರಶ್ನಿಸಿದ್ದಾರೆ.
ಕನ್ನಡ ಶಾಲೆಗಳು ಹೆಚ್ಚಾಗಿ ಸರಕಾರದ ಶಾಲೆಗಳಾಗಿದ್ದು ಇಲ್ಲಿ ವಿದ್ಯಾರ್ಥಿಗಳು ಕಾರ್ಯಕ್ರಮ ಸೇರಲು ಆಯಾ ವಿಭಾಗದ ಶಿಕ್ಷಣ ಅಧಿಕಾರಿಗಳ ಅನುಮತಿ ಬೇಕಾಗುವುದು ಸಾಮಾನ್ಯವಾಗಿದೆ.

ಈ ನಿಟ್ಟಿನಲ್ಲಿ ಸುತ್ತೋಲೆ ಹೊರಡಿಸಿರುವುದಲ್ಲಿ ಯಾವುದೇ ಸರಕಾರಿ ಯಂತ್ರ ದುರುಪಯೋಗವಾಗಿಲ್ಲ. ಕಾಂಗ್ರೆಸ್ನ ಹಿರಿಯ ನಾಯಕನಾಗಿರುವ ರಮಾನಾಥ ರೈ ಅವರಿಗೆ ಇದರಲ್ಲಿ ರಾಜಕೀಯ ದೃಷ್ಟಿಕೋನದಿಂದ ದುರುಪಯೋಗ ಆಗಿರುವಂತೆ ಕಾಣುತ್ತಿದೆ ಎಂದು ಟೀಕಿಸಿದ್ದಾರೆ.

ಮೂರ್ತಿ ಪೂಜೆಯನ್ನ ನಿಷೇಧ ಮಾಡಿರುವ ಮುಸ್ಲಿಂ ಸಮಾಜದ ಓಲೈಕೆಗಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟಿಪ್ಪು ಜಯಂತಿ ಎಂಬ ಕಾರ್ಯಕ್ರಮ ಆರಂಭಿಸಿ ಮುಸ್ಲಿಮ್ ಸಮಾಜದಲ್ಲಿ ವಿರೋಧ ಎದುರಿಸುವಂತಾಗಿದೆ. ಹಿರಿಯ ರಾಜಕಾರಣಿ ಇಬ್ರಾಹಿಂ ಅವರು ಟಿಪ್ಪುವಿನ ಮೂರ್ತಿಯನ್ನು ನಿರ್ಮಿಸಲು ವಿರೋಧ ವ್ಯಕ್ತಪಡಿಸಿದ್ದು ಸರಿಯಾಗಿದೆ.

ಕರಾವಳಿ ಭಾಗ ಮಡಿಕೇರಿ ಹಾಗೂ ರಾಜ್ಯದಾದ್ಯಂತ ನೂರಾರು ದೇವಸ್ಥಾನಗಳ ನಾಶಕ್ಕೆ ಕಾರಣವಾದ ಹಾಗೂ ಅಮಾಯಕ ಹಿಂದುಗಳ ಸಾಮೂಹಿಕ ಕಗ್ಗೊಲೆ ನಡೆಸಿರುವ ಟಿಪ್ಪು ಜಯಂತಿ ಕಾರ್ಯಕ್ರಮ ಭಾರತಕ್ಕೆ ಅದರಲ್ಲೂ ಕರ್ನಾಟಕ ರಾಜ್ಯಕ್ಕೆ ಕಪ್ಪು ಚುಕ್ಕೆಯಾಗಿದೆ ಎಂದು ಶಾಸಕ ಡಾ.ಭರತ್ ಶೆಟ್ಟಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು