6:46 PM Monday30 - March 2026
ಬ್ರೇಕಿಂಗ್ ನ್ಯೂಸ್
ನಿಯಂತ್ರಣ ತಪ್ಪಿದ ಸರಕಾರಿ ಬಸ್: ಮಡಿಕೇರಿ ಬಸ್ ನಿಲ್ದಾಣದಲ್ಲಿ ತಪ್ಪಿದ ಭಾರಿ ದುರಂತ Madikeri | ಕೊಡಗು ಜಿಲ್ಲೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ. ಎಂ.… Kodagu | ಶನಿವಾರಸಂತೆ: ಟ್ರ್ಯಾಕ್ಟರ್ -ಕಾರು ಅಪಘಾತ; ಟ್ರ್ಯಾಕ್ಟರ್ ಚಾಲಕ ಸಾವು ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್…

ಇತ್ತೀಚಿನ ಸುದ್ದಿ

ಕನ್ನಡ ಶಾಲೆ ಉಳಿಸುವ ಕಾರ್ಯಕ್ರಮ ಕಾಂಗ್ರೆಸ್ ಗೆ ಯಾಕೆ ಪಥ್ಯವಾಗುತ್ತಿಲ್ಲ: ಶಾಸಕ ಡಾ.ಭರತ್ ಶೆಟ್ಟಿ ಪ್ರಶ್ನೆ

18/11/2022, 22:27

ಸುರತ್ಕಲ್(reporterkarnataka.com): ಕನ್ನಡ ಶಾಲೆಯನ್ನು ಪ್ರೋತ್ಸಾಹಿಸುವ ಜತೆಗೆ, ಕನ್ನಡ ಮಾಧ್ಯಮದಲ್ಲಿ ಕಲಿಯುವ ಶಾಲಾ ಮಕ್ಕಳ ಬೌದ್ಧಿಕ ಮಟ್ಟ ಹೆಚ್ಚಿಸುವ ಹಾಗೂ ಅವರಲ್ಲಿ ಕನ್ನಡದ ಬಗ್ಗೆ ಸ್ವಾಭಿಮಾನ ಬೆಳೆಸುವ ನಿಟ್ಟಿನಲ್ಲಿ ವಿವಿಧ ಕಾರ್ಯಕ್ರಮ ಇದಾಗಿದ್ದು,ಡಾ. ಮೋಹನ್ ಆಳ್ವ ಅವರ ನೇತೃತ್ವದಲ್ಲಿ ಕನ್ನಡ ಶಾಲಾ ಮಕ್ಕಳ ಹಬ್ಬವನ್ನು ಕೇಶವ ಸ್ಮೃತಿ ಸಂವರ್ಧನಾ ಸಮಿತಿ ಮಾಡುತ್ತಿದೆ.

ಇದರಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಯಾವ ರಾಜಕೀಯ ಲಕ್ಷಣ ಕಂಡಿದೆ ಎಂದು ಶಾಸಕ ಡಾ. ಭರತ್ ಶೆಟ್ಟಿ ವೈ ಪ್ರಶ್ನಿಸಿದ್ದಾರೆ.
ಕನ್ನಡ ಶಾಲೆಗಳು ಹೆಚ್ಚಾಗಿ ಸರಕಾರದ ಶಾಲೆಗಳಾಗಿದ್ದು ಇಲ್ಲಿ ವಿದ್ಯಾರ್ಥಿಗಳು ಕಾರ್ಯಕ್ರಮ ಸೇರಲು ಆಯಾ ವಿಭಾಗದ ಶಿಕ್ಷಣ ಅಧಿಕಾರಿಗಳ ಅನುಮತಿ ಬೇಕಾಗುವುದು ಸಾಮಾನ್ಯವಾಗಿದೆ.

ಈ ನಿಟ್ಟಿನಲ್ಲಿ ಸುತ್ತೋಲೆ ಹೊರಡಿಸಿರುವುದಲ್ಲಿ ಯಾವುದೇ ಸರಕಾರಿ ಯಂತ್ರ ದುರುಪಯೋಗವಾಗಿಲ್ಲ. ಕಾಂಗ್ರೆಸ್ನ ಹಿರಿಯ ನಾಯಕನಾಗಿರುವ ರಮಾನಾಥ ರೈ ಅವರಿಗೆ ಇದರಲ್ಲಿ ರಾಜಕೀಯ ದೃಷ್ಟಿಕೋನದಿಂದ ದುರುಪಯೋಗ ಆಗಿರುವಂತೆ ಕಾಣುತ್ತಿದೆ ಎಂದು ಟೀಕಿಸಿದ್ದಾರೆ.

ಮೂರ್ತಿ ಪೂಜೆಯನ್ನ ನಿಷೇಧ ಮಾಡಿರುವ ಮುಸ್ಲಿಂ ಸಮಾಜದ ಓಲೈಕೆಗಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟಿಪ್ಪು ಜಯಂತಿ ಎಂಬ ಕಾರ್ಯಕ್ರಮ ಆರಂಭಿಸಿ ಮುಸ್ಲಿಮ್ ಸಮಾಜದಲ್ಲಿ ವಿರೋಧ ಎದುರಿಸುವಂತಾಗಿದೆ. ಹಿರಿಯ ರಾಜಕಾರಣಿ ಇಬ್ರಾಹಿಂ ಅವರು ಟಿಪ್ಪುವಿನ ಮೂರ್ತಿಯನ್ನು ನಿರ್ಮಿಸಲು ವಿರೋಧ ವ್ಯಕ್ತಪಡಿಸಿದ್ದು ಸರಿಯಾಗಿದೆ.

ಕರಾವಳಿ ಭಾಗ ಮಡಿಕೇರಿ ಹಾಗೂ ರಾಜ್ಯದಾದ್ಯಂತ ನೂರಾರು ದೇವಸ್ಥಾನಗಳ ನಾಶಕ್ಕೆ ಕಾರಣವಾದ ಹಾಗೂ ಅಮಾಯಕ ಹಿಂದುಗಳ ಸಾಮೂಹಿಕ ಕಗ್ಗೊಲೆ ನಡೆಸಿರುವ ಟಿಪ್ಪು ಜಯಂತಿ ಕಾರ್ಯಕ್ರಮ ಭಾರತಕ್ಕೆ ಅದರಲ್ಲೂ ಕರ್ನಾಟಕ ರಾಜ್ಯಕ್ಕೆ ಕಪ್ಪು ಚುಕ್ಕೆಯಾಗಿದೆ ಎಂದು ಶಾಸಕ ಡಾ.ಭರತ್ ಶೆಟ್ಟಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು