8:28 AM Sunday5 - April 2026
ಬ್ರೇಕಿಂಗ್ ನ್ಯೂಸ್
Kodagu | ಕುಶಾಲನಗರ: ಹರದೂರು – ಕಾಜೂರು ಮಕಾಂ ಉರೂಸ್ ಗೆ ಚಾಲನೆ ತ.ನಾ. ಚುನಾವಣೆ | ಚಾಮರಾಜನಗರ ಸಮೀಪದ ಮೆಟ್ಟೂರು ಕ್ಷೇತ್ರದಿಂದ ವೀರಪ್ಪನ್‌ ಪುತ್ರಿ ವಿದ್ಯಾರಾಣಿ… ಅಡಿಕೆಯೊಳಗಿದ್ದ ಸ್ಫೋಟಕ ಸಿಡಿದು ಮಹಿಳೆಗೆ ಗಾಯ: ಅಡಿಕೆಯಲ್ಲಿ ಇದ್ದಿದ್ದಾದರೂ ಏನು..? ಪ್ರಕರಣದ ಸತ್ಯಾಂಶ… ನಂಜನಗೂಡು: ಶ್ರದ್ಧಾ ಭಕ್ತಿಯಿಂದ ನಡೆದ ಪುರಾಣ ಪ್ರಸಿದ್ಧ ಕಳಲೆ ಶ್ರೀ ಲಕ್ಷ್ಮಿಕಾಂತ ಸ್ವಾಮಿ… ದ್ವೇಷ ಬಿತ್ತಬೇಡಿ, ಅಭಿವೃದ್ಧಿ ನೋಡಿ: ಉಪ ಚುನಾವಣಾ ಪ್ರಚಾರದಲ್ಲಿ ಗುಡುಗಿದ ಸಿಎಂ ಸಿದ್ದರಾಮಯ್ಯ Bangalore | ರಿಕ್ಕಿ ರೈ ಲ್ಯಾಂಬೋರ್ಗಿನಿ ಕಾರು ಸೀಜ್: 35 ಲಕ್ಷ ದಂಡ ರಾಜ್ಯದ ವಿಧಾನಸಭೆ ಕ್ಷೇತ್ರಗಳಲ್ಲಿಯೂ ಬದಲಾವಣೆ ಸಾಧ್ಯತೆ: ಗೃಹ ಸಚಿವ ಡಾ. ಪರಮೇಶ್ವರ್ ವಾರ್ ಎಫೆಕ್ಟ್‌‌ | ಇವಿಗೆ ಹೆಚ್ಚಿದ ಡಿಮ್ಯಾಂಡ್: ತಿಂಗಳಲ್ಲಿ 29 ಸಾವಿರಕ್ಕೂ ಅಧಿಕ… ಗೋಪಾಲಪುರದ ಸಂತ ಅಂತೋಣಿ ಚರ್ಚ್ ನಲ್ಲಿ ಗುಡ್ ಫ್ರೈಡೆಯನ್ನು ಶಿಲುಬೆಟ್ಟದಲ್ಲಿ ಶ್ರದ್ದಾ ಭಕ್ತಿಯಿಂದ… ವಿರಾಜಪೇಟೆಯಲ್ಲಿ ಸಂಭ್ರಮದ ಹನುಮ ಜಯಂತಿ ಆಚರಣೆ: ಸಹಸ್ರಾರು ಸಂಖ್ಯೆಯಲ್ಲಿ ಸಮಾಗಮ

ಇತ್ತೀಚಿನ ಸುದ್ದಿ

ಕೋಟ್ಯಂತರ ರೂಪಾಯಿ ವಂಚನೆ ಆರೋಪ:ಸಚಿವ ಶ್ರೀರಾಮುಲು ಆಪ್ತ ಸಹಾಯಕ ರಾಜಣ್ಣ ಬಂಧನ

02/07/2021, 12:21

ಬೆಂಗಳೂರು(reporterkarnataka news): ಸಮಾಜ ಕಲ್ಯಾಣ ಸಚಿವ ಶ್ರೀರಾಮುಲು ಆಪ್ತ ಸಹಾಯಕ ರಾಜಣ್ಣ ಅವರ ಬಂಧನವಾಗಿದೆ. ನೌಕರಿ ಕೊಡಿಸುವ, ವರ್ಗಾವಣೆ ಮಾಡಿಸುವ ನೆಪ ಹೇಳಿ ಕೋಟ್ಯಂತರ ರೂ. ವಂಚಿಸಿದ ಆರೋಪದ ಮೇಲೆ ಬಂಧನ ನಡೆದಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ಬಿ. ವೈ. ವಿಜಯೇಂದ್ರ ಅವರು ನೀಡಿದ ದೂರಿನ ಹಿನ್ನೆಲೆಯಲ್ಲಿ ಬಂಧನ ನಡೆದಿದೆ.

ರಾಜಣ್ಣ ಅವರನ್ನು ಬೆಂಗಳೂರನಲ್ಲಿ ಸಚಿವ ಶ್ರೀರಾಮುಲು ಮನೆಯಿಂದ ಸಿಸಿಬಿ ತಂಡ ಬಂಧಿಸಿದೆ. ಸಚಿವರು ಕೂಡ ಆ ಸಂದರ್ಭದಲ್ಲಿ ಉಪಸ್ಥಿತರಿದ್ದರು ಎಂದು ತಿಳಿದು ಬಂದಿದೆ.

ರಾಜಣ್ಣ ಸಚಿವ ಶ್ರೀರಾಮುಲು ಜತೆಗೆ ವಿಜಯೇಂದ್ರ ಅವರ ಹೆಸರನ್ನು ಕೂಡ ದುರ್ಬಳಕೆ ಮಾಡುತ್ತಿದ್ದರು ಎಂಬ ದೂರಿನ ಹಿನ್ನೆಲೆಯಲ್ಲಿ ದಸ್ತಗಿರಿ ಮಾಡಲಾಗಿದೆ.

ರಾಜಣ್ಣ ನೌಕರಿ ಹಾಗೂ ಅಧಿಕಾರಿಗಳಿಗೆ ವರ್ಗಾವಣೆ ಆಮಿಷಯೊಡ್ಡಿ ಕೋಟ್ಯಂತರ ಹಣ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಎರಡು ದಿನಗಳ ಹಿಂದೆ ರಾಜಣ್ಣ ವಿರುದ್ಧ ಎಫ್‌ಐಆರ್​ ದಾಖಲಾಗಿತ್ತು. ಗುರುವಾರ  ಬೆಳಗ್ಗೆಯಿಂದ  ಸಿಸಿಬಿ ಪೊಲೀಸರು ಹೊಂಚು ಹಾಕಿ ಇಂದು ರಾಜಣ್ಣ ಅವರನ್ನು ಬಂಧಿಸಿದ್ದಾರೆ.

ರಾಜಣ್ಣ ಅವರು ಸಿಎಂ ಬಿಎಸ್​ ಯಡಿಯೂರಪ್ಪ ಹಾಗೂ ವಿಜಯೇಂದ್ರ ಅವರ ಹೆಸರಲ್ಲಿಯೂ ಕೂಡ ವಂಚನೆ ಮಾಡಿದ್ದಾರೆ ಅನ್ನೋ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಖುದ್ದು ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರೇ ರಾಮುಲು ಪಿಎ ವಿರುದ್ಧ ದೂರು ನೀಡಿದ್ದರು ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು