2:41 PM Wednesday11 - February 2026
ಬ್ರೇಕಿಂಗ್ ನ್ಯೂಸ್
ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಇತ್ತೀಚಿನ ಸುದ್ದಿ

ಅಂತಾರಾಷ್ಟ್ರೀಯ ಲಿಂಗಾಯತ ಯುವ ವೇದಿಕೆ: ಬೆಂಗಳೂರಿನಲ್ಲಿ ವೀರಶೈವ ಲಿಂಗಾಯತ ಗ್ಲೋಬಲ್ ಬಿಸಿನೆಸ್ ಕಾನ್‍ಕ್ಲೇವ್- 2023

19/11/2022, 13:27

ಬೆಂಗಳೂರು(reporterkarnataka.com): ಸರ್ಕಾರೇತರ ಸಂಸ್ಥೆ (ಎನ್‍ಜಿಒ) ಮತ್ತು ಲಾಭೋದ್ದೇಶವಿಲ್ಲದ ಸಾರ್ವಜನಿಕ ಸಾಮಾಜಿಕ ಟ್ರಸ್ಟ್ ಆಗಿರುವ ಅಂತಾರಾಷ್ಟ್ರೀಯ ಲಿಂಗಾಯತ ಯುವ ವೇದಿಕೆ (ಐಎಲ್‍ವೈಎಫ್) 2023ರ ಜನವರಿ 20 ರಿಂದ 22 ರವರೆಗೆ ಮೂರು ದಿನಗಳ ವೀರಶೈವ ಲಿಂಗಾಯತ ಗ್ಲೋಬಲ್ ಬಿಸಿನೆಸ್ ಕಾನ್‍ಕ್ಲೇವ್-2023 ಅನ್ನು ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಿದೆ.

ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವೀರಶೈವ ಲಿಂಗಾಯತ ಗ್ಲೋಬಲ್ ಬ್ಯುಸಿನೆಸ್ ಕಾನ್‍ಕ್ಲೇವ್‍ನ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯರಾದ ಶ್ರೀ ನವೀನ್ ಕೊಟ್ಟಿಗೆ ಅವರು, ಎಲ್ಲ ವೀರಶೈವ ಲಿಂಗಾಯತ ಸಮುದಾಯದ ಉದ್ಯಮಿಗಳನ್ನು, ಉದ್ಯಮಶೀಲರನ್ನು, ವೃತ್ತಿಪರರನ್ನು ಒಂದೇ ವೇದಿಕೆಯಡಿ ತರುವುದು ಮತ್ತು ಕೇಂದ್ರ ಹಾಗೂ ಕರ್ನಾಟಕ ಸರ್ಕಾರವು ಬಿಡುಗಡೆ ಮಾಡಿದ ಪ್ರಾಯೋಗಿಕ ಮತ್ತು ದಿಟ್ಟ ಉಪಕ್ರಮಗಳನ್ನು ಅಭಿವೃದ್ಧಿಪಡಿಸುವ ಆರ್ಥಿಕ, ಕೈಗಾರಿಕಾ, ವ್ಯಾಪಾರ ಚಟುವಟಿಕೆಗಳನ್ನು ಮುಂದುವರಿಸುವ ಮಾರ್ಗೋಪಾಯಗಳ ಬಗ್ಗೆ ಚರ್ಚಿಸುವುದು ಈ ಸಮಾವೇಶದ ಉದ್ದೇಶವಾಗಿದೆ” ಎಂದು ಹೇಳಿದರು.
ಇದಕ್ಕಾಗಿ ಐಎಲ್‍ವೈಎಫ್ ಮಹಾರಾಷ್ಟ್ರದ ವೀರಶೈವ ಇಂಟರ್‍ನ್ಯಾಶನಲ್ ಅಸೋಸಿಯೇಷನ್ (ವಿಐಎ) ನೊಂದಿಗೆ ಸಹಯೋಗ ಮಾಡಿಕೊಂಡಿದೆ ಮತ್ತು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಮತ್ತು ಬಸವ ಸಮಿತಿ ಈ ಉಪಕ್ರಮವನ್ನು ಬೆಂಬಲಿಸಿವೆ.

ಐಎಲ್‍ವೈಎಫ್ ಅನ್ನು ರಾಜಕೀಯ ರಹಿತವಾಗಿ ರೂಪಿಸಲಾಗಿದೆ ಮತ್ತಿದು ಧಾರ್ಮಿಕ ಚಟುವಟಿಕೆಗಳಿಗೆ ಇರುವ ಸಂಘಟನೆ ಅಲ್ಲ. ವಾಣಿಜ್ಯೋದ್ಯಮ ನೀತಿಯನ್ನು ಪೋಷಿಸುವುದು, ಯುವಕರ ಸಾಮಾಜಿಕ- ಆರ್ಥಿಕ ಸಬಲೀಕರಣವನ್ನು ಪೋಷಿಸುವುದು ಮತ್ತು ರಾಷ್ಟ್ರ ನಿರ್ಮಾಣದ ಏಕ-ಮನಸ್ಸಿನ ಉದ್ದೇಶದೊಂದಿಗೆ ಸಾಮಾಜಿಕ ಚಟುವಟಿಕೆಗಳನ್ನು ಮುಂದುವರಿಸುವುದು ಇದರ ಮುಖ್ಯ ಉದ್ದೇಶವಾಗಿದೆ. ಕಾಕತಾಳೀಯವಾಗಿ 2013 ರಲ್ಲಿ ಪ್ರಾರಂಭವಾದ ಐಎಲ್‍ವೈಎಫ್ 2023ರಲ್ಲಿ ತನ್ನ 10ನೇ ವಾರ್ಷಿಕೋತ್ಸವವನ್ನು ಆಚರಿಸಿಕೊಳ್ಳುತ್ತಿದೆ.
ಸಮಾನ ಮನಸ್ಕ ಪ್ರಗತಿಪರ ಯುವ ಉದ್ಯಮಿಗಳ ಒಂದು ಉಪಕ್ರಮ ಎನಿಸಿದ ಐಎಲ್‍ವೈಎಫ್ ತನ್ನ ಆರ್ಥಿಕ ಸಬಲೀಕರಣದ ಉಪಕ್ರಮದ ಭಾಗವಾಗಿ, ವೃತ್ತಿಪರ ತರಬೇತಿ, ಜ್ಞಾನ ಹಂಚಿಕೆ ಸಂಪನ್ಮೂಲಗಳನ್ನು ನೀಡುತ್ತಿದೆ, ಯುವಕರಿಗೆ ತಮ್ಮ ಕೌಶಲ್ಯವನ್ನು ಪ್ರದರ್ಶಿಸಲು ಮತ್ತು ಹೊಸ ಸ್ಟಾರ್ಟ್- ಅಪ್‍ಗಳಿಗೆ ಮಾರ್ಗದರ್ಶನ ನೀಡಲು ಅನನ್ಯ ವೇದಿಕೆಯನ್ನು ನೀಡುತ್ತಿದೆ.
ಐಎಲ್‍ವೈಎಫ್ ಎಲ್ಲಾ ಉದ್ಯಮದ ಪರಿಣತರು, ಜಾಗತಿಕ ವಾಣಿಜ್ಯೋದ್ಯಮಿಗಳು, ವ್ಯಾಪಾರ ನಾಯಕರು, ನೀತಿ ನಿರೂಪಕರು, ಅಧಿಕಾರಿಗಳು ಮತ್ತು ಎಲ್ಲಾ ಪಾಲುದಾರರನ್ನು ಬೆಂಬಲಿಸಲು ಮತ್ತು ಈ ವ್ಯಾಪಾರದ ಸಮಾವೇಶವನ್ನು ಒಂದು ದೊಡ್ಡ ಯಶಸ್ಸಿನಲ್ಲಿ ಭಾಗವಹಿಸಲು ಆತ್ಮೀಯವಾಗಿ ಆಹ್ವಾನಿಸುತ್ತದೆ. ಇದು ಇಡೀ ಸಮುದಾಯವನ್ನು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಸಬಲೀಕರಣಗೊಳಿಸುವಲ್ಲಿ ಬಹಳ ದೂರ ಸಾಗಲಿದೆ ಎಂಬುದು ನಮಗೆ ಖಚಿತವಾಗಿದೆ.
ವೀರಶೈವ ಲಿಂಗಾಯತ ಗ್ಲೋಬಲ್ ಬ್ಯುಸಿನೆಸ್ ಕಾನ್‍ಕ್ಲೇವ್‍ನ ಮುಖ್ಯ ಸಂಚಾಲಕ ಶ್ರೀ ಸಂತೋಷ ಕೆಂಚಾಂಬ ಮತ್ತು ಅಂತಾರಾಷ್ಟ್ರೀಯ ಲಿಂಗಾಯತ ಯುವ ವೇದಿಕೆ ಬೆಂಗಳೂರು ವಿಭಾಗದ ಅಧ್ಯಕ್ಷೆ ನೇತ್ರಾವತಿ ಚನ್ನಪ್ಪ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು