4:58 AM Friday24 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ಕೂಡ್ಲಿಗಿ: ಸಮರ್ಪಕ ಸರಕಾರಿ ಬಸ್ ಸೌಲಭ್ಯ ಕಲ್ಪಿಸಲು ವಿದ್ಯಾರ್ಥಿಗಳ ಭಾರಿ ಪ್ರತಿಭಟನೆ: ಕಚೇರಿಗೆ ದಿಢೀರ್ ಮುತ್ತಿಗೆ

19/11/2022, 18:22

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporter Karnataka@gmail.com

ವಿಜಯನಗರ ಜಿಲ್ಲೆ ಕೂಡ್ಲಿಗಿ ಪಟ್ಟಣದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಬಸ್ ಘಟಕದಿಂದ. ಗ್ರಾಮೀಣ ಭಾಗಗಳಿಗೆ ಹಾಗೂ ಬಹುತೇಕ ವಿದ್ಯಾಭ್ಯಾಸಕ್ಕಾಗಿ ತೆರಳುವ ಮಾರ್ಗಕ್ಕೆ,ಸಮಯಕ್ಕೆ ಸರಿಯಾಗಿ ಸಂಪರ್ಕ ಕಲ್ಪಿಸುವಂತೆ ವಿದ್ಯಾರ್ಥಿಗಳು ಘಟಕದ ಅಧಿಕಾರಿಗಳಿಗೆ ಒತ್ತಾಯಿಸಿದ್ದಾರೆ.

ಹೋರಾಟಗಾರರಾದ ಹೆಚ್.ವೀರಣ್ಣ ಹಾಗೂ ಮರಬನಳ್ಳಿ ಕರಿಯಪ್ಪ ನೇತೃತ್ವದಲ್ಲಿ, ಪಟ್ಟಣ ಸೇರಿದಂತೆ ತಾಲೂಕಿನ ವಿವಿಧ ಭಾಗಗಳ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಅಧಿಕಾರಿಗಳ ಘಟಕ ಅಧಿಕಾರಿಗಳ ಕಚೇರಿಗೆ ದಿಢೀರ್ ಮುತ್ತಿಗೆ ಹಾಕಿ ಒತ್ತಾಯಿಸಿದ್ದಾರೆ.

ಕೂಡ್ಲಿಗಿ ಯಿಂದ ಕೊಟ್ಟೂರು ಮಾರ್ಗದ ಬಸ್ ಗಳನ್ನು ನೂರಾರು ವಿದ್ಯಾರ್ಥಿಗಳು ಅವಲಂಬಿಸಿದ್ದಾರೆ, ಕಾರಣ ಪ್ರತಿದಿನಾಲು ಬೆಳಿಗ್ಗೆ 8ರಿಂದ10 ಗಂಟೆ ಒಳಗೆ ಘಟಕದಿಂದ ಹೊರಡುವಂತೆ. ಸೂಕ್ತ ಕ್ರಮ ಕೈಗೊಳ್ಳಬೇಕೆಂದು ನೆರೆದ ನೂರಾರು ವಿದ್ಯಾರ್ಥಿಗಳು ಸಾರ್ವಜನಿಕರು ಹೋರಾಟಗಾರರು , ಘಟಕದ ಅಧಿಕಾರಿಗಳಲ್ಲಿ ಕೋರಿದ್ದಾರೆ. ಕೂಡ್ಲಿಗಿ ಕೊಟ್ಟೂರು ಹರಪನಹಳ್ಳಿ ಮಾರ್ಗ ಸೇರಿದಂತೆ, ತಾಲೂಕಿನ ಗ್ರಾಮೀಣ ಭಾಗಗಳಿಗೆ ವಿದ್ಯಾರ್ಥಿಗಳಿಗೆ ಅನುಕೂಲವಾಗೋ ಸಮಯಕ್ಕೆ ಬಸ್ ಸೌಲಭ್ಯ ಕಲ್ಪಿಸುವಂತೆ ವಿದ್ಯಾರ್ಥಿಗಳು ಕೋರಿದರು. ಘಟಕ ವ್ಯವಸ್ಥಾಪಕರು ವಿದ್ಯಾರ್ಥಿಗಳ ಅಹವಾಲಿಗೆ ಶೀಘ್ರವೇ ಸ್ಪಂದಿಸುವ ಭರವಸೆ ನೀಡಿದರು, ತದನಂತರ ವಿದ್ಯಾರ್ಥಿಗಳು ಹೋರಾಟಗಾರರು ಘಟಕ ಅಧಿಕಾರಿ ಕಚೇರಿಯಿಂದ ಬಸ್ ನಿಲ್ದಾಣದತ್ತ ನಡೆದರು.

ಇತ್ತೀಚಿನ ಸುದ್ದಿ

ಜಾಹೀರಾತು