7:01 PM Monday30 - March 2026
ಬ್ರೇಕಿಂಗ್ ನ್ಯೂಸ್
ನಿಯಂತ್ರಣ ತಪ್ಪಿದ ಸರಕಾರಿ ಬಸ್: ಮಡಿಕೇರಿ ಬಸ್ ನಿಲ್ದಾಣದಲ್ಲಿ ತಪ್ಪಿದ ಭಾರಿ ದುರಂತ Madikeri | ಕೊಡಗು ಜಿಲ್ಲೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ. ಎಂ.… Kodagu | ಶನಿವಾರಸಂತೆ: ಟ್ರ್ಯಾಕ್ಟರ್ -ಕಾರು ಅಪಘಾತ; ಟ್ರ್ಯಾಕ್ಟರ್ ಚಾಲಕ ಸಾವು ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್…

ಇತ್ತೀಚಿನ ಸುದ್ದಿ

ಮಂಗಳೂರು ಸಹಿತ ರಾಜ್ಯದಲ್ಲಿ 6 ಹೊಸ ನಗರಗಳ ನಿರ್ಮಾಣ: ಟೆಕ್ ಸಮ್ಮೇಳನದಲ್ಲಿ ಮುಖ್ಯಮಂತ್ರಿ ಘೋಷಣೆ

19/11/2022, 20:08

ಬೆಂಗಳೂರು(reporterkarnataka.com): ರಾಜ್ಯದಲ್ಲಿ ಮಂಗಳೂರು ಸೇರಿದಂತೆ 6 ಹೊಸ ನಗರಗಳ ನಿರ್ಮಾಣ ಮಾಡಲಾಗುತ್ತಿದೆ. ಮಂಗಳೂರು, ಕಲಬುರಗಿ, ಹುಬ್ಬಳ್ಳಿ ಧಾರವಾಡ ಹಾಗೂ ಮೈಸೂರು ಸುತ್ತ ಹೊಸ ನಗರಗಳು ನಿರ್ಮಾಣವಾಗಲಿವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಅವರು ವರ್ಚುಯಲ್ ಆಗಿ ಉದ್ಘಾಟಿಸಿದ, ಬೆಂಗಳೂರು ಅರಮನೆ ಮೈದಾನದಲ್ಲಿ ನಡೆಯುತ್ತಿರುವ 3 ದಿನಗಳ ಟೆಕ್ ಸಮ್ಮೇಳನ ರಜತ ಮಹೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಬೆಂಗಳೂರಿನ ಪಕ್ಕ ಹೊಸ ನಗರ ನಿರ್ಮಾಣ ಮಾಡಲಾಗುತ್ತದೆ. ಜ್ಞಾನ, ವಿಜ್ಞಾನ ಹಾಗೂ ಟೆಕ್ ಸಿಟಿ ನಿರ್ಮಾಣ ಮಾಡಲಾಗುತ್ತಿದ್ದು, ಇದು ವಿಮಾನ ನಿಲ್ದಾಣಕ್ಕೆ ಹತ್ತಿರವಿರಲಿದೆ. 6 ತಿಂಗಳೊಳಗೆ ಈ ನಗರ ನಿರ್ಮಾಣದ ಬಗ್ಗೆ ಘೋಷಣೆ ಮಾಡಲಿದ್ದು, ಯೋಜನೆಯನ್ನು ರೂಪಿಸಲಾಗುವುದು. ಸ್ಟಾರ್ಟ್ ಅಪ್‌ಗಳನ್ನು ಪ್ರೋತ್ಸಾಹಿಸಲು ಅನೇಕ ಕಾರ್ಯಕ್ರಮಗಳಿದ್ದು, ಸರ್ಕಾರದ ವತಿಯಿಂದ ಇನ್ನಷ್ಟು ಕಾರ್ಯಕ್ರಮ ರೂಪಿಸಬೇಕಿದೆ. ಸ್ಟಾರ್ಟ್ ಅಪ್ ಪಾರ್ಕ್ ನಿರ್ಮಾಣಕ್ಕೆ ತೀರ್ಮಾನಿಸಿದ್ದು ಇದೂ ಕೂಡ 6 ತಿಂಗಳಲ್ಲಿ ಸ್ಥಾಪಿಸಲಾಗುವುದು ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು