5:42 AM Saturday22 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ದೆಹಲಿ ಯುವತಿಯ ಬರ್ಬರ ಹತ್ಯೆ: ಪ್ರತಿಪಕ್ಷದ ಉಪ ನಾಯಕ ಯು.ಟಿ. ಖಾದರ್ ಖಂಡನೆ

20/11/2022, 10:41

ಮಂಗಳೂರು(reporterkarnataka.com): ದೆಹಲಿಯಲ್ಲಿ ಬೆಳಕಿಗೆ ಬಂದ ಶ್ರದ್ಧಾ ಎಂಬ ಯುವತಿಯನ್ನು ಅಫ್ತಾಬ್ ಎಂಬ ಯುವಕ ಬರ್ಬರ ರೀತಿಯಲ್ಲಿ ಹತ್ಯೆಗೈದ ಘಟನೆಯ ಬಗ್ಗೆ ಮಾಜಿ ಸಚಿವ, ಪ್ರತಿಪಕ್ಷದ ಉಪ ನಾಯಕ ಯು.ಟಿ.ಖಾದರ್ ತೀವ್ರ ಖಂಡಿಸಿದ್ದಾರೆ.

ಘಟನೆಯ ಬಗ್ಗೆ ಕೂಲಂಕುಷ ತನಿಖೆ ನಡೆಸಿ ಆರೋಪಿ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಕೇಂದ್ರ ಸರಕಾರವನ್ನು ಆಗ್ರಹಿಸಿದ ಖಾದರ್ , ಘಟನೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.
ಇತ್ತೀಚಿಗೆ ಸಮಾಜದಲ್ಲಿ ಯುವ ಜನಾಂಗ ಮಾದಕ ವ್ಯಸನಕ್ಕೆ ಒಳಗಾದ ಪರಿಣಾಮ ಇಂಥಹ ಘಟನೆಗಳು ಮರುಕಳಿಸುವುದಕ್ಕೆ ಸಾಕ್ಷಿ.ದುಷ್ಚಟಗಳಿಗೆ ಬಲಿಯಾಗಿ ಯುವ ಜನಾಂಗ ತಮ್ಮ ಜೀವನವನ್ನು ಹಾಳುಗೆಡುವುತ್ತಿದ್ದಾರೆ.ಈ ಬಗ್ಗೆ ಕೇಂದ್ರ ಸರಕಾರ ಎಚ್ಚೆತ್ತುಕೊಂಡು ಮಾದಕ ದ್ರವ್ಯಗಳನ್ನು ಪೂರೈಕೆ ಮಾಡುವವರ ಬಗ್ಗೆ ತೀವ್ರ ನಿಗಾ ವಹಿಸಿ ಹಾಗೂ ಯುವ ಸಮೂಹವನ್ನು ದುಷ್ಚಟದಿಂದ ದೂರ ಇಡಲು ಸೂಕ್ತ ಕಾನೂನನ್ನು ಜಾರಿಗೆ ತರಲಿ ಎಂದು ಖಾದರ್ ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು