10:12 AM Wednesday24 - September 2025
ಬ್ರೇಕಿಂಗ್ ನ್ಯೂಸ್
Kodagu | ವಿರಾಜಪೇಟೆ, ಕುಶಾಲನಗರ ಮತ್ತು ಹುದಿಕೇರಿ ಆಸ್ಪತ್ರೆ ಮೇಲ್ದರ್ಜೆಗೆ: ಆರೋಗ್ಯ ಸಚಿವ… ಪಂಚ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಮಹಿಳೆಯರ ಬದುಕು ಸುಧಾರಣೆ: ಮಹಿಳಾ ದಸರಾ ಉದ್ಘಾಟಿಸಿ… ಪೊನ್ನಂಪೇಟೆ ಕೋಣಗೇರಿಯಲ್ಲಿ ಸೈನಿಕ ಪತಿಯಿಂದಲೇ ಪತ್ನಿಗೆ ಗುಂಡು: ಮೈಸೂರಿಗೆ ರವಾನೆ ಗೋಣಿಕೊಪ್ಪಲು ಬಿಟ್ಟಂಗಾಲ ಮುಖ್ಯರಸ್ತೆಯಲ್ಲಿ ಖಾಸಗಿ ಬಸ್ – ಜೀಪು ಅಪಘಾತ: ಅದೃಷ್ಟವಶಾತ್ ಎಲ್ಲರೂ… Kodagu | ಐತಿಹಾಸಿಕ ಮಡಿಕೇರಿ ದಸರಾಕ್ಕೆ ಚಾಲನೆ: 4 ಶಕ್ತಿ ದೇವತೆಗಳಿಗೆ ವಿಶೇಷ… ಮುಂದಿನ ಒಲಂಪಿಕ್ಸ್ ಪದಕ ವಿಜೇತರಿಗೆ ಸರ್ಕಾರದಿಂದ 6 ಕೋಟಿ ನಗದು ಬಹುಮಾನ: ಮುಖ್ಯಮಂತ್ರಿ… ಜಿಎಸ್ ಟಿ ಜಾರಿ ಮಾಡಿದ್ದೂ ಮೋದಿ, ಜಿಎಸ್ ಟಿ ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ,… ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ

ಇತ್ತೀಚಿನ ಸುದ್ದಿ

ಶಹಬ್ಬಾಸ್ ಶಾಸಕರೇ..!: ಬೆಳಗಾವಿ ಸಂಬರಗಿ ಶಾಲೆಯಲ್ಲಿ ಹೆಣ್ಮಕ್ಕಳಿಗೆ, ಗಂಡು ಮಕ್ಕಳಿಗೆ ಒಂದೇ ಟಾಯ್ಲೆಟ್!

20/11/2022, 14:20

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಸಂಬರಗಿ ಗ್ರಾಮದ ಶಾಲೆಯ ಅವ್ಯವಸ್ಥೆ ಹೇಳಿತೀರದು. ಶಾಲೆಯಲ್ಕಿ ಗಂಡು ಹಾಗೂ ಹೆಣ್ಣು ಮಕ್ಕಳಿಗೆ ಪ್ರತ್ತೇಕ ಶೌಚಾಲಯ ವ್ಯವಸ್ಥೆ ಇಲ್ಲ. ಒಂದೇ ಶೌಚಾಲಯವನ್ನು ಹೆಣ್ಮಕ್ಕಳು ಗಂಡು ಮಕ್ಕಳ ಜತೆ ಹಂಚಿಕೊಳ್ಳುವ ದುಸ್ಥಿತಿ ಬಂದಿದೆ.
ಇಲ್ಲೊಬ್ಬ ಮಹಾಶಯ ಮಾಡಿದ ಘನಂಧಾರಿ ಕೆಲಸದಿಂದ ಶಾಲಾ ಮಕ್ಕಳು ನರಕ ಯಾತನೆ ಅನುಭವಿಸುವಂತಾಗಿದೆ.

ಶಾಲಾ ಹೆಣ್ಣು- ಗಂಡು ಮಕ್ಕಳಿಗೆ ಒಂದೇ ಶೌಚಾಲಯ
ವ್ಯವಸ್ಥೆ ಮಾಡಿ ಸ್ಥಳೀಯರ ನಗೆ ಪಾಟಲಿಗೆ ಒಳಗಾಗಿದ್ದಾನೆ.
15ನೇ ಹಣಕಾಸಿನ ಯೋಜನೆ ಅಡಿಯಲ್ಲಿ ಜಿಲ್ಲಾ ಪಂಚಾಯತ್ ವತಿಯಿಂದ ಮಾಡಲಾದ ಶೌಚಾಲಯಕ್ಕೆ ಎತ್ತರದ ಸಿಂಕ್ ಅಳವಡಿಸಲಾಗಿ. ಇದರಿಂದ ಹೆಣ್ಮಕ್ಕಳಿಗೆ ತೊಂದರೆಯುಂಟಾಗಿ ಪೋಷಕರ ಕೆಂಗಣ್ಣಿಗೆ ಕಾರಣವಾಗಿದ್ದಾನೆ. ಹೆಣ್ಣು ಮಕ್ಕಳಿಗೆ ಶೌಚಕ್ಕೆ ಹೋಗಲು ಸಾಕಷ್ಟು ಸಮಸ್ಯೆಯಾಗುತ್ತಿದೆ. ಶಾಲಾ ಶಿಕ್ಷಕರು ಅಧಿಕಾರಿಗಳಿಗೆ ಮನವಿ ಮಾಡಿದರೂ ಕ್ಯಾರೇ ಅನ್ನದ ಅಧಿಕಾರಿಗಳು ಜಾಣ ಮೌನಕ್ಕೆ ಶರಣಾಗಿದ್ದಾರೆ.

ಬುದ್ದಿ ಎಲ್ಲಿಟ್ಟಿದ್ರಿ ಇಂಜಿನಿಯರ್ ಸಾಹೇಬ್ರೆ….ಎಂದು ಪೋಷಕರ ಆಕ್ರೋಶ ಹೊರ ಹಾಕುತಿದ್ದಾರೆ. ಅಷ್ಟೇ ಅಲ್ಲದೆ ಶಾಲಾ ಆವರಣದಲ್ಲಿ ಗ್ರಾಮ ಪಂಚಾಯತ್ ವತಿಯಿಂದ ನಡೆಯುತ್ತಿದ್ದ ಶಾಲಾ ಆವರಣ ಅಭಿವೃದ್ಧಿ ಕಾರ್ಯ ಅರ್ಧಕ್ಕೆ ನಿಂತಿದೆ. ಇದರಿಂದ ಮಕ್ಕಳ ಅಟೊಟಕ್ಕೆ ಸಮಸ್ಯೆ ಯಾಗುತ್ತಿದೆ.

ಇದರಿಂದ ರೋಸಿ ಹೋದ ಮಕ್ಕಳ ಪೋಷಕರು ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಅಷ್ಟೇ ಅಲ್ಲದೆ ಮಕ್ಕಳ ಪ್ರಾಣಕ್ಕೆ ಸಂಚಾಕರ ತಂದೊಡ್ಡಬಲ್ಲ ಲೈಟ್ ಕಂಬ ಕೂಡ ಅವರಣದಲ್ಲೇ ಇದ್ದು ತೆರವಿಗೆ ಮನವಿ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು