1:44 AM Friday3 - May 2024
ಬ್ರೇಕಿಂಗ್ ನ್ಯೂಸ್
ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ…

ಇತ್ತೀಚಿನ ಸುದ್ದಿ

ಲಿಂಗಸುಗೂರು: ಕಂದಾಯ ದಿನಾಚರಣೆಯಲ್ಲಿ ಹಸಿರೋತ್ಸವ ಸಂಭ್ರಮ

02/07/2021, 17:44

ಅಮರೇಶ್ ಲಿಂಗಸುಗೂರು

info.reporterkarnataka@gmail.com

ಲಿಂಗಸೂಗುರು ಮಿನಿ ವಿಧಾನಸೌಧದಲ್ಲಿ ತಾಲೂಕು ಕಂದಾಯ ಇಲಾಖೆ ವತಿಯಿಂದ ಕಂದಾಯ ದಿನಾಚರಣೆ 2021ನ್ನು ಕರ್ನಾಟಕ ರಾಜ್ಯ ಗ್ರಾಮ ಲೆಕ್ಕಾಧಿಕಾರಿಗಳ ಸಂಘದಿಂದ ಈ ಬಾರಿ ವಿಶೇಷವಾಗಿ ‘ಹಸಿರೋತ್ಸವ’ ಎಂಬ ಧ್ಯೇಯ ವಾಕ್ಯದ ಸಂಕಲ್ಪದೊಂದಿಗೆ ಸಸಿ ನೆಟ್ಟು ನೀರು ಹಾಕುವ ಮೂಲಕ ಅರ್ಥ ಆಚರಿಸಲಾಯಿತು. 

ಕಾರ್ಯಕ್ರಮವನ್ನು ಉದ್ದೇಶಿಸಿ ಸಹಾಯಕ ಆಯುಕ್ತ ರಾಜಶೇಖರ ಡಂಬಳ ಮಾತನಾಡಿ,ಕಂದಾಯ ಇಲಾಖೆ ಅಂತ ಹೆಸರು ಬರೊದಕ್ಕೆ ಮೂಲ ಕಾರಣ ಇಲಾಖೆಯಿಂದ ಆದಾಯ ಬರುತ್ತಿತ್ತು. ಹಾಗಾಗಿ ಕಂದಾಯ ಇಲಾಖೆ ಅಂತ ಕರೆದರು. ಆದರೆ ಅದು ಇಂದು ಮಹತ್ವವನ್ನು ಕಳೆದುಕೊಂಡಿದೆ ಎಂದು ಹೇಳಿದರು. ಕಾರ್ಯಕ್ರಮದ ಕುರಿತು ತಹಶೀಲ್ದಾರ್ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಲಿಂಗಸೂಗೂರು ಉಪವಿಭಾಗದ ಸಹಾಯಕ ಆಯುಕ್ತ ರಾಜಶೇಖರ ಡಂಬಳ, ತಹಶೀಲ್ದಾರ್ ಚಾಮರಾಜ ಪಾಟೀಲ್, ಗ್ರೆಡ್ 2 ತಹಶೀಲ್ದಾರ್ ಬಿ.ಜಿ.ಜಳಕಿಮಠ, ಗುರುಗುಂಟಾ ಉಪ ತಹಶೀಲ್ದಾರ್ ರಂಗಪ್ಪ ನಾಯಕ ,ಕಂದಾಯ ಇಲಾಖೆಯ ನೌಕರರ ಸಂಘದ ಅಧ್ಯಕ್ಷ ರಾಮಕೃಷ್ಣ, ಕಂದಾಯ ನಿರೀಕ್ಷಕರಾದ ರಾಘವೇಂದ್ರ ಗ್ರಾಮ ಲೆಕ್ಕಾಧಿಕಾರಿ ಗಳ ಸಂಘದ ತಾಲ್ಲೂಕು ಅಧ್ಯಕ್ಷ ಅಮರೇಶ ರಾಠೋಡ್  ಸೇರಿದಂತೆ ಕಂದಾಯ ಇಲಾಖೆ ಗ್ರಾಮ ಲೆಕ್ಕಾಧಿಕಾರಿಗಳು, ತಹಶೀಲ್ದಾರ್ ಕಚೇರಿ ಸಿಬ್ಬಂದಿಗಳು ಇನ್ನಿತರರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು