2:58 PM Saturday21 - March 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ…

ಇತ್ತೀಚಿನ ಸುದ್ದಿ

ಲಿಂಗಸುಗೂರು: ಕಂದಾಯ ದಿನಾಚರಣೆಯಲ್ಲಿ ಹಸಿರೋತ್ಸವ ಸಂಭ್ರಮ

02/07/2021, 17:44

ಅಮರೇಶ್ ಲಿಂಗಸುಗೂರು

info.reporterkarnataka@gmail.com

ಲಿಂಗಸೂಗುರು ಮಿನಿ ವಿಧಾನಸೌಧದಲ್ಲಿ ತಾಲೂಕು ಕಂದಾಯ ಇಲಾಖೆ ವತಿಯಿಂದ ಕಂದಾಯ ದಿನಾಚರಣೆ 2021ನ್ನು ಕರ್ನಾಟಕ ರಾಜ್ಯ ಗ್ರಾಮ ಲೆಕ್ಕಾಧಿಕಾರಿಗಳ ಸಂಘದಿಂದ ಈ ಬಾರಿ ವಿಶೇಷವಾಗಿ ‘ಹಸಿರೋತ್ಸವ’ ಎಂಬ ಧ್ಯೇಯ ವಾಕ್ಯದ ಸಂಕಲ್ಪದೊಂದಿಗೆ ಸಸಿ ನೆಟ್ಟು ನೀರು ಹಾಕುವ ಮೂಲಕ ಅರ್ಥ ಆಚರಿಸಲಾಯಿತು. 

ಕಾರ್ಯಕ್ರಮವನ್ನು ಉದ್ದೇಶಿಸಿ ಸಹಾಯಕ ಆಯುಕ್ತ ರಾಜಶೇಖರ ಡಂಬಳ ಮಾತನಾಡಿ,ಕಂದಾಯ ಇಲಾಖೆ ಅಂತ ಹೆಸರು ಬರೊದಕ್ಕೆ ಮೂಲ ಕಾರಣ ಇಲಾಖೆಯಿಂದ ಆದಾಯ ಬರುತ್ತಿತ್ತು. ಹಾಗಾಗಿ ಕಂದಾಯ ಇಲಾಖೆ ಅಂತ ಕರೆದರು. ಆದರೆ ಅದು ಇಂದು ಮಹತ್ವವನ್ನು ಕಳೆದುಕೊಂಡಿದೆ ಎಂದು ಹೇಳಿದರು. ಕಾರ್ಯಕ್ರಮದ ಕುರಿತು ತಹಶೀಲ್ದಾರ್ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಲಿಂಗಸೂಗೂರು ಉಪವಿಭಾಗದ ಸಹಾಯಕ ಆಯುಕ್ತ ರಾಜಶೇಖರ ಡಂಬಳ, ತಹಶೀಲ್ದಾರ್ ಚಾಮರಾಜ ಪಾಟೀಲ್, ಗ್ರೆಡ್ 2 ತಹಶೀಲ್ದಾರ್ ಬಿ.ಜಿ.ಜಳಕಿಮಠ, ಗುರುಗುಂಟಾ ಉಪ ತಹಶೀಲ್ದಾರ್ ರಂಗಪ್ಪ ನಾಯಕ ,ಕಂದಾಯ ಇಲಾಖೆಯ ನೌಕರರ ಸಂಘದ ಅಧ್ಯಕ್ಷ ರಾಮಕೃಷ್ಣ, ಕಂದಾಯ ನಿರೀಕ್ಷಕರಾದ ರಾಘವೇಂದ್ರ ಗ್ರಾಮ ಲೆಕ್ಕಾಧಿಕಾರಿ ಗಳ ಸಂಘದ ತಾಲ್ಲೂಕು ಅಧ್ಯಕ್ಷ ಅಮರೇಶ ರಾಠೋಡ್  ಸೇರಿದಂತೆ ಕಂದಾಯ ಇಲಾಖೆ ಗ್ರಾಮ ಲೆಕ್ಕಾಧಿಕಾರಿಗಳು, ತಹಶೀಲ್ದಾರ್ ಕಚೇರಿ ಸಿಬ್ಬಂದಿಗಳು ಇನ್ನಿತರರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು