10:06 PM Friday3 - April 2026
ಬ್ರೇಕಿಂಗ್ ನ್ಯೂಸ್
ವಾರ್ ಎಫೆಕ್ಟ್‌‌ | ಇವಿಗೆ ಹೆಚ್ಚಿದ ಡಿಮ್ಯಾಂಡ್: ತಿಂಗಳಲ್ಲಿ 29 ಸಾವಿರಕ್ಕೂ ಅಧಿಕ… ಗೋಪಾಲಪುರದ ಸಂತ ಅಂತೋಣಿ ಚರ್ಚ್ ನಲ್ಲಿ ಗುಡ್ ಫ್ರೈಡೆಯನ್ನು ಶಿಲುಬೆಟ್ಟದಲ್ಲಿ ಶ್ರದ್ದಾ ಭಕ್ತಿಯಿಂದ… ವಿರಾಜಪೇಟೆಯಲ್ಲಿ ಸಂಭ್ರಮದ ಹನುಮ ಜಯಂತಿ ಆಚರಣೆ: ಸಹಸ್ರಾರು ಸಂಖ್ಯೆಯಲ್ಲಿ ಸಮಾಗಮ ಪಾಟೀಲ್ – ಯತ್ನಾಳ್ ವಾಕ್ಸಮರ | ಒಂದು ದಿನ ಅವರೇ ಅಪ್ಪ-ಮಕ್ಕಳನ್ನು ಕೈಬಿಟ್ಟು… ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ

ಇತ್ತೀಚಿನ ಸುದ್ದಿ

ಶಿರೂರು; ಯಕ್ಷಗಾನ ಕಲಾವಿದನ ಮನೆಯ ಬೀಗ ಒಡೆದು ಚಿನ್ನಾಭರಣ ಕಳವು: ಫೇಸ್ ಬುಕ್ ಗೆಳೆಯನ ಕೃತ್ಯ

21/11/2022, 19:45

ಕುಂದಾಪುರ(reporterkarnataka.com); ಫೇಸ್ ಬುಕ್ ಮೂಲಕ ಪರಿಚಯಗೊಂಡ ಸ್ನೇಹಿತನೊಬ್ಬ ಯಕ್ಷಗಾನ ಕಲಾವಿದನ ಮನೆಯ ಬೀಗ ಒಡೆದು ಸಾವಿರಾರು ರೂ. ಮೌಲ್ಯದ ಚಿನ್ನಾಭರಣ ಕಳವು ಮಾಡಿರುವ ಘಟನೆ ಬೈಂದೂರು ತಾಲೂಕಿನ ಶಿರೂರು ಗ್ರಾಮದಲ್ಲಿ ತಡವಾಗಿ ಬೆಳಕಿಗೆ ಬಂದಿದೆ.

ಶಿರೂರು ಗ್ರಾಮದ ಮೇಲ್ಪೇಟೆ ನಿವಾಸಿ ಸಂತೋಷ ಮೊಗವೀರ(34) ಅವರ ಮನೆಯಲ್ಲಿ ಕಳ್ಳತನ ನಡೆದಿದೆ. ಇವರು ಯಕ್ಷಗಾನ ಕಲಾವಿದರಾಗಿದ್ದು, ಚಿಕ್ಕ ಮೇಳ ಎಂಬ ಯಕ್ಷಗಾನವನ್ನು ನಡೆಸಿಕೊಂಡಿದ್ದರು. ಇವರು ಮೇಳದ ಸಾಮಾಗ್ರಿಗಳೊಂದಿಗೆ ಶಿರೂರು ಗ್ರಾಮದ ಶಿರೂರು ಮೇಲ್ಪೆಟೆ ಎಂಬಲ್ಲಿ ಸುಭಾಷ್ ಪ್ರಭು ಅವರ ಒಂದು ಕೊಠಡಿಯಲ್ಲಿ ವಾಸವಾಗಿದ್ದರು. ಇವರಿಗೆ ಎರಡು ವರ್ಷಗಳ ಹಿಂದೆ ಫೇಸ್ ಬುಕ್ ನಲ್ಲಿ‌ ಗುರುರಾಜ್ ಎಂಬವ ಪರಿಚಯವಾಗಿತ್ತು.

ನ.9ರಂದು ಸಂತೋಷ್ ಅವರ ಕೊಠಡಿಗೆ ಬಂದು ಅವರೊಂದಿಗೆ ಉಳಿದುಕೊಂಡಿದ್ದನು. ನ. 12ರಂದು ಸಂತೋಷ್ ಅವರು ಚಿಕ್ಕ ಮೇಳ ಕಾರ್ಯಕ್ರಮದ ಪ್ರಯುಕ್ತ ಕುಂದಾಪುರ ತಾಲೂಕಿನ ಹೆರಿಕುದ್ರು ಎಂಬಲ್ಲಿಗೆ ಹೊರಟಿದ್ದರು. ಅವರೊಂದಿಗೆ ಗುರುರಾಜ್ ಕೂಡ ಹೋಗಿದ್ದನು. ಈ ವೇಳೆ ಗುರುರಾಜ್ ಕಾರ್ಯಕ್ರಮ ವಿಡಿಯೋ ಮಾಡುವ ಉದ್ದೇಶದಿಂದ ಸಂತೋಷ್ ಅವರ ಮೊಬೈಲ್ ಪಡೆದಿದ್ದನು. ಬಳಿಕ ಅವರಿಗೆ ತಿಳಿಸದೇ ಶಿರೂರು ಮೇಲ್ಪೆಟೆಗೆ ಬಂದು ಸಂತೋಷ್ ವಾಸ್ಥವ್ಯವಿರುವ ಕೊಠಡಿಯ ಬೀಗವನ್ನು ಒಡೆದು ಬ್ಯಾಗ್ ನಲ್ಲಿಟ್ಟಿದ್ದ 12 ಗ್ರಾಂ  ತೂಕದ ಚಿನ್ನದ ಕೊರಳಿನ ಚೈನ್, 4 ಗ್ರಾಂ ತೂಕದ ಚಿನ್ನದ ಉಂಗುರ, ಕಾಣಿಕೆ ಡಬ್ಬಿಯಲ್ಲಿದ್ದ 10 ಸಾವಿರ ನಗದು, ಇನ್ನೊಂದು ಡಬ್ಬಿಯಲ್ಲಿದ್ದ 1 ಸಾವಿರ ರೂ. ನಗದು ಹಾಗೂ 14 ಸಾವಿರ ಮೌಲ್ಯದ Realme ಮೊಬೈಲ್ ಫೋನ್ ಅನ್ನು ಕದ್ದುಕೊಂಡು ಪರಾರಿಯಾಗಿದ್ದಾನೆ. ಕಳವಾದ ಸೊತ್ತುಗಳ ಒಟ್ಟು ಮೌಲ್ಯ 85 ಸಾವಿರ ರೂ. ಆಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಬಗ್ಗೆ ಬೈಂದೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. .  

ಇತ್ತೀಚಿನ ಸುದ್ದಿ

ಜಾಹೀರಾತು