11:28 AM Saturday22 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಸೆಂಟ್ರಲ್ ರೈಲ್ವೆ ನಿಲ್ದಾಣಕ್ಕೆ ಬ್ರಹ್ಮಶ್ರೀ ನಾರಾಯಣಗುರು, ಮಂಗಳೂರು ವಿಮಾನ ನಿಲ್ದಾಣಕ್ಕೆ ವೀರರಾಣಿ ಅಬ್ಬಕ್ಕ ಹೆಸರು: ಯು.ಟಿ.ಖಾದರ್ ಆಗ್ರಹ

21/11/2022, 21:50

ಮಂಗಳೂರು(reporterkarnataka.com): ಮಂಗಳೂರು ಸೆಂಟ್ರಲ್ ರೈಲ್ವೆ ನಿಲ್ದಾಣಕ್ಕೆ ಬ್ರಹ್ಮಶ್ರೀ ನಾರಾಯಣಗುರು ಹೆಸರನ್ನು ಹಾಗೆಯೇ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವೀರರಾಣಿ ಅಬ್ಬಕ್ಕ ಹೆಸರು ಇಡಬೇಕು ಎಂದು ಮಾಜಿ ಸಚಿವ ಯು.ಟಿ ಖಾದರ್ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಒತ್ತಾಯ ಮಾಡಿದ್ದಾರೆ.

ಮಂಗಳೂರಿನಲ್ಲಿ ಸ್ವಾತಂತ್ರ್ಯ ವೀರ ಕೆದಂಬಾಡಿ ರಾಮಯ್ಯ ಗೌಡ ಪ್ರತಿಮೆ ಅನಾವರಣ ಬಳಿಕ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ವಿಪಕ್ಷ ಉಪನಾಯಕ ಯು.ಟಿ.ಖಾದರ್, ಬಾವುಟ ಗುಡ್ಡೆಯಲ್ಲಿ ಮಾಡಲಾಗಿರುವ ಪ್ರತಿಮೆ ಅನಾವರಣ ಇಡೀ ಕರ್ನಾಟಕಕ್ಕೆ ಹೆಮ್ಮೆಯ ವಿಚಾರವಾಗಿದೆ.
ಭವಿಷ್ಯದಲ್ಲಿ ಇದು ವಿದ್ಯಾರ್ಥಿಗಳಿಗೆ ಇತಿಹಾಸ ತಿಳಿಸಲು ಅಗತ್ಯವಾಗಿದೆ.ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಲವಾರು ಸ್ವಾತಂತ್ರ್ಯ ಹೋರಾಟಗಾರರು ಜಿಲ್ಲೆಯಲ್ಲಿ ಇದ್ದಾರೆ. ಉತ್ತರ ಭಾರತದ ಸ್ವಾತಂತ್ರ್ಯ ಹೋರಾಟಗಾರರಿಗೆ ಸಿಕ್ಕ ಮಹತ್ವ ನಮ್ಮವರಿಗೆ ಸಿಕ್ಕಿಲ್ಲ.

ಹಾಗಾಗಿ ಪಠ್ಯ ಪುಸ್ತಕದಲ್ಲಿ ರಾಮಯ್ಯ ಗೌಡರ ಪಠ್ಯ ಸೇರಿಸಬೇಕು, ಸರ್ಕಾರ ಆ ನಿಟ್ಟಿನಲ್ಲಿ ಕ್ರಮವನ್ನು ಕೈಗೊಳ್ಳಬೇಕು ಎಂದು ಯು.ಟಿ.ಖಾದರ್ ಅವರು ಬೊಮ್ಮಾಯಿ ಅವರನ್ನು ಒತ್ತಾಯಿಸಿದ್ದಾರೆ.
ಸ್ವಾತಂತ್ರ್ಯ ಹೋರಾಟಗಾರರದ್ದು ಜಾತಿ, ಧರ್ಮ ಮೀರಿ ನಿಂತ ವ್ಯಕ್ತಿತ್ವವಾಗಿತ್ತು.ಸ್ವಾತಂತ್ರ್ಯ ಹೋರಾಟಗಾರರ ತತ್ವ ನಮಗೆ ಮುಖ್ಯ ಆಗಬೇಕು.ಅವರೆಲ್ಲರ ಇತಿಹಾಸಗಳು ಪಠ್ಯದಲ್ಲಿ ದಾಖಲಾಗಿ ಮುಂದಿನ ಪೀಳಿಗೆಗೆ ತಿಳಿಯುವಂತಾಗಲಿ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು