8:23 AM Tuesday18 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಸ್ಫೋಟದಿಂದ ಗಾಯಗೊಂಡ ರಿಕ್ಷಾ ಚಾಲಕರಿಗೆ ನೆರವಿನ ಭರವಸೆ: ಪದ್ಮರಾಜ್ ಸಹಿತ ಹಲವರು ಭೇಟಿ

21/11/2022, 23:51

ಮಂಗಳೂರು(reporter Karnataka.com): ರಿಕ್ಷಾ ಸ್ಫೋಟ ಪ್ರಕರಣದಲ್ಲಿ ಗಂಭೀರ ಗಾಯಗೊಂಡ ರಿಕ್ಷಾ ಚಾಲಕ ಗೋರಿಗುಡ್ಡೆ ನಿವಾಸಿ ಪುರುಷೋತ್ತಮ ಪೂಜಾರಿ ಅವರನ್ನು ಕುದೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್., ಬಿಲ್ಲವ ಬ್ರಿಗೇಡ್ ಸ್ಥಾಪಕ ಅಧ್ಯಕ್ಷ ಅವಿನಾಶ್ ಸುವರ್ಣ, ಕೃತಿನ್, ಗೆಜ್ಜೆಗಿರಿ ಕ್ಷೇತ್ರದ ವಕ್ತಾರ ರಾಜೇಂದ್ರ ಚಿಲಿಂಬಿ ಭೇಟಿಯಾಗಿ ಎಲ್ಲ ರೀತಿಯ ಸಹಾಯ ನೀಡುವುದದಾಗಿ ಭರವಸೆ ನೀಡಿದರು.
ಬಳಿಕ ಪತ್ನಿ, ಮಕ್ಕಳ ಜತೆ ಸಮಾಲೋಚನೆ ನಡೆಸಿ ಅವರಿಗೂ ಧೈರ್ಯ ತುಂಬಿದರು.

ಪುರುಷೋತ್ತಮ ಅವರು 25 ವರ್ಷಗಳಿಂದ ರಿಕ್ಷಾದಿಂದ ದುಡಿದು ಕುಟುಂಬವನ್ನು ಮುನ್ನಡೆಸುತ್ತಿದರು. ಇದೀಗ ರಿಕ್ಷಾವನ್ನು ಪೊಲೀಸರು ಮುಟ್ಟುಗೋಲು ಹಾಕಿದ್ದು ಭಯೋತ್ಪಾದಕ ಕೃತ್ಯವಾದ ಕಾರಣ ಸದ್ಯ ಬಿಡುಗಡೆ ಭಾಗ್ಯವಿಲ್ಲ. ಮಗಳಿಗೆ ಮದುವೆ ಕೂಡ ಫಿಕ್ಸ್ ಆಗಿದ್ದು ಇಂತಹ ಸಂಕಷ್ಟವನ್ನು ಅರಿತು ಅವರ ಕುಟುಂಬಕ್ಕೆ ಧೈರ್ಯ ತುಂಬಿ ನಿಮ್ಮ ಜೊತೆ ನಮ್ಮ ಸಮಾಜ ಕೂಡ ಇದೆ ಎಂದು ಧೈರ್ಯ ತುಂಬಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು