3:06 AM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ನಕಲಿ ವೀಡಿಯೊ ಪ್ರಸಾರದ ಭೀತಿ: ಕೋರ್ಟ್ ಮೊರೆ ಹೋದ ಕೇಂದ್ರ ಸಚಿವ ಸದಾನಂದ ಗೌಡ

03/07/2021, 07:56

ಬೆಂಗಳೂರು(reporterkarnataka news): ನಕಲಿ ವೀಡಿಯೊ ಪ್ರಸಾರ ಮಾಡಿ ತನ್ನ ಚಾರಿತ್ರ್ಯ ಮತ್ತು ಘನತೆಗೆ ಧಕ್ಕೆ ಉಂಟು ಮಾಡುವ ಸಾಧ್ಯತೆಯಿದೆ ಎಂಬ ನೆಲೆಯಲ್ಲಿ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಅವರು ತಮ್ಮ ಕುರಿತು ಯಾವುದೇ ಮಾನಹಾನಿಕರ ವರದಿ ಮಾಡದಂತೆ ಮಾಧ್ಯಮಗಳ ವಿರುದ್ಧ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್​ನಿಂದ ನಿರ್ಬಂಧಕಾಜ್ಞೆ ಪಡೆದಿದ್ದಾರೆ.

ಕೇಂದ್ರ ಸಂಪುಟ ಪುನಾರಚನೆ ಸಂದರ್ಭದಲ್ಲಿ ಕೆಲ ಪತ್ರಿಕೆ, ಚಾನಲ್​​ಗಳಲ್ಲಿ ತಮ್ಮ ವಿರುದ್ಧ ಸುಳ್ಳುಸುದ್ದಿ ಪ್ರಸಾರ ಮಾಡುವ ಸಾಧ್ಯತೆಯಿದೆ. ಕಿಡಿಗೇಡಿಗಳು ನಕಲಿ ಸಿಡಿ ಸೃಷ್ಟಿಸಿ ಮಾಧ್ಯಮಗಳಲ್ಲಿ ಹರಿಬಿಡುವ ಸಾಧ್ಯತೆಯೂ ಇದೆ ಎಂದು ಕೋರ್ಟ್ ಗೆ ಸಲ್ಲಿಸಿದ ಅರ್ಜಿಯಲ್ಲಿ ಸಚಿವರು ತಿಳಿಸಿದ್ದಾರೆ.

ಈ ಮುನ್ನ ಒಬಾಮಾ ಮತ್ತು ಕ್ವೀನ್ ಎಲಿಜಬೆತ್ ಅವರ ನಕಲಿ ವಿಡಿಯೋ ಮಾಡಿ ಪ್ರಸಾರ ಮಾಡಲಾಗಿತ್ತು. ಇಂಥ ವಿಡಿಯೋ ಪ್ರಸಾರವಾದರೆ ಚಾರಿತ್ರ್ಯವಧೆಯಾಗಲಿದೆ. ಘನತೆಗೆ ಧಕ್ಕೆ ಉಂಟಾಗಲಿದೆ ಎಂದು ಡಿ.ವಿ. ಸದಾನಂದಗೌಡ ಕೋರ್ಟ್ ಮೊರೆ ಹೋಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು