7:04 PM Saturday22 - August 2026
ಬ್ರೇಕಿಂಗ್ ನ್ಯೂಸ್
ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್…

ಇತ್ತೀಚಿನ ಸುದ್ದಿ

ಪುದುವೆಟ್ಟು: ಮನೆಯಂಗಳದಲ್ಲಿ ಅಪ್ಪ- ಮಗನ ಶವ ಪತ್ತೆ; ವಿಷಪೂರಿತ ಅಣಬೆ ಸೇವನೆಯಿಂದ ಸಾವು?

23/11/2022, 19:52

ಬೆಳ್ತಂಗಡಿ(reporterkarnataka.com): ವಿಷಪೂರಿತ ಅಣಬೆ ಪದಾರ್ಥ ಸೇವಿಸಿ ಕುಟುಂಬದ ಇಬ್ಬರು ಸಾವನ್ನಪ್ಪಿದ ಘಟನೆ ಪುದುವೆಟ್ಟು ಸಮೀಪದ ಪಲ್ಲದಪಲ್ಕೆ ಎಂಬಲ್ಲಿ ನಡೆದಿದೆ.

ಮನೆಯ ಅಂಗಳದಲ್ಲಿ ಇಬ್ಬರ ಮೃತದೇಹ ಪತ್ತೆಯಾಗಿತ್ತು.
ಮೃತರನ್ನು ಮೀಯಾರುಪಾದೆ ಕೇರಿಮಾರು ನಿವಾಸಿಗಳಾದ ಗುರುವ(70) ಹಾಗೂ ಅವರ ಪುತ್ರ ಓಡಿ(45) ಎಂದು ಗುರುತಿಸಲಾಗಿದೆ.
ಮನೆಯಲ್ಲಿ ಗುರುವ ಮತ್ತು ಇಬ್ಬರು ಪುತ್ರರು ವಾಸವಾಗಿದ್ದರು.

ಮಂಗಳವಾರ ಇವರ ಇಬ್ಬರ ಮೃತದೇಹ‌ ಮನೆ ಮುಂಭಾಗ ಬಿದ್ದಿರುವುದನ್ನು ಸ್ಥಳೀಯರು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ರಾತ್ರಿ ಕಾಡಿನ ವಿಷಪೂರಿತ ಅಣಬೆಯನ್ನು ಅಡುಗೆ ಮಾಡಿ ಸೇವಿಸಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ.ಅಣಬೆ ಪದಾರ್ಥ ಸೇವನೆಯೇ ಸಾವಿಗೆ ಕಾರಣ ಎಂದು ಶಂಕಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು