8:42 PM Thursday1 - January 2026
ಬ್ರೇಕಿಂಗ್ ನ್ಯೂಸ್
6322 ಪರಿಶಿಷ್ಟ ಕುಟುಂಬಗಳಿಗೆ ಕೊಳವೆಬಾವಿ ಭಾಗ್ಯ: ಕಾಮಗಾರಿ ಚುರುಕುಗೊಳಿಸಲು ನೀರಾವರಿ ಸಚಿವರ ಖಡಕ್… Kodagu | ಸೋಮವಾರಪೇಟೆ ಮೀಸಲು ಅರಣ್ಯ ಪ್ರದೇಶದಲ್ಲಿ ಬೇಟೆ: ಕೋವಿ ಸಹಿತ ಮೂವರ… ಕೋವಿಡ್ ಸಾವು ಮತ್ತು ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ: ಸರಕಾರಕ್ಕೆ ಅಂತಿಮ ವರದಿ… ಅಪ್ರಾಪ್ತ ಬಾಲಕನಿಂದ ಬೈಕ್ ಚಾಲನೆ: ತಂದೆಗೆ 25 ಸಾವಿರ ರೂ. ದಂಡ ವಿಧಿಸಿದ… ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳು: ಮಾಜಿ ಡಿಸಿಎಂ ಗೋವಿಂದ ಕಾರಜೋಳ ಲೇವಡಿ ಕೆ.ಸಿ.‌ವೇಣುಗೋಪಾಲ್ ರಾಜ್ಯದ ಸೂಪರ್ ಸಿಎಂ: ಬಿಜೆಪಿಯ ಎನ್.ರವಿಕುಮಾರ್ ಆರೋಪ ಅಕ್ರಮ ವಲಸಿಗರ ಕುರಿತು ಉನ್ನತ ಮಟ್ಟದ ತನಿಖೆಯಾಗಲಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸರ್ಕಾರದ ಜಮೀನು ಅಕ್ರಮ ಒತ್ತುವರಿಯಾದರೆ ಕಂದಾಯ ಇಲಾಖೆ ಹಾಗೂ ಪಾಲಿಕೆ ಅಧಿಕಾರಗಳ ಮೇಲೆ… ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಇತ್ತೀಚಿನ ಸುದ್ದಿ

ಮುಗ್ರೋಡಿ: 75 ಲಕ್ಷ ರೂ. ವೆಚ್ಚದಲ್ಲಿ ರಾಜಕಾಲುವೆ ತಡೆಗೋಡೆ ಕಾಮಗಾರಿ; ಶಾಸಕ ವೇದವ್ಯಾಸ್ ಕಾಮತ್ ಚಾಲನೆ

24/11/2022, 12:01

ಮಂಗಳೂರು(reporter Karnataka.com): ಪಾಲಿಕೆಯ ಪದವು ಪಶ್ಚಿಮ ವಾರ್ಡಿನ ಮುಗ್ರೋಡಿಯ ಅಚ್ಚುಕೋಡಿಯಲ್ಲಿ 75 ಲಕ್ಷ ರೂಪಾಯಿ ವೆಚ್ಚದಲ್ಲಿ ರಾಜಕಾಲುವೆ ತಡೆಗೋಡೆ ನಿರ್ಮಾಣ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಭೂಮಿಪೂಜೆ ನೆರವೇರಿಸಿ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಕಾಮತ್, ನಗರ ಪ್ರದೇಶದಲ್ಲಿ ಮಳೆಗಾಲದ ಸಂದರ್ಭದಲ್ಲಿ ರಾಜಕಾಲುವೆಯಿಂದ ನೀರು ಉಕ್ಕುವ ಸಮಸ್ಯೆ ಪ್ರತಿ ವರ್ಷವೂ ಮರುಕಳಿಸುವ ಹಿನ್ನೆಲೆಯಲ್ಲಿ ಸಣ್ಣ ನೀರಾವರಿ ಇಲಾಖೆಯಿಂದ ಅನುದಾನ ತರಲಾಗಿದೆ. ರಾಜ್ಯದ ಇತಿಹಾಸದಲ್ಲಿ ಮೊದಲ ಬಾರಿಗೆ ನಗರ ಪ್ರದೇಶಕ್ಕೆ ಸಣ್ಣ ನೀರಾವರಿ ಇಲಾಖೆಯಿಂದ ಅನುದಾನ ಬಿಡುಗಡೆಯಾಗಿದೆ. ಜನರಿಗೆ ಕೊಟ್ಟ ಮಾತಿನಂತೆ ಇಂದು ಅನೇಕ ತಗ್ಗು ಪ್ರದೇಶಗಳಲಿಲೂ ರಾಜಕಾಲುವೆ ಅಭಿವೃದ್ಧಿಪಡಿಸಿ ಕೃತಕ ನೆರೆಯಂತಹ ಸಮಸ್ಯೆಯನ್ನು ಬಗೆಹರಿಸಲಾಗಿದೆ ಎಂದರು.
ಮುಗ್ರೋಡಿ ಅಚ್ಚುಕೋಡಿಯಲ್ಲಿ ರಾಜಕಾಲುವೆಯ ಸಮಸ್ಯೆಯನ್ನು ಮನಗಂಡು ತಡೆಗೋಡೆ ನಿರ್ಮಿಸಲು 75 ಲಕ್ಷ ರೂಪಾಯಿ ಅನುದಾನ ಬಿಡುಗಡೆಗೊಳಿಸಲಾಗಿದೆ. ಅತೀ ಶೀಘ್ರದಲ್ಲಿ ಕಾಮಗಾರಿ ಪ್ರಾರಂಭಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಸ್ಥಳೀಯ ಕಾರ್ಪೋರೇಟರ್ ವನಿತಾ ಪ್ರಸಾದ್, ಮುಖಂಡರಾದ ರವಿಚಂದ್ರ, ಪ್ರಸಾದ್ ಆಚಾರ್ಯ, ಗಿರಿಧರ್ ಶೆಟ್ಟಿ, ಗೋಪಾಲ, ಬಾಬು ಶೆಟ್ಟಿ, ಶುಭಕರ್, ಪದ್ಮನಾಭ, ಸಂದೇಶ್,ರಂಜಿತ್, ಪವನ್, ಕಿರಣ್, ಪ್ರಸಾದ್, ನಿತೇಶ್ ದೇವಾಡಿಗ, ಗೋಪಾಲ ಪೂಜಾರಿ, ಚೇತನ್, ದಿವಾಕರ್, ಯಾದವ, ಜನಾರ್ದನ್, ಪ್ರಭಾಕರ್, ಪದ್ಮ,ಮಮತಾ, ಸುಶೀಲಾ, ಪ್ರೇಮಾ, ರಮ್ಯ, ರಾಧಾ, ಪೂರ್ಣಿಮಾ, ರಜನಿ, ವಸಂತಿ, ಗೋಪಾಲ, ಜಾನಕಿ, ಅನುಷಾ, ಹರ್ಷಿತ, ಜೀವನ್, ಚೇತನ ಇನ್ನಿತರ ಪ್ರಮುಖರು ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು