11:42 AM Monday21 - July 2025
ಬ್ರೇಕಿಂಗ್ ನ್ಯೂಸ್
ಸುಂಟಿಕೊಪ್ಪ: ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಆಡಿ-ಟೆಂಪೋ ಡಿಕ್ಕಿ: ಟ್ರಾಫಿಕ್ ಜಾಮ್ Kodagu | ಕುಶಾಲನಗರ: ಆಸ್ತಿಗಾಗಿ ಸ್ನೇಹಿತರ ಜತೆ ಸೇರಿ ತಂದೆಯನ್ನೇ ಕೊಂದ ಪಾಪಿ… SIT Dharmasthala | ಧರ್ಮಸ್ಥಳ ಪ್ರಕರಣ ತನಿಖೆಗೆ ವಿಶೇಷ ತನಿಖಾ ತಂಡ ರಚನೆ:… ಭಾರೀ ಮಳೆ ಮಧ್ಯೆಯೂ ಮುಳ್ಳಯ್ಯನಗಿರಿಗೆ ಪ್ರವಾಸಿಗರ ದಂಡು: ಕಾರು – ಜೀಪ್ ಮುಖಾಮುಖಿ… ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾಗಿ ಜಸ್ಟಿಸ್ ವಿಭು ಬಖ್ರು ಅಧಿಕಾರ ಸ್ವೀಕಾರ: ರಾಜ್ಯಪಾಲ… Kodagu |ಪೊನ್ನಂಪೇಟೆ: ವ್ಯಾಘ್ರನ ಸೆರೆಗೆ 75 ಮಂದಿ ಅರಣ್ಯ ಸಿಬ್ಬಂದಿಗಳ ಕೂಂಬಿಂಗ್ ಕಾರ್ಯಾಚರಣೆ… ಮಂಗಳೂರು – ಬೆಂಗಳೂರು 4 ತಾಸಿನ ಆಂಬುಲೆನ್ಸ್ ಪ್ರಯಾಣ!: ಹೃದಯ ಕಾಯಿಲೆಯ 14… ವಿದ್ಯುತ್ ಶಾಕ್: ಲೈನ್ ಮ್ಯಾನ್ ದಾರುಣ ಸಾವು; ಒಂದೂವರೆ ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ… ರಾಹುಲ್ ಗಾಂಧಿಯ ಗೊತ್ತಿಲ್ಲದ ಸಾಧನೆಗೆ ಗೊತ್ತಿಲ್ಲದ ಪ್ರಶಸ್ತಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ಬಿರುಸುಗೊಂಡ ಕಾಡಾನೆಗಳ ಅರಣ್ಯಕ್ಕೆ ಅಟ್ಟುವ ಕಾರ್ಯ: ನಾಡಿನಿಂದ ಕಾಡಿನತ್ತ ಆನೆಗಳ ಮತ್ತೊಂದು ಹಿಂಡು

ಇತ್ತೀಚಿನ ಸುದ್ದಿ

ಶೃಂಗೇರಿಯಲ್ಲಿ 100 ಹಾಸಿಗೆಯ ಆಸ್ಪತ್ರೆಗೆ ಒತ್ತಾಯ: ತಮಟೆ ಬಾರಿಸಿ ಗಲ್ಲಿ ಗಲ್ಲಿ ಸುತ್ತಿದ ಯುವಕರ ತಂಡ

24/11/2022, 17:55

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporter Karnataka@gmail.com

ಜಿಲ್ಲೆಯ ಪ್ರಸಿದ್ಧ ಯಾತ್ರಾ ಸ್ಥಳವಾದ ಶೃಂಗೇರಿಯಲ್ಲಿ 100 ಬೆಡ್ ನ ಆಸ್ಪತ್ರೆಗೆ ಆಗ್ರಹಿಸಿ ಸಮಾನ ಮನಸ್ಕ ಯುವಕರ ತಂಡದ ನೇತೃತ್ವದಲ್ಲಿ ತಮಟೆ ಬಾರಿಸುತ್ತಾ ಗಲ್ಲಿ ಗಲ್ಲಿಗಳಲ್ಲಿ ಸುತ್ತಿ ಧರಣಿ ಪ್ರತಿಭಟನೆಯ ಎಚ್ಚರಿಕೆ ನೀಡಲಾಯಿತು.


ಯುವಕರ ತಂಡ ತಮಟೆ ಬಾರಿಸುತ್ತ ಧರಣಿ ಸತ್ಯಾಗ್ರಹದ ಬಗ್ಗೆ ಪ್ರಚಾರ ನಡೆಸಿದರು. ಪೊಲೀಸ್ ಇಲಾಖೆ ಮೈಕ್ ಬಳಸಲು ಅವಕಾಶ ನೀಡದ ಹಿನ್ನೆಲೆಯಲ್ಲಿ ತಮಟೆ ಉಪಯೋಗಿಸಲಾಯಿತು.

ಆಸ್ಪತ್ರೆ ಒತ್ತಾಯಿಸಿ ಪ್ರತಿಭಟನಾಕಾರರ ತಂಡ ಶೃಂಗೇರಿಯ ಬೀದಿ ಬೀದಿಯಲ್ಲಿ ಸುತ್ತಿ ಪ್ರಚಾರ ನಡೆಸಿತು.

ಶೃಂಗೇರಿ ತಾಲೂಕಿನಾದ್ಯಂತ ಪ್ರಚಾರ ಮಾಡಲು ಯುವಕರು ಮುಂದಾಗಿದ್ದಾರೆ.

ಆಸ್ಪತ್ರೆ ಒತ್ತಾಯಿಸಿ ಕಳೆದ ವರ್ಷ ಶೃಂಗೇರಿ ಬಂದ್ ಮಾಡಿ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಒಂದು ತಿಂಗಳ ಒಳಗಾಗಿ ಆಸ್ಪತ್ರೆ ಮಂಜೂರು ಮಾಡುತ್ತೇವೆ ಎಂದು ಅಧಿಕಾರಿಗಳು ಹೇಳಿದ್ದರು

ಇತ್ತೀಚಿನ ಶೃಂಗೇರಿ ಭೇಟಿ ವೇಳೆಯೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತು ಕೊಟ್ಟಿದ್ದರು. ನಾಳೆಯಿಂದ ಅಹೋರಾತ್ರಿ ಧರಣಿ ಸತ್ಯಾಗ್ರಹಕ್ಕೆ ಕರೆ ನೀಡಲಾಗಿದೆ. ಮೈಕ್ ಪ್ರಚಾರಕ್ಕೆ ಅನುಮತಿ ನೀಡದ ಪೋಲಿಸ್ ಇಲಾಖೆ ವಿರುದ್ಧ ಯುವಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು