12:36 AM Wednesday17 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಪುತ್ತೂರು ಸಂತ ಫಿಲೋಮಿನಾ ಕಾಲೇಜಿನಲ್ಲಿ 2022-23 ವರ್ಷದ ರಾಷ್ಟ್ರೀಯ ಸೇವಾ ಯೋಜನೆಯ ಚಟುವಟಿಕೆಗಳ ಉದ್ಘಾಟನೆ

24/11/2022, 23:24

ಪುತ್ತೂರು(reporterkarnataka.com): ಇಲ್ಲಿನ ಸಂತ ಫಿಲೋಮಿನಾ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಘಟಕಗಳ ಪ್ರಸಕ್ತ ಶೈಕ್ಷಣಿಕ ವರ್ಷದ ಚಟುವಟಿಕೆ ಕಾಲೇಜಿನ ಬೆಳ್ಳಿಹಬ್ಬ ಸಭಾಭವನದಲ್ಲಿ ನಡೆಸಲಾಯಿತು.

ಕಾರ್ಯಕ್ರಮ ವನ್ನು ಕಾಲೇಜಿನ ಪ್ರಾಂಶುಪಾಲ ವಂ| ಡಾ. ಆಂಟನಿ ಪ್ರಕಾಶ್ ಮೊಂತೆರೊ ಉದ್ಘಾಟಿಸಿ ಮಾತನಾಡಿ, ನನಗಲ್ಲ ನಿನಗೆ ‘ಎಂಬ ಧೈಯವಾಕ್ಯದಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ರಾಷ್ಟ್ರೀಯ ಸೇವಾ ಯೋಜನೆಯು ವಿದ್ಯಾರ್ಥಿಗಳಲ್ಲಿನ ಕೀಳರಿಮೆಯನ್ನು ಹೋಗಲಾಡಿಸಿ ನಾಯಕತ್ವ ಗುಣ ಹಾಗೂ ಸೇವಾ ಮನೋಭಾವಗಳನ್ನು ಉದ್ದೀಪನಗೊಳಿಸುವಲ್ಲಿ ಸಹಕಾರಿಯಾಗಿದೆ. ಪ್ರತಿಯೊಬ್ಬ ಸ್ವಯಂಸೇವಕನೂ ತನ್ನ ಜವಾಬ್ದಾರಿಯನ್ನರಿತು ಕಾರ್ಯ ನಿರ್ವಹಿಸಬೇಕು.

ಕಾಲೇಜಿನ ಪ್ರತಿಯೊಂದು ಚಟುವಟಿಕೆಯಲ್ಲಿ ಭಾಗವಹಿಸುವುದು ಮಾತ್ರವಲ್ಲದೆ ಹಲವಾರು ಸಮಾಜಮುಖಿ ಕಾರ್ಯಕ್ರಮಗಳಲ್ಲೂ ಭಾಗಿಯಾಗಬೇಕು. ಜನರಿಗೆ ದುರ್ವ್ಯಸನಗಳ ದುಷ್ಪರಿಣಾಮಗಳ ಬಗ್ಗೆ ಹಾಗೂ ಸಮಾಜದಲ್ಲಿನ ಹಲವಾರು ಪಿಡುಗುಗಳ ಬಗ್ಗೆ ಅರಿವು ಮೂಡಿಸಿ ದೇಶ ಕಟ್ಟುವ ಕಾರ್ಯದಲ್ಲಿ ಭಾಗಿಯಾಗಬೇಕು ಎಂದು ಹೇಳಿದರು.

ಯೋಜನಾಧಿಕಾರಿ ಪುಷ್ಪಾ ಉಪಸ್ಥಿತರಿದ್ದರು.
ಹರ್ಷಿತಾ ಪ್ರಾರ್ಥಿಸಿದರು. ಯೋಜನಾಧಿಕಾರಿ ಪ್ರೊ. ವಾಸುದೇವ ಸ್ವಾಗತಿಸಿ ಪ್ರಾಸ್ತಾವವನೆಗೈದರು. ನಿರೀಕ್ಷಾ ವಂದಿಸಿ, ವೈಷ್ಣವಿ ನಿರೂಪಿಸಿದರು. ಕಾಲೇಜಿನ ರಾಷ್ಟ್ರೀಯ ಸೇವಾಯೋಜನೆಯ 2 ಘಟಕಗಳ 200 ಮಂದಿ ಸ್ವಯಂಸೇವಕರು ಭಾಗವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು