12:59 PM Tuesday10 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌… ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು

ಇತ್ತೀಚಿನ ಸುದ್ದಿ

ಪುತ್ತೂರು ಸಂತ ಫಿಲೋಮಿನಾ ಕಾಲೇಜಿನಲ್ಲಿ 2022-23 ವರ್ಷದ ರಾಷ್ಟ್ರೀಯ ಸೇವಾ ಯೋಜನೆಯ ಚಟುವಟಿಕೆಗಳ ಉದ್ಘಾಟನೆ

24/11/2022, 23:24

ಪುತ್ತೂರು(reporterkarnataka.com): ಇಲ್ಲಿನ ಸಂತ ಫಿಲೋಮಿನಾ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಘಟಕಗಳ ಪ್ರಸಕ್ತ ಶೈಕ್ಷಣಿಕ ವರ್ಷದ ಚಟುವಟಿಕೆ ಕಾಲೇಜಿನ ಬೆಳ್ಳಿಹಬ್ಬ ಸಭಾಭವನದಲ್ಲಿ ನಡೆಸಲಾಯಿತು.

ಕಾರ್ಯಕ್ರಮ ವನ್ನು ಕಾಲೇಜಿನ ಪ್ರಾಂಶುಪಾಲ ವಂ| ಡಾ. ಆಂಟನಿ ಪ್ರಕಾಶ್ ಮೊಂತೆರೊ ಉದ್ಘಾಟಿಸಿ ಮಾತನಾಡಿ, ನನಗಲ್ಲ ನಿನಗೆ ‘ಎಂಬ ಧೈಯವಾಕ್ಯದಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ರಾಷ್ಟ್ರೀಯ ಸೇವಾ ಯೋಜನೆಯು ವಿದ್ಯಾರ್ಥಿಗಳಲ್ಲಿನ ಕೀಳರಿಮೆಯನ್ನು ಹೋಗಲಾಡಿಸಿ ನಾಯಕತ್ವ ಗುಣ ಹಾಗೂ ಸೇವಾ ಮನೋಭಾವಗಳನ್ನು ಉದ್ದೀಪನಗೊಳಿಸುವಲ್ಲಿ ಸಹಕಾರಿಯಾಗಿದೆ. ಪ್ರತಿಯೊಬ್ಬ ಸ್ವಯಂಸೇವಕನೂ ತನ್ನ ಜವಾಬ್ದಾರಿಯನ್ನರಿತು ಕಾರ್ಯ ನಿರ್ವಹಿಸಬೇಕು.

ಕಾಲೇಜಿನ ಪ್ರತಿಯೊಂದು ಚಟುವಟಿಕೆಯಲ್ಲಿ ಭಾಗವಹಿಸುವುದು ಮಾತ್ರವಲ್ಲದೆ ಹಲವಾರು ಸಮಾಜಮುಖಿ ಕಾರ್ಯಕ್ರಮಗಳಲ್ಲೂ ಭಾಗಿಯಾಗಬೇಕು. ಜನರಿಗೆ ದುರ್ವ್ಯಸನಗಳ ದುಷ್ಪರಿಣಾಮಗಳ ಬಗ್ಗೆ ಹಾಗೂ ಸಮಾಜದಲ್ಲಿನ ಹಲವಾರು ಪಿಡುಗುಗಳ ಬಗ್ಗೆ ಅರಿವು ಮೂಡಿಸಿ ದೇಶ ಕಟ್ಟುವ ಕಾರ್ಯದಲ್ಲಿ ಭಾಗಿಯಾಗಬೇಕು ಎಂದು ಹೇಳಿದರು.

ಯೋಜನಾಧಿಕಾರಿ ಪುಷ್ಪಾ ಉಪಸ್ಥಿತರಿದ್ದರು.
ಹರ್ಷಿತಾ ಪ್ರಾರ್ಥಿಸಿದರು. ಯೋಜನಾಧಿಕಾರಿ ಪ್ರೊ. ವಾಸುದೇವ ಸ್ವಾಗತಿಸಿ ಪ್ರಾಸ್ತಾವವನೆಗೈದರು. ನಿರೀಕ್ಷಾ ವಂದಿಸಿ, ವೈಷ್ಣವಿ ನಿರೂಪಿಸಿದರು. ಕಾಲೇಜಿನ ರಾಷ್ಟ್ರೀಯ ಸೇವಾಯೋಜನೆಯ 2 ಘಟಕಗಳ 200 ಮಂದಿ ಸ್ವಯಂಸೇವಕರು ಭಾಗವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು