6:03 AM Wednesday11 - February 2026
ಬ್ರೇಕಿಂಗ್ ನ್ಯೂಸ್
ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಇತ್ತೀಚಿನ ಸುದ್ದಿ

ಭಯೋತ್ಪಾಕರ ಬಹಿಷ್ಕರಿಸಿ ಸಮುದಾಯದ ಎಲ್ಲ ಸವಲತ್ತುಗಳಿಂದ ದೂರ ಇಡಬೇಕು: ಶಾಸಕ ಡಾ.ಭರತ್ ಶೆಟ್ಟಿ

25/11/2022, 10:51

ಮಂಗಳೂರು(reporterkarnataka.com): ಮಂಗಳೂರಿನಲ್ಲಿ ನಡೆದ ಉಗ್ರರ ಕೃತ್ಯವನ್ನು ಮುಸ್ಲಿಂ ಜಮಾತ್ ಗಳು ,ಮುಸ್ಲಿಂ ಮುಖಂಡರು ಖಂಡಿಸುವ ಮತ್ತು
,ಇಂತಹ ಕೃತ್ಯಗಳಿಗಾಗಿ ಮುಸ್ಲಿಂ ಯುವಕರ ತಲೆಯಲ್ಲಿ ಮತಾಂಧತೆಯನ್ನು ತುಂಬಿಸಿ ಉಗ್ರ ಕೃತ್ಯ ನಡೆಸಲು ಹಣಕಾಸು ನೀಡುವ ,ಬೆಂಬಲ ನೀಡಿದ ಜನರನ್ನು ಹಾಗೂ ಸಂಘಟನೆಗಳನ್ನು ಬಹಿಷ್ಕರಿಸಿ ದೂರವಿಡುವ ಮೂಲಕ ದೇಶದ ಹಿತಕ್ಕಾಗಿ ಎನ್ ಐ ಎ ಜತೆ ಉಗ್ರ ನಿರ್ಮೂಲನಕ್ಕೆ ಸಹಕರಿಸಬೇಕಾಗಿದೆ ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ. ಒತ್ತಾಯಿಸಿದ್ದಾರೆ.

ಮಂಗಳೂರಿನಲ್ಲಿ ನಡೆದ ಸ್ಪೋಟಕ್ಕೆ ಇಸ್ಲಾಮಿಕ್ ರೆಸಿಸ್ಟನ್ಸ್ ಕೌನ್ಸಿಲ್ ಹೊಣೆ ಹೊತ್ತಿದೆ. ಸರಕಾರ ಉಗ್ರ ನಿಗ್ರಹಕ್ಕೆ ಬೇಕಾದ ಕ್ರಮ ಕೈಗೊಳ್ಳುತ್ತದೆ.
ಇದರ ಹಿಂದೆ ಯಾರು ಇದ್ದಾರೆ ಎಂಬುದನ್ನು ಸಮುದಾಯದ ನಾಯಕರು ಗುರುತಿಸಿ ಮಾಹಿತಿ ನೀಡಿ ಇಂತಹ ಕೃತ್ಯ ಮುಂದೆ ನಡೆಯದಂತೆ ಎಚ್ಚೆತ್ತುಕೊಳ್ಳಬೇಕು.

“ಸಾಮರಸ್ಯ, ಭ್ರಾತೃತ್ವ ಕೇವಲ ಬಾಯಿ ಮಾತಾಗದಿರಲಿ. ಆಡಿದ್ದನ್ನು ಮಾಡಿ ತೋರಿಸುವ ಗುಣವೂ ಇರಬೇಕಿದೆ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಕೆ ಜಿ ಹಳ್ಳಿ,ಡಿ ಜೆ ಹಳ್ಳಿ ಘಟನೆ ನಡೆದಾಗಲೇ ಎಚ್ಚೆತ್ತುಕೊಂಡು
ಮುಸ್ಲಿಂ ಮುಖಂಡರು ಸಮುದಾಯದಲ್ಲಿ ಮತಾಂಧತೆಯನ್ನು ಹೆಚ್ಚಿಸಿಕೊಂಡು ದಾರಿ ತಪ್ಪಿದ , ಭಯೋತ್ಪಾದನೆಯಲ್ಲಿ ನಿರತವಾಗಿರುವವರ ಗೌಪ್ಯ ಮಾಹಿತಿನ್ನು ಎನ್ ಐ ಎ ಗೆ ನೀಡಬೇಕಿತ್ತು.
ಇದನ್ನು ಸಮುದಾಯ ನಿರ್ಲಕ್ಷಿಸಿದ್ದರಿಂದಲೇ ಮಂಗಳೂರು ಘಟನೆ ನಡೆಯಲು ಕಾರಣವಾಗಿದೆ.

ದೇಶ, ವಿದೇಶದಿಂದ ಹಣ ಪಡೆದು, ಭಯೋತ್ಪಾದನೆಯನ್ನು ನಡೆಸುತ್ತಿರುವುದರ ಘಟನೆಗಳನ್ನು ಸಮುದಾಯದ ನಾಯಕರು ಗಂಭೀರವಾಗಿ ಪರಿಗಣಿಸದೆ ಇದ್ದ ಪರಿಣಾಮ ಮಂಗಳೂರಿನಲ್ಲಿ ಭಾರೀ ಅನಾಹುತದ ಸಂಚು ರೂಪಿತವಾಗಿದೆ ಎಂದು ಡಾ.ಭರತ್ ಶೆಟ್ಟಿ ವೈ ಆರೋಪಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು