1:02 PM Tuesday10 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌… ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು

ಇತ್ತೀಚಿನ ಸುದ್ದಿ

ಪುತ್ತೂರು ಸಂತ ಫಿಲೋಮಿನಾ ಕಾಲೇಜಿನ ಎನ್ ಸಿಸಿ ಘಟಕದಿಂದ ಅನಂದಾಶ್ರಮದಲ್ಲಿ ಗಿಡ ನೆಡುವ ಕಾರ್ಯಕ್ರಮ

25/11/2022, 12:21

ಪುತ್ತೂರು(reporterkarnataka.com): ಇಲ್ಲಿನ ಸಂತ ಫಿಲೋಮಿನಾ ಕಾಲೇಜಿನ ಎನ್. ಸಿ.ಸಿ ಘಟಕ, ಆಂತರಿಕ ಗುಣಮಟ್ಟ ಭರವಸೆ ಕೋಶ ಹಾಗೂ ಆನಂದಾಶ್ರಮ ಸೇವಾ ಟ್ರಸ್ಟ್ ಸಹಯೋಗದೊಂದಿಗೆ ಎನ್ ಸಿಸಿ ದಿನಾಚರಣೆಯ ಪ್ರಯುಕ್ತ ಆನಂದಾಶ್ರಮದಲ್ಲಿ ಗಿಡ ನೆಡುವ ಕಾರ್ಯಕ್ರಮ ನಡೆಯಿತು.

ಅಧ್ಯಕ್ಷತೆಯನ್ನು ವಹಿಸಿದ್ದ ಆನಂದಾಶ್ರಮ ಸೇವಾ ಟ್ರಸ್ಟ್ ನ ಮುಖ್ಯ ಟ್ರಸ್ಟಿಯಾದ ಡಾ. ಗೌರಿ ಪೈ ಮಾತನಾಡಿ “ ಗಿಡ ನೆಡುವ ಮೂಲಕ ಪ್ರಕೃತಿಯನ್ನು ಸಂರಕ್ಷಿಸಿಲ್ಲಿ ದೇಶ ಸಮೃದ್ಧವಾಗುವುದು, ಯುವ ಜನರಲ್ಲಿ ಪರಿಸರ ಪ್ರೇಮ ಮೂಡಿಸುವ ಕೆಲಸವನ್ನು ಎನ್.ಸಿ.ಸಿ ಮಾಡುತ್ತಿದೆ. ಪರಿಸರ ಪ್ರೇಮ ಮಾತ್ರವಲ್ಲದೆ ಹೆತ್ತವರನ್ನು ಅವರ ವೃದ್ಧಾಪ್ಯದಲ್ಲಿ ಚೆನ್ನಾಗಿ ನೋಡಿಕೊಂಡು ತಮ್ಮ ಕರ್ತವ್ಯವನ್ನು ಸರಿಯಾಗಿ ನಿಭಾಯಿಸಿದಾಗ ಮಾತ್ರವೇ ನಾವು ಉತ್ತಮ ಪ್ರಜೆಗಳಾಗುತ್ತೇವೆ. ವೃತ್ತಿಜೀವನ ಹಾಗೂ ಕೌಟುಂಬಿಕ ಜವಾಬ್ದಾರಿಗಳನ್ನು ಸರಿಯಾಗಿ ನಿಭಾಯಿಸುವುದು ಬಹಳ ಮುಖ್ಯವಾಗಿದೆ” ಎಂದು ಹೇಳಿದರು.

ಕಾಲೇಜಿನ ಎನ್.ಸಿ.ಸಿ ಅಧಿಕಾರಿ ಲೆ| ಜಾನ್ಸನ್ ಡೇವಿಡ್ ಸಿಕ್ವೆರಾರವರು ಪ್ರಾಸ್ತಾವಿಕವಾಗಿ ಮಾತನಾಡಿ ವಿದ್ಯಾರ್ಥಿಗಳಿಗೆ ೭೫ನೇ .ಎನ್. .ಸಿ.ಸಿ ದಿನದ ಮಹತ್ವವನ್ನು ತಿಳಿಸಿದರು. ಸುಮಾರು 50 ಕ್ಕೂ ಹೆಚ್ಚಿನ ವಿವಿದ ಹಣ್ಣುಗಳ ಗಿಡಗಳನ್ನು ಆನಂದಾಶ್ರಮ ಪರಿಸರದಲ್ಲಿ ನೆಡಲಾಯಿತು. ಕಾಲೇಜಿನ ಎನ್ .ಸಿ.ಸಿ ಘಟಕಗಳ ವತಿಯಿಂದ ಆಶ್ರಮ ನಿವಾಸಿಗಳಿಗೆ ಅಕ್ಕಿ ಹಾಗೂ ಹಣ್ಣುಹಂಪಲುಗಳನ್ನು ನೀಡಲಾಯಿತು.

ಸೀನಿಯರ್ ಕೆಡೆಟ್ ಅಂಡರ್ ಆಫೀಸರ್ ಸಾತ್ವಿಕ್ ಡಿ. ಎನ್ ಸ್ವಾಗತಿಸಿ ಜ್ಯೂನಿಯರ್ ಅಂಡ‌ ಆಫೀಸರ್ ಕೆಲ್ವಿನ್ ಆಂಟನಿ ವಂದಿಸಿದರು. ಕೃತಿ ಕಾರ್ಯಕ್ರಮ ನಿರೂಪಿಸಿದರು. ಕಾಲೇಜಿನ ಎನ್ .ಸಿ.ಸಿ ಘಟಕಗಳ 105 ಕೆಡೆಟ್ ಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು