5:56 AM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಸಾಮಾಜಿಕ ಧುರೀಣ ಪಮ್ಮಿ ಕೊಡಿಯಾಲ್ ಬೈಲ್ ಗೆ ದುಬೈನ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿಯಿಂದ ಗೌರವ ಪ್ರದಾನ

25/11/2022, 12:39

ಮಂಗಳೂರು(reporterkkarnataka.com): ಧಾರ್ಮಿಕ, ಸಾಮಾಜಿಕ, ಸಾಂಸ್ಕೃತಿಕ ಹಾಗೂ ರಾಜಕೀಯ ಕ್ಷೇತ್ರದಲ್ಲಿ ತನ್ನನ್ನು ತೊಡಗಿಸಿಕೊಂಡಿರುವ ಕರ್ನಾಟಕ ಜಾನಪದ ಪರಿಷತ್ತು ಬೆಂಗಳೂರು ಇದರ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಪ್ರವೀಣ್ ಕುಮಾರ್ ಕೊಡಿಯಾಲ್ ಬೈಲ್(ಪಮ್ಮಿ ಕೊಡಿಯಾಲ್ ಬೈಲ್) ಅವರಿಗೆ
ದುಬೈನ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿಯು ಗೌರವ ಪ್ರದಾನ ಮಾಡಿ ಗೌರವಿಸಿದೆ.

ದುಬೈನ ಅಲಸಫಾ ಪ್ರದೇಶದಲ್ಲಿರುವ ಜಗದ್ಗುರು ಸುತ್ತೂರು ಸಂಸ್ಥಾನ ಶಾಲಾ ಭವನದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು.
ಕರ್ನಾಟಕ ಜಾನಪದ ಪರಿಷತ್ತು ಬೆಂಗಳೂರು ಇದರ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷರಾದ ಪಮ್ಮಿ ಕೊಡಿಯಾಲ್ ಬೈಲ್ ಅವರಿಗೆ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿಯ ದುಬೈಯಲ್ಲಿ ನಡೆಯುತ್ತಿರುವ ಗಡಿನಾಡ ಉತ್ಸವದಲ್ಲಿ ಗೌರವ ಪ್ರದಾನ ಮಾಡಿ ಸನ್ಮಾನಿಸಲಾಯಿತು.

ಶಾಸಕರಾದ ರಘುನಾಥ ರಾವ್ ಮಲ್ಕಾಪುರೆ, ಪ್ರಕಾಶ್
ರಾಥೋಡ್, ರಾಜ್ಯ ಗಡಿನಾಡು ಅಭಿವೃದ್ಧಿ ನಿಗಮದ ಅಧ್ಯಕ್ಷ, ಮಾಜಿ ಐಎಎಸ್ ಅಧಿಕಾರಿ ಸಿ. ಸೋಮಶೇಖರ್, ಮಂಜೇಶ್ವರದ ಶಾಸಕ ಎ.ಕೆ.ಎಂ. ಅಶ್ರಫ್,ಕ್ವಾಲಿಟಿ ಇಂಡಿಯಾ ಫೌಂಡೇಶನ್ ಅಧ್ಯಕ್ಷ ಡಾ. ವೆಂಕಟೇಶ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು.

ಸಾಮಾಜಿಕ, ರಾಜಕೀಯ, ಧಾರ್ಮಿಕ ಕ್ಷೇತ್ರದಲ್ಲಿ, ತನ್ನನ್ನು ತಾನು ತೊಡಗಿಸಿಕೊಂಡು ಸ್ವಾರ್ಥವಿಲ್ಲದೆ ಅಹಂ ಪಡೆಯದೇ ಹೆಸರು ಬಿರುದು ಬಯಸದೆ ಉತ್ತಮ ಸಮಾಜಕ್ಕಾಗಿ ಸೇವೆ ಸಲ್ಲಿಸುತ್ತಿರುವ ಜನ ಮೆಚ್ಚಿದ ನಾಯಕ ಪ್ರವೀಣ್ ಕುಮಾರ್ ಕೊಡಿಯಾಲ್ ಬೈಲ್ ಅವರಿಗೆ
ಈ ಗೌರವ ಸಂದಾಯವಾಗಿದೆ.

ಈ ಹಿಂದೆ ಬಿಜೈ ಕೆಎಸ್ಸಾರ್ಟಿಸಿ ವಿದ್ಯಾಗಣಪತಿ ಆಟೋ ಚಾಲಕ ಮಾಲಕರ ಸಂಘ ವತಿಯಿಂದ ಪಮ್ಮಿ ಅವರನ್ನು ಸನ್ಮಾನಿಸಲಾಯಿತು. ಮಂಗಳೂರು ವಿಶ್ವವಿದ್ಯಾನಿಲಯ ತುಳು ಅಧ್ಯಯನ ಪೀಠದ ಸದಸ್ಯರಾಗಿ ದಕ್ಷಿಣ ಕನ್ನಡ ಜಿಲ್ಲಾ ಕರ್ನಾಟಕ ಜಾನಪದ ಪರಿಷತ್ ಇದರ ಅಧ್ಯಕ್ಷ ರಾಗಿರುವ ಅವರು ಕೊರೋನಾ ಸಂದರ್ಭದಲ್ಲಿ ಅದೆಷ್ಟು ಮಂದಿ ಬಡವರಿಗೆ ಅಕ್ಕಿಧಾನ್ಯದ ಕಿಟ್ ಗಳನ್ನು ವಿತರಿಸಿ ಒಂದು ಕೈಯಲ್ಲಿ ಕೊಟ್ಟದು ಇನೊಂದು ಕೈಗೆ ಗೊತ್ತಾಗ ಬಾರದು ಎನ್ನುವ ಮನೋಭಾವ ಹೊಂದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು