1:44 AM Thursday30 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ಸಾಮಾಜಿಕ ಧುರೀಣ ಪಮ್ಮಿ ಕೊಡಿಯಾಲ್ ಬೈಲ್ ಗೆ ದುಬೈನ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿಯಿಂದ ಗೌರವ ಪ್ರದಾನ

25/11/2022, 12:39

ಮಂಗಳೂರು(reporterkkarnataka.com): ಧಾರ್ಮಿಕ, ಸಾಮಾಜಿಕ, ಸಾಂಸ್ಕೃತಿಕ ಹಾಗೂ ರಾಜಕೀಯ ಕ್ಷೇತ್ರದಲ್ಲಿ ತನ್ನನ್ನು ತೊಡಗಿಸಿಕೊಂಡಿರುವ ಕರ್ನಾಟಕ ಜಾನಪದ ಪರಿಷತ್ತು ಬೆಂಗಳೂರು ಇದರ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಪ್ರವೀಣ್ ಕುಮಾರ್ ಕೊಡಿಯಾಲ್ ಬೈಲ್(ಪಮ್ಮಿ ಕೊಡಿಯಾಲ್ ಬೈಲ್) ಅವರಿಗೆ
ದುಬೈನ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿಯು ಗೌರವ ಪ್ರದಾನ ಮಾಡಿ ಗೌರವಿಸಿದೆ.

ದುಬೈನ ಅಲಸಫಾ ಪ್ರದೇಶದಲ್ಲಿರುವ ಜಗದ್ಗುರು ಸುತ್ತೂರು ಸಂಸ್ಥಾನ ಶಾಲಾ ಭವನದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು.
ಕರ್ನಾಟಕ ಜಾನಪದ ಪರಿಷತ್ತು ಬೆಂಗಳೂರು ಇದರ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷರಾದ ಪಮ್ಮಿ ಕೊಡಿಯಾಲ್ ಬೈಲ್ ಅವರಿಗೆ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿಯ ದುಬೈಯಲ್ಲಿ ನಡೆಯುತ್ತಿರುವ ಗಡಿನಾಡ ಉತ್ಸವದಲ್ಲಿ ಗೌರವ ಪ್ರದಾನ ಮಾಡಿ ಸನ್ಮಾನಿಸಲಾಯಿತು.

ಶಾಸಕರಾದ ರಘುನಾಥ ರಾವ್ ಮಲ್ಕಾಪುರೆ, ಪ್ರಕಾಶ್
ರಾಥೋಡ್, ರಾಜ್ಯ ಗಡಿನಾಡು ಅಭಿವೃದ್ಧಿ ನಿಗಮದ ಅಧ್ಯಕ್ಷ, ಮಾಜಿ ಐಎಎಸ್ ಅಧಿಕಾರಿ ಸಿ. ಸೋಮಶೇಖರ್, ಮಂಜೇಶ್ವರದ ಶಾಸಕ ಎ.ಕೆ.ಎಂ. ಅಶ್ರಫ್,ಕ್ವಾಲಿಟಿ ಇಂಡಿಯಾ ಫೌಂಡೇಶನ್ ಅಧ್ಯಕ್ಷ ಡಾ. ವೆಂಕಟೇಶ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು.

ಸಾಮಾಜಿಕ, ರಾಜಕೀಯ, ಧಾರ್ಮಿಕ ಕ್ಷೇತ್ರದಲ್ಲಿ, ತನ್ನನ್ನು ತಾನು ತೊಡಗಿಸಿಕೊಂಡು ಸ್ವಾರ್ಥವಿಲ್ಲದೆ ಅಹಂ ಪಡೆಯದೇ ಹೆಸರು ಬಿರುದು ಬಯಸದೆ ಉತ್ತಮ ಸಮಾಜಕ್ಕಾಗಿ ಸೇವೆ ಸಲ್ಲಿಸುತ್ತಿರುವ ಜನ ಮೆಚ್ಚಿದ ನಾಯಕ ಪ್ರವೀಣ್ ಕುಮಾರ್ ಕೊಡಿಯಾಲ್ ಬೈಲ್ ಅವರಿಗೆ
ಈ ಗೌರವ ಸಂದಾಯವಾಗಿದೆ.

ಈ ಹಿಂದೆ ಬಿಜೈ ಕೆಎಸ್ಸಾರ್ಟಿಸಿ ವಿದ್ಯಾಗಣಪತಿ ಆಟೋ ಚಾಲಕ ಮಾಲಕರ ಸಂಘ ವತಿಯಿಂದ ಪಮ್ಮಿ ಅವರನ್ನು ಸನ್ಮಾನಿಸಲಾಯಿತು. ಮಂಗಳೂರು ವಿಶ್ವವಿದ್ಯಾನಿಲಯ ತುಳು ಅಧ್ಯಯನ ಪೀಠದ ಸದಸ್ಯರಾಗಿ ದಕ್ಷಿಣ ಕನ್ನಡ ಜಿಲ್ಲಾ ಕರ್ನಾಟಕ ಜಾನಪದ ಪರಿಷತ್ ಇದರ ಅಧ್ಯಕ್ಷ ರಾಗಿರುವ ಅವರು ಕೊರೋನಾ ಸಂದರ್ಭದಲ್ಲಿ ಅದೆಷ್ಟು ಮಂದಿ ಬಡವರಿಗೆ ಅಕ್ಕಿಧಾನ್ಯದ ಕಿಟ್ ಗಳನ್ನು ವಿತರಿಸಿ ಒಂದು ಕೈಯಲ್ಲಿ ಕೊಟ್ಟದು ಇನೊಂದು ಕೈಗೆ ಗೊತ್ತಾಗ ಬಾರದು ಎನ್ನುವ ಮನೋಭಾವ ಹೊಂದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು