8:44 PM Thursday1 - January 2026
ಬ್ರೇಕಿಂಗ್ ನ್ಯೂಸ್
6322 ಪರಿಶಿಷ್ಟ ಕುಟುಂಬಗಳಿಗೆ ಕೊಳವೆಬಾವಿ ಭಾಗ್ಯ: ಕಾಮಗಾರಿ ಚುರುಕುಗೊಳಿಸಲು ನೀರಾವರಿ ಸಚಿವರ ಖಡಕ್… Kodagu | ಸೋಮವಾರಪೇಟೆ ಮೀಸಲು ಅರಣ್ಯ ಪ್ರದೇಶದಲ್ಲಿ ಬೇಟೆ: ಕೋವಿ ಸಹಿತ ಮೂವರ… ಕೋವಿಡ್ ಸಾವು ಮತ್ತು ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ: ಸರಕಾರಕ್ಕೆ ಅಂತಿಮ ವರದಿ… ಅಪ್ರಾಪ್ತ ಬಾಲಕನಿಂದ ಬೈಕ್ ಚಾಲನೆ: ತಂದೆಗೆ 25 ಸಾವಿರ ರೂ. ದಂಡ ವಿಧಿಸಿದ… ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳು: ಮಾಜಿ ಡಿಸಿಎಂ ಗೋವಿಂದ ಕಾರಜೋಳ ಲೇವಡಿ ಕೆ.ಸಿ.‌ವೇಣುಗೋಪಾಲ್ ರಾಜ್ಯದ ಸೂಪರ್ ಸಿಎಂ: ಬಿಜೆಪಿಯ ಎನ್.ರವಿಕುಮಾರ್ ಆರೋಪ ಅಕ್ರಮ ವಲಸಿಗರ ಕುರಿತು ಉನ್ನತ ಮಟ್ಟದ ತನಿಖೆಯಾಗಲಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸರ್ಕಾರದ ಜಮೀನು ಅಕ್ರಮ ಒತ್ತುವರಿಯಾದರೆ ಕಂದಾಯ ಇಲಾಖೆ ಹಾಗೂ ಪಾಲಿಕೆ ಅಧಿಕಾರಗಳ ಮೇಲೆ… ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಇತ್ತೀಚಿನ ಸುದ್ದಿ

ಸಾಮಾಜಿಕ ಧುರೀಣ ಪಮ್ಮಿ ಕೊಡಿಯಾಲ್ ಬೈಲ್ ಗೆ ದುಬೈನ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿಯಿಂದ ಗೌರವ ಪ್ರದಾನ

25/11/2022, 12:39

ಮಂಗಳೂರು(reporterkkarnataka.com): ಧಾರ್ಮಿಕ, ಸಾಮಾಜಿಕ, ಸಾಂಸ್ಕೃತಿಕ ಹಾಗೂ ರಾಜಕೀಯ ಕ್ಷೇತ್ರದಲ್ಲಿ ತನ್ನನ್ನು ತೊಡಗಿಸಿಕೊಂಡಿರುವ ಕರ್ನಾಟಕ ಜಾನಪದ ಪರಿಷತ್ತು ಬೆಂಗಳೂರು ಇದರ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಪ್ರವೀಣ್ ಕುಮಾರ್ ಕೊಡಿಯಾಲ್ ಬೈಲ್(ಪಮ್ಮಿ ಕೊಡಿಯಾಲ್ ಬೈಲ್) ಅವರಿಗೆ
ದುಬೈನ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿಯು ಗೌರವ ಪ್ರದಾನ ಮಾಡಿ ಗೌರವಿಸಿದೆ.

ದುಬೈನ ಅಲಸಫಾ ಪ್ರದೇಶದಲ್ಲಿರುವ ಜಗದ್ಗುರು ಸುತ್ತೂರು ಸಂಸ್ಥಾನ ಶಾಲಾ ಭವನದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು.
ಕರ್ನಾಟಕ ಜಾನಪದ ಪರಿಷತ್ತು ಬೆಂಗಳೂರು ಇದರ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷರಾದ ಪಮ್ಮಿ ಕೊಡಿಯಾಲ್ ಬೈಲ್ ಅವರಿಗೆ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿಯ ದುಬೈಯಲ್ಲಿ ನಡೆಯುತ್ತಿರುವ ಗಡಿನಾಡ ಉತ್ಸವದಲ್ಲಿ ಗೌರವ ಪ್ರದಾನ ಮಾಡಿ ಸನ್ಮಾನಿಸಲಾಯಿತು.

ಶಾಸಕರಾದ ರಘುನಾಥ ರಾವ್ ಮಲ್ಕಾಪುರೆ, ಪ್ರಕಾಶ್
ರಾಥೋಡ್, ರಾಜ್ಯ ಗಡಿನಾಡು ಅಭಿವೃದ್ಧಿ ನಿಗಮದ ಅಧ್ಯಕ್ಷ, ಮಾಜಿ ಐಎಎಸ್ ಅಧಿಕಾರಿ ಸಿ. ಸೋಮಶೇಖರ್, ಮಂಜೇಶ್ವರದ ಶಾಸಕ ಎ.ಕೆ.ಎಂ. ಅಶ್ರಫ್,ಕ್ವಾಲಿಟಿ ಇಂಡಿಯಾ ಫೌಂಡೇಶನ್ ಅಧ್ಯಕ್ಷ ಡಾ. ವೆಂಕಟೇಶ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು.

ಸಾಮಾಜಿಕ, ರಾಜಕೀಯ, ಧಾರ್ಮಿಕ ಕ್ಷೇತ್ರದಲ್ಲಿ, ತನ್ನನ್ನು ತಾನು ತೊಡಗಿಸಿಕೊಂಡು ಸ್ವಾರ್ಥವಿಲ್ಲದೆ ಅಹಂ ಪಡೆಯದೇ ಹೆಸರು ಬಿರುದು ಬಯಸದೆ ಉತ್ತಮ ಸಮಾಜಕ್ಕಾಗಿ ಸೇವೆ ಸಲ್ಲಿಸುತ್ತಿರುವ ಜನ ಮೆಚ್ಚಿದ ನಾಯಕ ಪ್ರವೀಣ್ ಕುಮಾರ್ ಕೊಡಿಯಾಲ್ ಬೈಲ್ ಅವರಿಗೆ
ಈ ಗೌರವ ಸಂದಾಯವಾಗಿದೆ.

ಈ ಹಿಂದೆ ಬಿಜೈ ಕೆಎಸ್ಸಾರ್ಟಿಸಿ ವಿದ್ಯಾಗಣಪತಿ ಆಟೋ ಚಾಲಕ ಮಾಲಕರ ಸಂಘ ವತಿಯಿಂದ ಪಮ್ಮಿ ಅವರನ್ನು ಸನ್ಮಾನಿಸಲಾಯಿತು. ಮಂಗಳೂರು ವಿಶ್ವವಿದ್ಯಾನಿಲಯ ತುಳು ಅಧ್ಯಯನ ಪೀಠದ ಸದಸ್ಯರಾಗಿ ದಕ್ಷಿಣ ಕನ್ನಡ ಜಿಲ್ಲಾ ಕರ್ನಾಟಕ ಜಾನಪದ ಪರಿಷತ್ ಇದರ ಅಧ್ಯಕ್ಷ ರಾಗಿರುವ ಅವರು ಕೊರೋನಾ ಸಂದರ್ಭದಲ್ಲಿ ಅದೆಷ್ಟು ಮಂದಿ ಬಡವರಿಗೆ ಅಕ್ಕಿಧಾನ್ಯದ ಕಿಟ್ ಗಳನ್ನು ವಿತರಿಸಿ ಒಂದು ಕೈಯಲ್ಲಿ ಕೊಟ್ಟದು ಇನೊಂದು ಕೈಗೆ ಗೊತ್ತಾಗ ಬಾರದು ಎನ್ನುವ ಮನೋಭಾವ ಹೊಂದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು