7:50 AM Wednesday11 - February 2026
ಬ್ರೇಕಿಂಗ್ ನ್ಯೂಸ್
ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಇತ್ತೀಚಿನ ಸುದ್ದಿ

ಆಟೋರಿಕ್ಷಾ ದರ ಏರಿಕೆ: ಮೊದಲ 1.5 ಕಿಮೀ.ಗೆ ಕನಿಷ್ಠ 35 ರೂ. ಬಾಡಿಗೆ

25/11/2022, 21:18

ಮಂಗಳೂರು(reporter Karnataka.com): ಜಿಲ್ಲೆಯ ಪ್ರಾದೇಶಿಕ ಸಾರಿಗೆ ಪ್ರಾಧಿಕಾರವು ಆಟೋ ರಿಕ್ಷಾ ಚಾಲನೆಯ ವಿವಿಧ ಅಂಶಗಳ ಬಗ್ಗೆ ಕೂಲಂಕುಶವಾಗಿ ಪರಿಶೀಲಿಸಿ ಆಟೋರಿಕ್ಷಾ ಚಾಲಕರ, ಮಾಲಕರ ಹಾಗೂ ಆಟೋ ರಿಕ್ಷಾಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರ ಹಿತದೃಷ್ಟಿಯಿಂದ ಈ ಹಿಂದೆ 2020ರ ಫೆಬ್ರವರಿ 27ರಂದು ನಿಗದಿ ಪಡಿಸಿದ ಆಟೋರಿಕ್ಷಾ ದರಗಳನ್ನು ಪುನರ್ ಪರಿಷ್ಕರಿಸಿ, 2022ರ ಡಿಸೆಂಬರ್ 01ರಿಂದ ಜಾರಿಗೆ ಬರುವಂತೆ ನಿಗದಿ ಪಡಿಸಿದೆ.

ಮೊದಲ 1.5 ಕಿ.ಮೀ. ಕನಿಷ್ಠ ದರ 35 ರೂ.ಗಳು (ಗರಿಷ್ಠ 3 ಜನ ಪ್ರಯಾಣಿಕರು), ನಂತರದ ಪ್ರತಿ ಕಿ.ಮೀ. ದರ 20 ರೂ.ಗಳು (ಗರಿಷ್ಠ 3 ಜನ ಪ್ರಯಾಣಿಕರು), ಕಾಯುವ ದರ ಮೊದಲ 15 ನಿಮಿಷ ಉಚಿತ, ನಂತರದ 15 ನಿಮಿಷದವರೆಗೆ 5 ರೂ.ಗಳು. ಪ್ರಯಾಣಿಕರ ಸರಕಿಗೆ (ಲಗೇಜ್) ಒಬ್ಬ ಪ್ರಯಾಣಿಕ ಕಡ್ಡಾಯವಾಗಿ ಜೊತೆ ಇರಬೇಕು. ಮೊದಲ 20 ಕಿ.ಗ್ರಾಂ. ಗಳಿಗೆ ಉಚಿತ ಹಾಗೂ ನಂತರದ ಪ್ರತಿ 10 ಕಿ.ಗ್ರಾಂ. ಅಥವಾ ಅದರ ಭಾಗಕ್ಕೆ 5 ರೂ.ಗಳು. ರಾತ್ರಿ ವೇಳೆ ದರ 10 ಗಂಟೆಯಿಂದ ಬೆಳಗಿನ ಜಾವ 5ರ ವರೆಗೆ ಮಾತ್ರ ಈ ಮೇಲಿನ ದರದ ಒಂದೂವರೆ ಪಟ್ಟು ದರವನ್ನು ಪ್ರಯಾಣಿಕರಿಂದ ಪಡೆಯಲು ಅವಕಾಶವಿದೆ.

2022ರ ಡಿಸೆಂಬರ್ 1ರಿಂದ ಒಂದು ತಿಂಗಳೊಳಗೆ ಎಲ್ಲಾ ಆಟೋ ರಿಕ್ಷಾ ಫೇರ್ ಮೀಟರ್‍ ಗಳಲ್ಲಿ ಸತ್ಯಾಪನೆ ಮಾಡಿಸಿ ಮುದ್ರೆ ಹಾಕಿಸಿಕೊಂಡು ತೂಕ ಮತ್ತು ಮಾಪನ ಶಾಸ್ತ್ರ ಇಲಾಖೆಯಿಂದ ದೃಢೀಕರಿಸಿಕೊಳ್ಳಬೇಕು. ಪ್ರಾದೇಶಿಕ ಸಾರಿಗೆ ಪ್ರಾಧಿಕಾರದಿಂದ ಅನುಮೋದಿಸಿದ ದರ ಪಟ್ಟಿಯನ್ನು ಪ್ರತಿಯೊಂದು ಆಟೋರಿಕ್ಷಾಗಳಲ್ಲಿಯೂ ಪ್ರದರ್ಶಿಸಬೇಕು. ಆಟೋರಿಕ್ಷಾ ಚಾಲಕ ಮಾಲೀಕರು ತಮ್ಮ ಆಟೋ ರಿಕ್ಷಾಗಳ ಪ್ಲಾಗ್ ಮೀಟರ್‍ ಮರು ನಿಗದಿ ಪಡಿಸಿದ ದರವನ್ನು ರಿಕ್ಯಾಲಿಬರೇಷನ್ ಹಾಗೂ ಸೀಲ್ ಮಾಡಿಸಿಕೊಂಡು ಪ್ರಯಾಣಿಕರಿಂದ ಪ್ರಯಾಣಕ್ಕೆ ತಕ್ಕಂತೆ ಪರಿಷ್ಕರಿಸಿದ ಮೀಟರ್ ದರವನ್ನು ಪಡೆದುಕೊಳ್ಳುವಂತೆ ತಿಳಿಸಲಾಗಿದೆ. ಪ್ರಯಾಣಿಕರು ಪ್ರಯಾಣಿಸುವ ಸ್ಥಳಗಳಿಗೆ ಹೋಗಲು ನಿರಾಕರಿಸಿದಲ್ಲಿ ಹಾಗೂ ಸಾರ್ವಜನಿಕ ಪ್ರಯಾಣಿಕರೊಂದಿಗೆ ಅಸಭ್ಯವಾಗಿ ವರ್ತಿಸಿದಲ್ಲಿ, ಅಂತಹ ಚಾಲಕರ ವಿರುದ್ಧ ಕಾನೂನಿನಂತೆ ದಂಡ ವಿಧಿಸುವುದು, ಪರವಾನಿಗೆ ಅಮಾನತ್ತು, ರದ್ದತಿ ಕುರಿತು ಕ್ರಮ ಕೈಗೊಳ್ಳುವುದು ಹಾಗೂ ಇತರೆ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಪೊಲೀಸ್ ಇಲಾಖಾ ಅಧಿಕಾರಿಗಳಿಗೆ ಹಾಗೂ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ನಿರ್ದೇಶಿಸಲಾಗಿದೆ.
ಅಧಿಕ ದರ ವಸೂಲು ಮಾಡಿದಲ್ಲಿ ಮಂಗಳೂರು ಕಚೇರಿ ದೂ.ಸಂಖ್ಯೆ: 0824-2220577, ಪುತ್ತೂರು ದೂ.ಸಂ: 08251-230729, ಹಾಗೂ ಬಂಟ್ವಾಳ ದೂ.ಸಂ: 08255-280504
ಅವರಿಗೆ ಸಾರ್ವಜನಿಕರು ದೂರುಗಳನ್ನು ನೀಡುವಂತೆ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು