6:50 AM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಜನರಿಗೆ ಮೂಲಸೌಕರ್ಯ ಒದಗಿಸುವುದು ನಮ್ಮ ಜವಾಬ್ದಾರಿ: ಶಾಸಕ ವೇದವ್ಯಾಸ ಕಾಮತ್

25/11/2022, 21:28

ಮಂಗಳೂರು(reporterkarnataka.com): ಜನರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವುದು ನಮ್ಮ ಜವಾಬ್ದಾರಿ, ಅದನ್ನು ನಮ್ಮ ಆಡಳಿತ ವ್ಯವಸ್ಥೆಯ ಮೂಲಕ ಪೂರ್ಣಗೊಳಿಸುವ ಕಾರ್ಯ ಆಗುತ್ತಿದೆ ಎಂದು ಶಾಸಕ ವೇದವ್ಯಾಸ ಕಾಮತ್ ಹೇಳಿದರು.

ನಗರದ ಕುಲಶೇಖರ ವೀರನಾರಾಯಣ ಕಟ್ಟೆಯ ಬಳಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ಜನರಿಗೆ ನಮ್ಮ ಆಡಳಿತದ ಮೇಲೆ ಸಂಪೂರ್ಣ ಭರವಸೆಯಿದೆ. ಜನರ ಬೇಡಿಕೆಗಳನ್ನು ಈಡೇರಿಸುವ ದೃಷ್ಟಿಯಿಂದ ನಮ್ಮ ಸರಕಾರವು ಬದ್ಧವಾಗಿದೆ ಎಂದು ನುಡಿದರು.

ಮಂಗಳೂರು ನಗರದ ಸಮಗ್ರ ಅಭಿವೃದ್ಧಿಯ ದೃಷ್ಟಿಯಿಂದ ಕೋಟ್ಯಂತರ ರೂಪಾಯಿ ಅನುದಾನ ತರಲಾಗಿದೆ. ಹಂತ ಹಂತವಾಗಿ ಅನುದಾನಗಳನ್ನು ಬಳಸಿ ನಗರದ ಉನ್ನತೀಕರಣ ದೃಷ್ಟಿಯಿಂದ ಕಾರ್ಯ ನಿರ್ವಹಿಸಲಾಗುವುದು. ಮುಂಬರುವ ದಿನಗಳಲ್ಲಿ ದೇಶದ ಅಭಿವೃದ್ಧಿ ಹೊಂದಿದ ನಗರವಾಗಿ ಮಂಗಳೂರು ನಗರವು ರೂಪುಗೊಳ್ಳಲಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಸ್ಥಾಯಿ ಸಮಿತಿಯ ಅಧ್ಯಕ್ಷರಾದ‌ ಕಿಶೋರ್ ಕೊಟ್ಟಾರಿ, ಶಕಿಲಾ ಕಾವಾ, ಸ್ಥಳೀಯ ಕಾರ್ಪೋರೇಟರ್ ಭಾಸ್ಕರ್ ಮೈೂಯ್ಲಿ, ಪಾಲಿಕೆ ನಾಮನಿರ್ದೇಶಿತ ಸದಸ್ಯರಾದ ಭಾಸ್ಕರ್ ಚಂದ್ರ ಶೆಟ್ಟಿ, ಮುಖಂಡರಾದ ಅಜಯ್ ಕುಲಶೇಖರ, ಮಂಜುಳಾ ರಾವ್, ವೀತು, ಅನಿಲ್ ರಾವ್, ಹರಿಣಿ ಪ್ರೇಮ್, ವಸಂತ್ ಆಚಾರ್ಯ, ಉದಯ್ ಚೌಕಿ, ಗೋಪಿಯಕ್ಕ, ಸುಶಾಂತ್ ಕೋಟಿಮುರ, ಯಶೋದ, ಅರುಣ್ ರಾವ್, ದಿನೇಶ್ ಜ್ಯೋತಿನಗರ, ಯೋಗಿಶ್ ಚೌಕಿ, ದಿನೇಶ್, ಅಶ್ವಿತ್ ಕೊಟ್ಟಾರಿ, ಭಾರತೀ, ಉಷಾ, ಮೆಲ್ವಿನ್, ನಾಗರಾಜ್ ಆಚಾರ್ಯ, ಪ್ರಾನ್ಸಿಸ್, ಯೋಗಿಶ್ ಚೌಕಿ, ಅಭಿಲಾಷ್, ಸಮರ್ಥ್, ಅಂಕಿತ್, ಲೋಕೇಶ್ ಚೌಕಿ, ಅಶ್ವಿನ್ ಅಮಿನ್ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು