2:11 AM Thursday30 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ಜನರಿಗೆ ಮೂಲಸೌಕರ್ಯ ಒದಗಿಸುವುದು ನಮ್ಮ ಜವಾಬ್ದಾರಿ: ಶಾಸಕ ವೇದವ್ಯಾಸ ಕಾಮತ್

25/11/2022, 21:28

ಮಂಗಳೂರು(reporterkarnataka.com): ಜನರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವುದು ನಮ್ಮ ಜವಾಬ್ದಾರಿ, ಅದನ್ನು ನಮ್ಮ ಆಡಳಿತ ವ್ಯವಸ್ಥೆಯ ಮೂಲಕ ಪೂರ್ಣಗೊಳಿಸುವ ಕಾರ್ಯ ಆಗುತ್ತಿದೆ ಎಂದು ಶಾಸಕ ವೇದವ್ಯಾಸ ಕಾಮತ್ ಹೇಳಿದರು.

ನಗರದ ಕುಲಶೇಖರ ವೀರನಾರಾಯಣ ಕಟ್ಟೆಯ ಬಳಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ಜನರಿಗೆ ನಮ್ಮ ಆಡಳಿತದ ಮೇಲೆ ಸಂಪೂರ್ಣ ಭರವಸೆಯಿದೆ. ಜನರ ಬೇಡಿಕೆಗಳನ್ನು ಈಡೇರಿಸುವ ದೃಷ್ಟಿಯಿಂದ ನಮ್ಮ ಸರಕಾರವು ಬದ್ಧವಾಗಿದೆ ಎಂದು ನುಡಿದರು.

ಮಂಗಳೂರು ನಗರದ ಸಮಗ್ರ ಅಭಿವೃದ್ಧಿಯ ದೃಷ್ಟಿಯಿಂದ ಕೋಟ್ಯಂತರ ರೂಪಾಯಿ ಅನುದಾನ ತರಲಾಗಿದೆ. ಹಂತ ಹಂತವಾಗಿ ಅನುದಾನಗಳನ್ನು ಬಳಸಿ ನಗರದ ಉನ್ನತೀಕರಣ ದೃಷ್ಟಿಯಿಂದ ಕಾರ್ಯ ನಿರ್ವಹಿಸಲಾಗುವುದು. ಮುಂಬರುವ ದಿನಗಳಲ್ಲಿ ದೇಶದ ಅಭಿವೃದ್ಧಿ ಹೊಂದಿದ ನಗರವಾಗಿ ಮಂಗಳೂರು ನಗರವು ರೂಪುಗೊಳ್ಳಲಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಸ್ಥಾಯಿ ಸಮಿತಿಯ ಅಧ್ಯಕ್ಷರಾದ‌ ಕಿಶೋರ್ ಕೊಟ್ಟಾರಿ, ಶಕಿಲಾ ಕಾವಾ, ಸ್ಥಳೀಯ ಕಾರ್ಪೋರೇಟರ್ ಭಾಸ್ಕರ್ ಮೈೂಯ್ಲಿ, ಪಾಲಿಕೆ ನಾಮನಿರ್ದೇಶಿತ ಸದಸ್ಯರಾದ ಭಾಸ್ಕರ್ ಚಂದ್ರ ಶೆಟ್ಟಿ, ಮುಖಂಡರಾದ ಅಜಯ್ ಕುಲಶೇಖರ, ಮಂಜುಳಾ ರಾವ್, ವೀತು, ಅನಿಲ್ ರಾವ್, ಹರಿಣಿ ಪ್ರೇಮ್, ವಸಂತ್ ಆಚಾರ್ಯ, ಉದಯ್ ಚೌಕಿ, ಗೋಪಿಯಕ್ಕ, ಸುಶಾಂತ್ ಕೋಟಿಮುರ, ಯಶೋದ, ಅರುಣ್ ರಾವ್, ದಿನೇಶ್ ಜ್ಯೋತಿನಗರ, ಯೋಗಿಶ್ ಚೌಕಿ, ದಿನೇಶ್, ಅಶ್ವಿತ್ ಕೊಟ್ಟಾರಿ, ಭಾರತೀ, ಉಷಾ, ಮೆಲ್ವಿನ್, ನಾಗರಾಜ್ ಆಚಾರ್ಯ, ಪ್ರಾನ್ಸಿಸ್, ಯೋಗಿಶ್ ಚೌಕಿ, ಅಭಿಲಾಷ್, ಸಮರ್ಥ್, ಅಂಕಿತ್, ಲೋಕೇಶ್ ಚೌಕಿ, ಅಶ್ವಿನ್ ಅಮಿನ್ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು