3:28 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಮೊಡಂಕಾಪು ಕಾರ್ಮೆಲ್ ಕಾಲೇಜಿನ 2022- 23ನೇ ಸಾಲಿನ ರಾಷ್ಟೀಯ ಸೇವಾ ಯೋಜನಾ ಘಟಕ ಉದ್ಘಾಟನೆ

25/11/2022, 22:37

ಬಂಟ್ವಾಳ(reporterkarnataka.com): ಮೊಡಂಕಾಪು ಕಾರ್ಮೆಲ್ ಕಾಲೇಜಿನ 2022- 23ನೇ ಶೈಕ್ಷಣಿಕ ಸಾಲಿನ ರಾಷ್ಟೀಯ ಸೇವಾ ಯೋಜನಾ ಘಟಕದ ಉದ್ಘಾಟನೆಯು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಮೂಡ ಸರಕಾರಿ ಪದವಿಪೂರ್ವ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಬಾಲಕೃಷ್ಣ ನಾಯ್ಕ್ ಉದ್ಘಾಟಿಸಿ ಮಾತನಾಡಿದ ಅವರು, ಎನ್ ಎಸ್ಎಸ್ ಯುವ ಜನರಿಗೆ ಸಮಾಜದಲ್ಲಿ ಹಲವು ಬದಲಾವಣೆಗಳನ್ನು ತರಲು ಸಾಧ್ಯವಿದೆ. ಬದಲಾವಣೆ ನಮ್ಮಿಂದಲೇ ಆರಂಭವಾಗಬೇಕು.ಆಗ ಮಾತ್ರ ಎನ್.ಎಸ್.ಎಸ್ ನಂತಹ ಸಂಘಗಳ ಕೆಲಸ ಸಾರ್ಥಕವಾಗುತ್ತದೆ.ಎಂದು ಹೇಳಿದರು.
ಕಾಲೇಜಿನ ಪ್ರಾಂಶುಪಾಲೆ ಡಾ.ಲತಾ ಫೆರ್ನಾಂಡಿಸ್ ಎ.ಸಿ. ಎನ್.ಎಸ್,ಎಸ್ ಸ್ವಯಂ ಸೇವಕ,ಸೇವಕಿಯರಿಗೆ ಪ್ರತಿಜ್ಞಾವಿಧಿ ಬೋಧಿಸಿದರು.

ರಾ.ಸೆ.ಯೋ ಯೋಜನಾಧಿಕಾರಿ ಕೀರ್ತನ್ ,ಎನ್.ಎಸ್.ಎಸ್ ಘಟಕದ ನಾಯಕಿ ಅಸಿಯಾ, ಘಟಕದ ನಾಯಕ ಅಕ್ಷಿತ್ ಪೂಜಾರಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಕಾಲೇಜಿನ ನಿಕಟ ಪೂರ್ವ ರಾ.ಸೇ.ಯೋ ಯೋಜನಾಧಿಕಾರಿ ಮಧುರ. ಕೆ ಅವರನ್ನು ಸನ್ಮಾನಿಸಲಾಯಿತು.

ರಾಷ್ಟೀಯ ಯೋಜನಾಧಿಕಾರಿ ಕೀರ್ತನ್ ಸ್ವಾಗತಿಸಿದರು. ಘಟಕದ ನಾಯಕಿ ಅಸಿಯಾ ವಂದಿಸಿ,ಸ್ವಯಂಸೇವಕ ಅಫ್ರಿಜ್ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು