1:14 AM Wednesday12 - November 2025
ಬ್ರೇಕಿಂಗ್ ನ್ಯೂಸ್
ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ… ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ… ಕುಶಾಲನಗರದಲ್ಲಿ 8.60 ಕೋಟಿ ವೆಚ್ಚದ ಪ್ರಜಾಸೌಧ ತಾಲೂಕು ಆಡಳಿತ ಭವನ ನಿರ್ಮಾಣಕ್ಕೆ ಭೂಮಿ… ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು; ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ… Mysore | ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆ: ಕೊಡಗು ಜಿಲ್ಲೆಯ ಇಬ್ಬರ… ಕೇಂದ್ರ ಸರ್ಕಾರದ ಸಾಲ ಕೊಡಿಸುವುದಾಗಿ ಮಹಿಳೆಯರಿಗೆ ಲಕ್ಷಕ್ಕೂ ಅಧಿಕ ವಂಚನೆ: ಮಡಿಕೇರಿ ನಿವಾಸಿ… Sports | ಖೇಲೋ ಇಂಡಿಯಾ ಮಹಿಳಾ ಹಾಕಿ ಟೂರ್ನಿ: ಕುಶಾಲನಗರದ ದಿಶಾ ನಿಡ್ಯಮಲೆ… ಸದ್ಯದಲ್ಲಿ ಸರ್ಕಾರಿ ಶಾಲೆಗಳಿಗೆ ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪ

ಇತ್ತೀಚಿನ ಸುದ್ದಿ

ಉಡುಪಿ: ಹೊಮ್ ನರ್ಸ್ ನಿಂದ ವೃದ್ಧೆಯ 1.45 ಲಕ್ಷ ರೂ ಮೌಲ್ಯದ ಚಿನ್ನದ ಸರ ಕಳವು

26/11/2022, 17:33

ಉಡುಪಿ(reporterkarnataka.com): ವಯೋವೃದ್ಧರೊಬ್ಬರ ನೋಡಿಕೊಳ್ಳಲು ನೇಮಿಸಿದ್ದ ಹೋಮ್ ನರ್ಸ್ ವೋರ್ವಳು, ವೃದ್ಧೆಯ ಕುತ್ತಿಗೆಯಲ್ಲಿದ್ದ 1.45 ಲಕ್ಷ ಮೌಲ್ಯದ ಚಿನ್ನದ ಸರ ಕಳವು ಮಾಡಿಕೊಂಡು ಪರಾರಿಯಾದ ಘಟನೆ ಉಡುಪಿ ತಾಲೂಕಿನ ಆತ್ರಾಡಿ ಗ್ರಾಮದ ಮದಗ ಎಂಬಲ್ಲಿ ನಡೆದಿದೆ.

ಮದಗದ ಚೆನ್ನಿಬೆಟ್ಟು ನಿವಾಸಿ ವಸಂತ ಶೆಟ್ಟಿ ಅವರು ತಮ್ಮ 98 ವರ್ಷದ ತಾಯಿ ಸರಸ್ವತಿ ಅವರ ಆರೈಕೆ ಮಾಡಿ ನೋಡಿಕೊಳ್ಳಲು ಉಡುಪಿ ಉಷಾ ಮ್ಯಾರೇಜ್ ಬ್ಯುರೋ & ಜಾಬ್ ಲಿಂಕ್ಸ್ ಏಜೆನ್ಸಿ ಮುಖಾಂತರ ರೇಖಾ ಹೆಬ್ಬಳ್ಳಿ ಎಂಬಾಕೆಯನ್ನು ಹೋಂ ನರ್ಸ್ ಆಗಿ ನೇಮಿಸಿದ್ದರು.

ಅಕ್ಟೋಬರ್ 20 ರಿಂದ ರೇಖಾ ಹೆಬ್ಬಳ್ಳಿ, ಸರಸ್ವತಿ ಅವರ ಆರೈಕೆ ಮಾಡಿ ನೋಡಿಕೊಂಡಿದ್ದರು. ನ.21 ರಂದು ಸಂಜೆ ವೇಳೆ ರೇಖಾ ಹೆಬ್ಬಳ್ಳಿ ಯಾರಿಗೂ ಹೇಳದೇ ಮನೆಯಿಂದ ಹೋಗಿದ್ದಳು. ಬಳಿಕ ವಸಂತ ಶೆಟ್ಟಿ ಅವರು ತಾಯಿಯ ಬಳಿ ಹೋಗಿ ನೋಡಿದಾಗ ಅವರ ಕುತ್ತಿಗೆಯಲ್ಲಿದ್ದ 1,45, ಲಕ್ಷ ರೂ. ಮೌಲ್ಯದ ಚಿನ್ನದ ಚೈನ್ ಕಂಡು ಬಂದಿಲ್ಲ. ಈ ಬಗ್ಗೆ ರೇಖಾಳಿಗೆ ಫೋನ್ ಮಾಡಿದಾಗ ಆಕೆಯು ಫೋನ್ ಸ್ವೀಕರಿಸುತ್ತಿರಲಿಲ್ಲ. ತಾಯಿ ಚೈನ್ ಅನ್ನು ರೇಖಾ ಅವರೇ ಕಳವು ಮಾಡಿಕೊಂಡು ಹೋಗಿರುವ ಸಂಶಯ ಇದೆ ಎಂದು ನೀಡಿದ ದೂರಿನಂತೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು