10:58 PM Sunday19 - May 2024
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ: ಮೇ 20ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನ ನಟಿ ಪವಿತ್ರಾ ಜಯರಾಂ ಸ್ನೇಹಿತ ಚಂದ್ರಕಾಂತ್ ಆತ್ಮಹತ್ಯೆ: ಸ್ನೇಹಿತೆ ಸಾವನ್ನಪ್ಪಿ ವಾರದೊಳಗೆ ಚಂದ್ರು… ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ…

ಇತ್ತೀಚಿನ ಸುದ್ದಿ

ದಲ್ಲಾಳಿಗಳ ಕಾಟ: ಅಧಿಕಾರಿಗಳು ಮೌನ; ಸಾವಿರಾರು ಬೆಲೆಯ ರಸಗೊಬ್ಬರ ಖರೀದಿಸಿದರೆ ಮಾತ್ರ ಯೂರಿಯಾ!!

26/11/2022, 19:32

ರಾಹುಲ್ ಅಥಣಿ ಬೆಳಗಾವಿ

info.reporterkarnataka@gamil.com

ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ನದಿ ಇಂಗಳಗಾವ
ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ರಸಗೊಬ್ಬರ ಖರೀದಿಸಿದರೆ ಮಾತ್ರ ಯೂರಿಯಾ ನೀಡುತ್ತಿದ್ದಾರೆ ಎಂದು ರೈತರು ಅಳಲು ವ್ಯಕ್ತಪಡಿಸಿದ್ದಾರೆ.


ನಮಗೆ ಯೂರಿಯಾ ತರಲು ದುಡ್ಡು ಇಲ್ಲ ಸ್ವಾಮಿ!ಅದರ ಜೊತೆ ಸಾವಿರಾರು ರೂ ಬೆಲೆ ಬಾಳುವ ಕಳಪೆ ಗೊಬ್ಬರ ಖರೀದಿಸಬೇಕು. ಇಲ್ಲಂದ್ರೆ ಯೂರಿಯಾ ಕೊಡಲ್ಲ ಎಂದು ರೈತರು ತಮ್ಮ ಕಷ್ಟ ಹೇಳಿಕೊಂಡಿದ್ದಾರೆ.

ಯೂರಿಯಾ ಗೊಬ್ಬರ ಜೊತೆ ಕಳಪೆ ಗುಣಮಟ್ಟದ ರಾಸಾಯನಿಕ ಲಿಂಕ್ ಕಡ್ಡಾಯವಾಗಿದೆ. ದಲ್ಲಾಳಿಗಳ ಅಟ್ಟಹಾಸದಿಂದ
ರೈತರಿಗೆ ಪ್ರಾಣ ಸಂಕಟ ಉಂಟಾಗಿದೆ. ಇದರಿಂದ ನದಿ ಇಂಗಳಗಾವ ಗ್ರಾಮದಲ್ಲಿ ರೈತರಿಗೆ ಭಾರಿ ಅನ್ಯಾಯವಾಗಿದೆ.

ಅಥಣಿ ಪಟ್ಟಣ ಸೇರಿ ತಾಲೂಕಿನ ಹಲವು ಗ್ರಾಮಗಳಲ್ಲಿ ಇದೆ ಸಮಸ್ಯೆ ಇದೆ. ಅಧಿಕಾರಿಗಳೇ ಇಂತಹ ಹಣಧಾಹಿ ದಲ್ಲಾಳಿ ಹಾಗೂ ಕಂಪನಿಗಳಿಗೆ ಮುಗುದಾರ ಯಾವಾಗ ಎಂದು ರೈತರು ಪ್ರಶ್ನಿಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು