7:49 AM Tuesday25 - August 2026
ಬ್ರೇಕಿಂಗ್ ನ್ಯೂಸ್
ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು

ಇತ್ತೀಚಿನ ಸುದ್ದಿ

ದಲ್ಲಾಳಿಗಳ ಕಾಟ: ಅಧಿಕಾರಿಗಳು ಮೌನ; ಸಾವಿರಾರು ಬೆಲೆಯ ರಸಗೊಬ್ಬರ ಖರೀದಿಸಿದರೆ ಮಾತ್ರ ಯೂರಿಯಾ!!

26/11/2022, 19:32

ರಾಹುಲ್ ಅಥಣಿ ಬೆಳಗಾವಿ

info.reporterkarnataka@gamil.com

ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ನದಿ ಇಂಗಳಗಾವ
ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ರಸಗೊಬ್ಬರ ಖರೀದಿಸಿದರೆ ಮಾತ್ರ ಯೂರಿಯಾ ನೀಡುತ್ತಿದ್ದಾರೆ ಎಂದು ರೈತರು ಅಳಲು ವ್ಯಕ್ತಪಡಿಸಿದ್ದಾರೆ.


ನಮಗೆ ಯೂರಿಯಾ ತರಲು ದುಡ್ಡು ಇಲ್ಲ ಸ್ವಾಮಿ!ಅದರ ಜೊತೆ ಸಾವಿರಾರು ರೂ ಬೆಲೆ ಬಾಳುವ ಕಳಪೆ ಗೊಬ್ಬರ ಖರೀದಿಸಬೇಕು. ಇಲ್ಲಂದ್ರೆ ಯೂರಿಯಾ ಕೊಡಲ್ಲ ಎಂದು ರೈತರು ತಮ್ಮ ಕಷ್ಟ ಹೇಳಿಕೊಂಡಿದ್ದಾರೆ.

ಯೂರಿಯಾ ಗೊಬ್ಬರ ಜೊತೆ ಕಳಪೆ ಗುಣಮಟ್ಟದ ರಾಸಾಯನಿಕ ಲಿಂಕ್ ಕಡ್ಡಾಯವಾಗಿದೆ. ದಲ್ಲಾಳಿಗಳ ಅಟ್ಟಹಾಸದಿಂದ
ರೈತರಿಗೆ ಪ್ರಾಣ ಸಂಕಟ ಉಂಟಾಗಿದೆ. ಇದರಿಂದ ನದಿ ಇಂಗಳಗಾವ ಗ್ರಾಮದಲ್ಲಿ ರೈತರಿಗೆ ಭಾರಿ ಅನ್ಯಾಯವಾಗಿದೆ.

ಅಥಣಿ ಪಟ್ಟಣ ಸೇರಿ ತಾಲೂಕಿನ ಹಲವು ಗ್ರಾಮಗಳಲ್ಲಿ ಇದೆ ಸಮಸ್ಯೆ ಇದೆ. ಅಧಿಕಾರಿಗಳೇ ಇಂತಹ ಹಣಧಾಹಿ ದಲ್ಲಾಳಿ ಹಾಗೂ ಕಂಪನಿಗಳಿಗೆ ಮುಗುದಾರ ಯಾವಾಗ ಎಂದು ರೈತರು ಪ್ರಶ್ನಿಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು