12:34 PM Wednesday24 - September 2025
ಬ್ರೇಕಿಂಗ್ ನ್ಯೂಸ್
Kodagu | ವಿರಾಜಪೇಟೆ, ಕುಶಾಲನಗರ ಮತ್ತು ಹುದಿಕೇರಿ ಆಸ್ಪತ್ರೆ ಮೇಲ್ದರ್ಜೆಗೆ: ಆರೋಗ್ಯ ಸಚಿವ… ಪಂಚ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಮಹಿಳೆಯರ ಬದುಕು ಸುಧಾರಣೆ: ಮಹಿಳಾ ದಸರಾ ಉದ್ಘಾಟಿಸಿ… ಪೊನ್ನಂಪೇಟೆ ಕೋಣಗೇರಿಯಲ್ಲಿ ಸೈನಿಕ ಪತಿಯಿಂದಲೇ ಪತ್ನಿಗೆ ಗುಂಡು: ಮೈಸೂರಿಗೆ ರವಾನೆ ಗೋಣಿಕೊಪ್ಪಲು ಬಿಟ್ಟಂಗಾಲ ಮುಖ್ಯರಸ್ತೆಯಲ್ಲಿ ಖಾಸಗಿ ಬಸ್ – ಜೀಪು ಅಪಘಾತ: ಅದೃಷ್ಟವಶಾತ್ ಎಲ್ಲರೂ… Kodagu | ಐತಿಹಾಸಿಕ ಮಡಿಕೇರಿ ದಸರಾಕ್ಕೆ ಚಾಲನೆ: 4 ಶಕ್ತಿ ದೇವತೆಗಳಿಗೆ ವಿಶೇಷ… ಮುಂದಿನ ಒಲಂಪಿಕ್ಸ್ ಪದಕ ವಿಜೇತರಿಗೆ ಸರ್ಕಾರದಿಂದ 6 ಕೋಟಿ ನಗದು ಬಹುಮಾನ: ಮುಖ್ಯಮಂತ್ರಿ… ಜಿಎಸ್ ಟಿ ಜಾರಿ ಮಾಡಿದ್ದೂ ಮೋದಿ, ಜಿಎಸ್ ಟಿ ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ,… ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ

ಇತ್ತೀಚಿನ ಸುದ್ದಿ

ದಲ್ಲಾಳಿಗಳ ಕಾಟ: ಅಧಿಕಾರಿಗಳು ಮೌನ; ಸಾವಿರಾರು ಬೆಲೆಯ ರಸಗೊಬ್ಬರ ಖರೀದಿಸಿದರೆ ಮಾತ್ರ ಯೂರಿಯಾ!!

26/11/2022, 19:32

ರಾಹುಲ್ ಅಥಣಿ ಬೆಳಗಾವಿ

info.reporterkarnataka@gamil.com

ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ನದಿ ಇಂಗಳಗಾವ
ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ರಸಗೊಬ್ಬರ ಖರೀದಿಸಿದರೆ ಮಾತ್ರ ಯೂರಿಯಾ ನೀಡುತ್ತಿದ್ದಾರೆ ಎಂದು ರೈತರು ಅಳಲು ವ್ಯಕ್ತಪಡಿಸಿದ್ದಾರೆ.


ನಮಗೆ ಯೂರಿಯಾ ತರಲು ದುಡ್ಡು ಇಲ್ಲ ಸ್ವಾಮಿ!ಅದರ ಜೊತೆ ಸಾವಿರಾರು ರೂ ಬೆಲೆ ಬಾಳುವ ಕಳಪೆ ಗೊಬ್ಬರ ಖರೀದಿಸಬೇಕು. ಇಲ್ಲಂದ್ರೆ ಯೂರಿಯಾ ಕೊಡಲ್ಲ ಎಂದು ರೈತರು ತಮ್ಮ ಕಷ್ಟ ಹೇಳಿಕೊಂಡಿದ್ದಾರೆ.

ಯೂರಿಯಾ ಗೊಬ್ಬರ ಜೊತೆ ಕಳಪೆ ಗುಣಮಟ್ಟದ ರಾಸಾಯನಿಕ ಲಿಂಕ್ ಕಡ್ಡಾಯವಾಗಿದೆ. ದಲ್ಲಾಳಿಗಳ ಅಟ್ಟಹಾಸದಿಂದ
ರೈತರಿಗೆ ಪ್ರಾಣ ಸಂಕಟ ಉಂಟಾಗಿದೆ. ಇದರಿಂದ ನದಿ ಇಂಗಳಗಾವ ಗ್ರಾಮದಲ್ಲಿ ರೈತರಿಗೆ ಭಾರಿ ಅನ್ಯಾಯವಾಗಿದೆ.

ಅಥಣಿ ಪಟ್ಟಣ ಸೇರಿ ತಾಲೂಕಿನ ಹಲವು ಗ್ರಾಮಗಳಲ್ಲಿ ಇದೆ ಸಮಸ್ಯೆ ಇದೆ. ಅಧಿಕಾರಿಗಳೇ ಇಂತಹ ಹಣಧಾಹಿ ದಲ್ಲಾಳಿ ಹಾಗೂ ಕಂಪನಿಗಳಿಗೆ ಮುಗುದಾರ ಯಾವಾಗ ಎಂದು ರೈತರು ಪ್ರಶ್ನಿಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು